AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2022: ಆಗಸ್ಟ್ 15ರ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಗಳ ವಿವರ

ಪ್ರಧಾನಿ ಮೋದಿ ಬೆಳಗ್ಗೆ 7 ಗಂಟೆ‌ 6 ನಿಮಿಷಕ್ಕೆ ರಾಜ್ ಘಾಟ್ ತಲುಪಲಿದ್ದಾರೆ. ಗಾಂಧಿ ಸಮಾಧಿಗೆ ನಮಿಸಿ ರೆಡ್ ಪೋರ್ಟ್ ಗೆ ತೆರಳುತ್ತಾರೆ. 7.14ಕ್ಕೆ ರಾಜ್ ಘಾಟ್ ನಿಂದ ಹೊರಟಿ 7.18ಕ್ಕೆ‌ ಕೆಂಪುಕೋಟೆ ತಲುಪುತ್ತಾರೆ.

Independence Day 2022: ಆಗಸ್ಟ್ 15ರ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಗಳ ವಿವರ
ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ
Follow us
TV9 Web
| Updated By: ಆಯೇಷಾ ಬಾನು

Updated on:Aug 14, 2022 | 10:10 PM

ದೆಹಲಿ: 75ನೇ ವರ್ಷದ ಸ್ವಾತಂತ್ರ್ಯ ಅಮೃತಮಹೋತ್ಸವ(Azadi Ka Amrit Mahotsav) ಆಚರಿಸಲು ಇಡೀ ದೇಶ ಸಿದ್ಧವಾಗಿದೆ. ಕೇಂದ್ರ ಸರ್ಕಾರ ಸಕಲ ಸಿದ್ಧತೆ ಮಾಡ್ಕೊಂಡಿದೆ. ನಾಳೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಆಗಸ್ಟ್ 15ರ ಬೆಳಗ್ಗೆ 7.30ಕ್ಕೆ ಧ್ವಜಾರೋಹಣ ಮಾಡಲಿದ್ದು ಮೋದಿ ಅವರು ಪ್ರಧಾನಿಯಾಗಿ 9ನೇ ಬಾರಿಗೆ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಹಣ ಬಳಿಕ ದೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಆಗಸ್ಟ್ 15ರ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಗಳ ವಿವರ

ಪ್ರಧಾನಿ ಮೋದಿ ಬೆಳಗ್ಗೆ 7 ಗಂಟೆ‌ 6 ನಿಮಿಷಕ್ಕೆ ರಾಜ್ ಘಾಟ್ ತಲುಪಲಿದ್ದಾರೆ. ಗಾಂಧಿ ಸಮಾಧಿಗೆ ನಮಿಸಿ ರೆಡ್ ಪೋರ್ಟ್ ಗೆ ತೆರಳುತ್ತಾರೆ. 7.14ಕ್ಕೆ ರಾಜ್ ಘಾಟ್ ನಿಂದ ಹೊರಟಿ 7.18ಕ್ಕೆ‌ ಕೆಂಪುಕೋಟೆ ತಲುಪುತ್ತಾರೆ. ಸೇನಾಪಡೆಗಳಿಂದ ಗಾರ್ಡ್ ಆಫ್ ಹಾನರ್ ಪಡೆದು 7.30ಕ್ಕೆ‌ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. 7.33ರಿಂದ ಪ್ರಧಾನಿ ಮೋದಿ ಭಾಷಣ ಆರಂಭಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಏಳು ಸಾವಿರ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಕೇಂದ್ರಿಯ ಮೀಸಲು ಪಡೆ ಒಳಗೊಂಡಂತೆ ಹತ್ತು ಸಾವಿರ ಪೊಲೀಸ್ ಸಿಬ್ಬಂದಿಯಿಂದ ಭದ್ರತೆ ಕೈಗೊಳ್ಳಲಾಗಿದೆ. FRS ( Facial recognition system ) ತಂತ್ರಜ್ಞಾನ ಹೊಂದಿರುವ ಸಿಸಿಟಿವಿ ಅಳವಡಿಸಲಾಗಿದೆ. ಮೇಲುಸ್ತುವಾರಿಗಾಗಿ ವಿಶೇಷ ಟೀಂ ರಚನೆ ಮಾಡಲಾಗಿದ್ದು ಅನುಮಾನಸ್ಪದ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಡ್ರೋನ್, ಗಾಳಿಪಟ ಹಾರಾಟ ನಿಷೇಧ, ಅನುಮಾನಾಸ್ಪದ ಡ್ರೋನ್ ತಡೆಯಲು ಡಿಆರ್‌ಡಿಓ ನಾ ಆಂಟಿ ಡ್ರೋನ್ ಸಿಸ್ಟಮ್ ಅಳವಡಿಸಲಾಗಿದೆ.

ಮೋದಿ ಭಾಷಣದ ನಿರೀಕ್ಷೆಗಳು

  • ವೈದ್ಯಕೀಯ ಕ್ಷೇತ್ರದ ಗುಣಮಟ್ಟ ಹೆಚ್ಚಿಸಲು ಕ್ರಮಗಳು ಘೋಷಣೆಯಾಗಬಹುದು ಈ ನಿಟ್ಟಿನಲ್ಲಿ ಹೀಲ್ ಇನ್ ಇಂಡಿಯ, ಹೀಲ್ ಬೈ ಇಂಡಿಯಾ ಯೋಜನೆ ಘೋಷಣೆಯಾಗಬಹುದು.
  • ಕ್ಯಾನ್ಸರ್, ಮಧುಮೇಹದ ವಿರುದ್ಧ ಹೋರಾಡಲು ಔಷಧಿಗಳ ಬೆಲೆಯಲ್ಲಿ ಇಳಿಕೆ ಘೋಷಣೆ ಸಾಧ್ಯತೆ
  • ಆಯುಷ್ಮಾನ್ ಭಾರತ್ ವ್ಯಾಪ್ತಿಯ ವಿಸ್ತರಣೆ ಸಾಧ್ಯತೆ
  • ದೇಶೀಯ ಎಣ್ಣೆಕಾಳುಗಳು ಮತ್ತು ಬೇಳೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸಲು ಪ್ರೊತ್ಸಾಹ ಅವರ ಭಾಷಣದ ಕಾರ್ಯಸೂಚಿಯಲ್ಲಿರಬಹುದು
  • ಹಣದುಬ್ಬರ ಬೆಲೆ ಏರಿಕೆ ನಿಯಂತ್ರಣಕ್ಕೆ ಡಿಜಿಟಲ್ ಬ್ಯಾಂಕಿಂಗ್ ಮತ್ತು ಹಣಕಾಸು ವಲಯಗಳ ಅಭಿವೃದ್ಧಿಗೆ ಯೋಜನೆ ಘೋಷಣೆಯಾಗಬಹುದು

ಪ್ರಧಾನಿಯವರ ಭಾಷಣವನ್ನು ನೋಡುವುದು ಹೇಗೆ?

ಪ್ರಧಾನಿ ಮೋದಿಯವರ ಭಾಷಣವನ್ನು ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೋ ನೇರಪ್ರಸಾರ ಮಾಡಲಿದೆ. ಪ್ರಧಾನ ಮಂತ್ರಿಯವರ ಭಾಷಣವನ್ನು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಯುಟ್ಯೂಬ್ ಚಾನೆಲ್ ಮತ್ತು ಟ್ವಿಟರ್ ಹ್ಯಾಂಡಲ್ ಮೂಲಕ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ.

Published On - 10:10 pm, Sun, 14 August 22

ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
ಗುಜರಾತ್​​ನಲ್ಲಿ ಭಾರೀ ಪ್ರವಾಹ; ಭಾಗಶಃ ಮುಳುಗಿದ ತಡಕೇಶ್ವರ ಮಹಾದೇವ ದೇವಾಲಯ
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್
‘ಕಾಲವೇ ಮೋಸಗಾರ’ ಚಿತ್ರಕ್ಕಾಗಿ ವಿದ್ಯಾರ್ಥಿಗಳ ಬಳಿ ತೆರಳಿದ ಭರತ್ ಸಾಗರ್