AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Independence Day 2022: ಆಗಸ್ಟ್ 15ರ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಗಳ ವಿವರ

ಪ್ರಧಾನಿ ಮೋದಿ ಬೆಳಗ್ಗೆ 7 ಗಂಟೆ‌ 6 ನಿಮಿಷಕ್ಕೆ ರಾಜ್ ಘಾಟ್ ತಲುಪಲಿದ್ದಾರೆ. ಗಾಂಧಿ ಸಮಾಧಿಗೆ ನಮಿಸಿ ರೆಡ್ ಪೋರ್ಟ್ ಗೆ ತೆರಳುತ್ತಾರೆ. 7.14ಕ್ಕೆ ರಾಜ್ ಘಾಟ್ ನಿಂದ ಹೊರಟಿ 7.18ಕ್ಕೆ‌ ಕೆಂಪುಕೋಟೆ ತಲುಪುತ್ತಾರೆ.

Independence Day 2022: ಆಗಸ್ಟ್ 15ರ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಗಳ ವಿವರ
ಸೆಪ್ಟೆಂಬರ್ 2ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ
TV9 Web
| Updated By: ಆಯೇಷಾ ಬಾನು|

Updated on:Aug 14, 2022 | 10:10 PM

Share

ದೆಹಲಿ: 75ನೇ ವರ್ಷದ ಸ್ವಾತಂತ್ರ್ಯ ಅಮೃತಮಹೋತ್ಸವ(Azadi Ka Amrit Mahotsav) ಆಚರಿಸಲು ಇಡೀ ದೇಶ ಸಿದ್ಧವಾಗಿದೆ. ಕೇಂದ್ರ ಸರ್ಕಾರ ಸಕಲ ಸಿದ್ಧತೆ ಮಾಡ್ಕೊಂಡಿದೆ. ನಾಳೆ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಆಗಸ್ಟ್ 15ರ ಬೆಳಗ್ಗೆ 7.30ಕ್ಕೆ ಧ್ವಜಾರೋಹಣ ಮಾಡಲಿದ್ದು ಮೋದಿ ಅವರು ಪ್ರಧಾನಿಯಾಗಿ 9ನೇ ಬಾರಿಗೆ ಧ್ವಜಾರೋಹಣ ಮಾಡಲಿದ್ದಾರೆ. ಧ್ವಜಾರೋಹಣ ಬಳಿಕ ದೇಶ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಆಗಸ್ಟ್ 15ರ ಪ್ರಧಾನಿ ನರೇಂದ್ರ ಮೋದಿ ಕಾರ್ಯಕ್ರಮಗಳ ವಿವರ

ಪ್ರಧಾನಿ ಮೋದಿ ಬೆಳಗ್ಗೆ 7 ಗಂಟೆ‌ 6 ನಿಮಿಷಕ್ಕೆ ರಾಜ್ ಘಾಟ್ ತಲುಪಲಿದ್ದಾರೆ. ಗಾಂಧಿ ಸಮಾಧಿಗೆ ನಮಿಸಿ ರೆಡ್ ಪೋರ್ಟ್ ಗೆ ತೆರಳುತ್ತಾರೆ. 7.14ಕ್ಕೆ ರಾಜ್ ಘಾಟ್ ನಿಂದ ಹೊರಟಿ 7.18ಕ್ಕೆ‌ ಕೆಂಪುಕೋಟೆ ತಲುಪುತ್ತಾರೆ. ಸೇನಾಪಡೆಗಳಿಂದ ಗಾರ್ಡ್ ಆಫ್ ಹಾನರ್ ಪಡೆದು 7.30ಕ್ಕೆ‌ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಲಿದ್ದಾರೆ. 7.33ರಿಂದ ಪ್ರಧಾನಿ ಮೋದಿ ಭಾಷಣ ಆರಂಭಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಏಳು ಸಾವಿರ ಜನರು ಭಾಗಿಯಾಗುವ ನಿರೀಕ್ಷೆ ಇದೆ. ಕೇಂದ್ರಿಯ ಮೀಸಲು ಪಡೆ ಒಳಗೊಂಡಂತೆ ಹತ್ತು ಸಾವಿರ ಪೊಲೀಸ್ ಸಿಬ್ಬಂದಿಯಿಂದ ಭದ್ರತೆ ಕೈಗೊಳ್ಳಲಾಗಿದೆ. FRS ( Facial recognition system ) ತಂತ್ರಜ್ಞಾನ ಹೊಂದಿರುವ ಸಿಸಿಟಿವಿ ಅಳವಡಿಸಲಾಗಿದೆ. ಮೇಲುಸ್ತುವಾರಿಗಾಗಿ ವಿಶೇಷ ಟೀಂ ರಚನೆ ಮಾಡಲಾಗಿದ್ದು ಅನುಮಾನಸ್ಪದ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣು ಇಡಲಾಗಿದೆ. ಡ್ರೋನ್, ಗಾಳಿಪಟ ಹಾರಾಟ ನಿಷೇಧ, ಅನುಮಾನಾಸ್ಪದ ಡ್ರೋನ್ ತಡೆಯಲು ಡಿಆರ್‌ಡಿಓ ನಾ ಆಂಟಿ ಡ್ರೋನ್ ಸಿಸ್ಟಮ್ ಅಳವಡಿಸಲಾಗಿದೆ.

ಮೋದಿ ಭಾಷಣದ ನಿರೀಕ್ಷೆಗಳು

  • ವೈದ್ಯಕೀಯ ಕ್ಷೇತ್ರದ ಗುಣಮಟ್ಟ ಹೆಚ್ಚಿಸಲು ಕ್ರಮಗಳು ಘೋಷಣೆಯಾಗಬಹುದು ಈ ನಿಟ್ಟಿನಲ್ಲಿ ಹೀಲ್ ಇನ್ ಇಂಡಿಯ, ಹೀಲ್ ಬೈ ಇಂಡಿಯಾ ಯೋಜನೆ ಘೋಷಣೆಯಾಗಬಹುದು.
  • ಕ್ಯಾನ್ಸರ್, ಮಧುಮೇಹದ ವಿರುದ್ಧ ಹೋರಾಡಲು ಔಷಧಿಗಳ ಬೆಲೆಯಲ್ಲಿ ಇಳಿಕೆ ಘೋಷಣೆ ಸಾಧ್ಯತೆ
  • ಆಯುಷ್ಮಾನ್ ಭಾರತ್ ವ್ಯಾಪ್ತಿಯ ವಿಸ್ತರಣೆ ಸಾಧ್ಯತೆ
  • ದೇಶೀಯ ಎಣ್ಣೆಕಾಳುಗಳು ಮತ್ತು ಬೇಳೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸಲು ಪ್ರೊತ್ಸಾಹ ಅವರ ಭಾಷಣದ ಕಾರ್ಯಸೂಚಿಯಲ್ಲಿರಬಹುದು
  • ಹಣದುಬ್ಬರ ಬೆಲೆ ಏರಿಕೆ ನಿಯಂತ್ರಣಕ್ಕೆ ಡಿಜಿಟಲ್ ಬ್ಯಾಂಕಿಂಗ್ ಮತ್ತು ಹಣಕಾಸು ವಲಯಗಳ ಅಭಿವೃದ್ಧಿಗೆ ಯೋಜನೆ ಘೋಷಣೆಯಾಗಬಹುದು

ಪ್ರಧಾನಿಯವರ ಭಾಷಣವನ್ನು ನೋಡುವುದು ಹೇಗೆ?

ಪ್ರಧಾನಿ ಮೋದಿಯವರ ಭಾಷಣವನ್ನು ದೂರದರ್ಶನ ಮತ್ತು ಆಲ್ ಇಂಡಿಯಾ ರೇಡಿಯೋ ನೇರಪ್ರಸಾರ ಮಾಡಲಿದೆ. ಪ್ರಧಾನ ಮಂತ್ರಿಯವರ ಭಾಷಣವನ್ನು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (PIB) ಯುಟ್ಯೂಬ್ ಚಾನೆಲ್ ಮತ್ತು ಟ್ವಿಟರ್ ಹ್ಯಾಂಡಲ್ ಮೂಲಕ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ.

Published On - 10:10 pm, Sun, 14 August 22

ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ವಕ್ರ ಶನಿಯ ಪ್ರಭಾವ ಯಾವ ರಾಶಿಗಳ ಮೇಲೆ ಆಗಲಿದೆ? ಇಲ್ಲಿದೆ ಜ್ಯೋತಿಷ್ಯ ವಿವರಣೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಸಂಜು ಬಸಯ್ಯ ಪತ್ನಿಗೆ ಯುವಕನಿಂದ ಅಶ್ಲೀಲ ಸಂದೇಶ; ಬುದ್ಧಿ ಕಲಿಸಿದ ನಟ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಆಲ್ಕೋಹಾಲ್ ಬಾಟಲಿ ಕದಿಯಲು ಹೋಗಿ ಕಿಟಕಿ ಸರಳಲ್ಲಿ ತಲೆ ಸಿಲುಕಿಸಿಕೊಂಡ ಕುಡುಕ
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ಶಿವಕುಮಾರ್ ಸಿಎಂ ಆಗುತ್ತಾರೆ, ನಾಯಕತ್ವದ ಗುಣಗಳು ಅವರಲ್ಲಿವೆ: ಮಂಜುನಾಥ್
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ನಟಿ ಶ್ರುತಿಗೆ ಚಾಕು ಇರಿತ; ಘಟನೆ ಬಗ್ಗೆ ವಿವರಿಸಿದ ಪ್ರತ್ಯಕ್ಷದರ್ಶಿ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಚಿಕ್ಕಮಗಳೂರು -ತಿರುಪತಿ ರೈಲಿಗೆ ನಮಸ್ಕರಿಸಿದ ವೃದ್ಧೆ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಯಾರದ್ದೋ ತಪ್ಪಿಗೆ ನಮ್ಮನ್ಯಾಕೆ ಹೊಣೆ ಮಾಡಲಾಗುತ್ತಿದೆ? ಸಣ್ಣ ವ್ಯಾಪಾರಿ
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಎಂಬಿ ಪಾಟೀಲ್ ತಮ್ಮನ್ನು ರಾಜ್ಯದ ಮುಖ್ಯಮಂತ್ರಿ ಅಂದುಕೊಂಡಿದ್ದಾರಾ? ಪ್ರಕಾಶ್
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?
ಸಚಿವೆ ಪದೇಪದೆ ಗೃಹಲಕ್ಷ್ಮಿ ಯೋಜನೆ ಹಣದ ಬಗ್ಗೆ ಸಮಜಾಯಿಷಿ ನೀಡುವುದ್ಯಾಕೆ?