AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi Birthday: ಮೋದಿ ಹುಟ್ಟುಹಬ್ಬದಂದು ಜನಿಸುವ ಶಿಶುಗಳಿಗೆ ತಮಿಳುನಾಡು ಬಿಜೆಪಿಯಿಂದ ಚಿನ್ನದ ಉಂಗುರ ಉಡುಗೊರೆ

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಾದ ಸೆಪ್ಟೆಂಬರ್ 17 ರಂದು ದೇಶಾದ್ಯಂತ ಹಲವು ಕಾರ್ಯಕ್ರಮಗಳು ನಡೆಯಲಿವೆ. ಕೆಲವೆಡೆ ಸಿಹಿ ಹಂಚುವುದು, ಇನ್ನೂ ಕೆಲವಡೆ ರಕ್ತದಾನ, ಬಟ್ಟೆ ಹಂಚುವ ಕಾರ್ಯಕ್ರಮ ನಡೆಯಲಿದೆ.

Narendra Modi Birthday: ಮೋದಿ ಹುಟ್ಟುಹಬ್ಬದಂದು ಜನಿಸುವ ಶಿಶುಗಳಿಗೆ ತಮಿಳುನಾಡು ಬಿಜೆಪಿಯಿಂದ ಚಿನ್ನದ ಉಂಗುರ ಉಡುಗೊರೆ
Narendra Modi
TV9 Web
| Edited By: |

Updated on: Sep 16, 2022 | 2:46 PM

Share

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವಾದ ಸೆಪ್ಟೆಂಬರ್ 17 ರಂದು ದೇಶಾದ್ಯಂತ ಹಲವು ಕಾರ್ಯಕ್ರಮಗಳು ನಡೆಯಲಿವೆ. ಕೆಲವೆಡೆ ಸಿಹಿ ಹಂಚುವುದು, ಇನ್ನೂ ಕೆಲವಡೆ ರಕ್ತದಾನ, ಬಟ್ಟೆ ಹಂಚುವ ಕಾರ್ಯಕ್ರಮ ನಡೆಯಲಿದೆ.

ಆದರೆ ತಮಿಳುನಾಡು ಬಿಜೆಪಿಯು ಬೇರೆಯದ್ದೇ ರೀತಿಯಲ್ಲಿ ಕೆಲಸ ಮಾಡಲು ಮುಂದಾಗಿದೆ. ಇಲ್ಲಿ ಸೆಪ್ಟೆಂಬರ್ 17 ರಂದು ಭಾರತೀಯ ಜನತಾ ಪಕ್ಷದ ರಾಜ್ಯ ಘಟಕವು ನವಜಾತ ಶಿಶುಗಳಿಗೆ ಚಿನ್ನದ ಉಂಗುರಗಳನ್ನು ನೀಡಲಿದೆ. ಈ ದಿನ ಜನಿಸಿದ ಶಿಶುಗಳಿಗೆ ಸುಮಾರು 2 ಗ್ರಾಂನ ಉಂಗುರವನ್ನು ನೀಡಲಾಗುತ್ತದೆ.

“ನಾವು ಚೆನ್ನೈನ ಸರ್ಕಾರಿ ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದ್ದೇವೆ, ಅಲ್ಲಿ ಪ್ರಧಾನಿ ಮೋದಿ ಅವರ ಜನ್ಮದಿನದಂದು ಜನಿಸಿದ ಎಲ್ಲಾ ಮಕ್ಕಳಿಗೆ ಚಿನ್ನದ ಉಂಗುರಗಳನ್ನು ನೀಡಲಾಗುತ್ತದೆ ಎಂದು ಮೀನುಗಾರಿಕೆ ಮತ್ತು ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಎಲ್ ಮುರುಗನ್ ಹೇಳಿದ್ದಾರೆ.

ಪ್ರತಿ ಉಂಗುರವು ಸುಮಾರು 2 ಗ್ರಾಂ ಚಿನ್ನವನ್ನು ಹೊಂದಿರುತ್ತದೆ, ಇದರ ಬೆಲೆ ಸುಮಾರು 5000 ರೂ,  ಬಿಜೆಪಿಯ ಸ್ಥಳೀಯ ಘಟಕದ ಅಂದಾಜಿನ ಪ್ರಕಾರ ಸೆಪ್ಟೆಂಬರ್ 17 ರಂದು ಈ ಆಸ್ಪತ್ರೆಯಲ್ಲಿ 10-15 ಶಿಶುಗಳು ಜನಿಸುತ್ತವೆ.

ದೆಹಲಿಯ ರೆಸ್ಟೋರೆಂಟ್​ನಲ್ಲಿ ವಿಶೇಷ ಥಾಲಿ ದೆಹಲಿಯ ರೆಸ್ಟೋರೆಂಟ್ ಮಾಲೀಕರು ಕೂಡ ದಿನವನ್ನು ವಿಶೇಷವಾಗಿಸಲು ವಿಶೇಷವಾದ ಥಾಲಿ ಅನ್ನು ಪ್ರಾರಂಭಿಸಲು ಸಿದ್ಧರಾಗಿದ್ದಾರೆ. ಕನ್ನಾಟ್ ಪ್ಲೇಸ್‌ನಲ್ಲಿರುವ ARDOR 2.0 ರೆಸ್ಟೋರೆಂಟ್ 56 ಆಹಾರ ಪದಾರ್ಥಗಳನ್ನು ಒಳಗೊಂಡಿರುವ ವಿಶೇಷ ಥಾಲಿಯನ್ನು ನೀಡುತ್ತಿದೆ. ಗ್ರಾಹಕರಿಗೆ ವೆಜ್ ಮತ್ತು ನಾನ್ ವೆಜ್ ಎರಡರ ಆಯ್ಕೆ ಇರುತ್ತದೆ.

ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿರುವ ARDOR 2.0 ರೆಸ್ಟೋರೆಂಟ್ ಈ ವಿಶಿಷ್ಟ ಆಲೋಚನೆಯೊಂದಿಗೆ ಬಂದಿದೆ. ರೆಸ್ಟೋರೆಂಟ್ ಮಾಲೀಕ ಸುಮಿತ್ ಕಲಾರ ಮಾತನಾಡಿ, “ನನಗೆ ಪ್ರಧಾನಿ ಮೋದಿ ಅವರ ಬಗ್ಗೆ ಅಪಾರ ಗೌರವವಿದೆ. ಅವರು ನಮ್ಮ ದೇಶದ ಹೆಮ್ಮೆ. ಅವರ ಜನ್ಮದಿನದಂದು ನಾವು ವಿಶಿಷ್ಟವಾದದ್ದನ್ನು ಉಡುಗೊರೆಯಾಗಿ ನೀಡಲು ಬಯಸುತ್ತೇವೆ. ಈ ಥಾಲಿಯನ್ನು ಬಿಡುಗಡೆ ಮಾಡಲು ನಾವು ನಿರ್ಧರಿಸಿದ್ದೇವೆ. ನಾವು ಅದಕ್ಕೆ ಹೆಸರಿಸಿದ್ದೇವೆ.

ಅವರಿಗೆ ನೀಡಬೇಕೆಂದು ನಾವು ಬಯಸುತ್ತೇವೆ ಆದರೆ ಪ್ರಧಾನಿಯವರು ಬರಲು ಸಾಧ್ಯವಿಲ್ಲದ ಕಾರಣ, ಜನರಿಗೆ ಉಚಿತವಾಗಿ ನೀಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ