AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೂರಿ ಒದ್ದೋಡಿಸೋಕೆ ಮಹತ್ವದ ಸಚಿವ ಸಂಪುಟ ಸಭೆ ಕರೆದ ಮೋದಿ..

ದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಲಾಕ್​ಡೌನ್ ರಿಲೀಫ್​ ಕೊಟ್ಟಿದ್ದೇ ಕೊಟ್ಟಿದ್ದು, ಕೊರೊನಾ ಬಾಂಬ್ ಮಹಾಸ್ಫೋಟವಾಗ್ತಿದೆ. ಭಾರತದಲ್ಲಿ ಸೋಂಕಿನ ಸುನಾಮಿ ಒಂದೂ ಲಕ್ಷದ ಗಡಿದಾಟಿ ಮುನ್ನುಗ್ತಿದೆ. ಲಕ್ಷದ ಲಕ್ಷ್ಯ ದಾಟಿ ಹೆಮ್ಮಾರಿ ಹೆಜ್ಜೆ ಇಡ್ತಿರೋ ಏಟಿಗೆ ಎಲ್ರೂ ಅದುರಿ ಹೋಗಿದ್ದಾರೆ. ಕೊರೊನಾ ಆರ್ಭಟದಿಂದ ಟೆನ್ಷನ್ ಆಗಿರೋ ಪ್ರಧಾನಿ ನರೇಂದ್ರ ಮೋದಿ ಇವತ್ತು 11 ಗಂಟೆಗೆ ಮಹತ್ವದ ಕ್ಯಾಬಿನೆಟ್ ಮೀಟಿಂಗ್ ಕರೆದಿದ್ದಾರೆ. ಇಂದು ಪ್ರಧಾನಿ ಮೋದಿ ಮಹತ್ವದ ಸಚಿವ ಸಂಪುಟ ಸಭೆ! ಯೆಸ್.. ದೇಶದಲ್ಲಿ ಕೊರೊನಾ ಕಂಟ್ರೋಲ್​ಗೆ ಬಂತು. […]

ಕ್ರೂರಿ ಒದ್ದೋಡಿಸೋಕೆ ಮಹತ್ವದ ಸಚಿವ ಸಂಪುಟ ಸಭೆ ಕರೆದ ಮೋದಿ..
ಸಾಧು ಶ್ರೀನಾಥ್​
|

Updated on:May 20, 2020 | 3:12 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶವಾಸಿಗಳಿಗೆ ಲಾಕ್​ಡೌನ್ ರಿಲೀಫ್​ ಕೊಟ್ಟಿದ್ದೇ ಕೊಟ್ಟಿದ್ದು, ಕೊರೊನಾ ಬಾಂಬ್ ಮಹಾಸ್ಫೋಟವಾಗ್ತಿದೆ. ಭಾರತದಲ್ಲಿ ಸೋಂಕಿನ ಸುನಾಮಿ ಒಂದೂ ಲಕ್ಷದ ಗಡಿದಾಟಿ ಮುನ್ನುಗ್ತಿದೆ. ಲಕ್ಷದ ಲಕ್ಷ್ಯ ದಾಟಿ ಹೆಮ್ಮಾರಿ ಹೆಜ್ಜೆ ಇಡ್ತಿರೋ ಏಟಿಗೆ ಎಲ್ರೂ ಅದುರಿ ಹೋಗಿದ್ದಾರೆ. ಕೊರೊನಾ ಆರ್ಭಟದಿಂದ ಟೆನ್ಷನ್ ಆಗಿರೋ ಪ್ರಧಾನಿ ನರೇಂದ್ರ ಮೋದಿ ಇವತ್ತು 11 ಗಂಟೆಗೆ ಮಹತ್ವದ ಕ್ಯಾಬಿನೆಟ್ ಮೀಟಿಂಗ್ ಕರೆದಿದ್ದಾರೆ.

ಇಂದು ಪ್ರಧಾನಿ ಮೋದಿ ಮಹತ್ವದ ಸಚಿವ ಸಂಪುಟ ಸಭೆ! ಯೆಸ್.. ದೇಶದಲ್ಲಿ ಕೊರೊನಾ ಕಂಟ್ರೋಲ್​ಗೆ ಬಂತು. ಲಾಕ್​ಡೌನ್​ ಮಾಡಿದ್ಮೇಲೆ ಹೆಮ್ಮಾರಿ ವೈರಸ್ ಆಟ ಅಡಗಿ ಹೋಯ್ತು ಅಂತ ಎಲ್ರೂ ಊಹಿಸಿದ್ರೇನೋ. ಆದ್ರೆ, ಪ್ರಧಾನಿ ಮೋದಿ ನಾಲ್ಕನೇ ಹಂತದ ಲಾಕ್​ಡೌನ್ ರಿಲೀಫ್ ನೀಡ್ತಿದ್ದಂತೆ ಕೊರೊನಾ ಅಟ್ಟಹಾಸಗೈತಿದೆ.

ದೇಶದಲ್ಲಿ ಸೊಂಕಿತರ ಸಂಖ್ಯೆ ಒಂದು ಲಕ್ಷದ ಗಡಿ ದಾಟಿದ್ದು ಕೇಂದ್ರ ಸರ್ಕಾರಕ್ಕೆ ಆತಂಕ ಹೆಚ್ಚಿಸಿದೆ. ಲಾಕ್​​ಡೌನ್ ಮಾಡಿದ್ರೆ ಆರ್ಥಿಕ ಹೊಡೆತ, ಲಾಕ್​ಡೌನ್ ಮಾಡದಿದ್ರೆ ಕ್ರೂರಿ ಅಟ್ಟಹಾಸ ಇದೆರಡರ ಮಧ್ಯೆ ಸಿಲುಕಿರೋ ಮೋದಿ ಅಂಡ್ ಟೀಂ ತಲೆಕೆಡಿಸಿಕೊಂಡಿದ್ದಾರೆ. ಈ ಮಧ್ಯೆ ಪ್ರಧಾನಿ ಮೋದಿ ಇಂದು ಕೇಂದ್ರ ಸಚಿವ ಸಂಪುಟ ಸಭೆ ಕರೆದಿದ್ದು, ಕುತೂಹಲ ಹೆಚ್ಚಿಸಿದೆ. ಇನ್ನು ಕ್ಯಾಬಿನೆಟ್ ಮೀಟಿಂಗ್​ನಲ್ಲಿ ಏನೆಲ್ಲಾ ಚರ್ಚೆ ನಡೀಬೋದು.. ಕೊರೊನಾ ಒದ್ದೋಡಿಸೋಕೆ ಯಾವ್ಯಾವ ಮಹತ್ವದ ನಿರ್ಣಯ ಕೈಗೊಳ್ಬೋದು ಅನ್ನೋದನ್ನ ನೋಡೋದಾದ್ರೆ.

ಕ್ಯಾಬಿನೆಟ್​​ ಸಭೆಯಲ್ಲಿ ಏನೇನ್​​​​​ ಚರ್ಚೆ? ದೇಶದಲ್ಲಿ ಆರ್ಭಟಿಸುತ್ತಿರೋ ಕೊರೊನಾ ವೈರಸ್ ನಿಯಂತ್ರಣದ ಬಗ್ಗೆ ಕ್ಯಾಬಿನೆಟ್ ಮಿಟಿಂಗ್​​ನಲ್ಲಿ ಚರ್ಚೆ ನಡೆಸೋ ಸಾಧ್ಯತೆ ಇದೆ. ಈಗಾಗಲೇ ಘೋಷಿಸಿರೋ 20 ಲಕ್ಷ ಕೋಟಿ ಪ್ಯಾಕೇಜ್, ಹಾಗೂ ಯೋಜನೆಗಳಿಗೆ ಹಣ ಬಿಡುಗಡೆ ಬಗ್ಗೆ ಚರ್ಚಿಸೋ ಸಾಧ್ಯತೆ ಇದೆ.

ಎಲ್ಲಾ ಯೋಜನೆ ಮುಂದುವರಿಸುವ ಪ್ರಕ್ರಿಯೆಗಳು ಹೇಗಿರ್ಬೇಕು ಅನ್ನೋ ಬಗ್ಗೆ ಪ್ಲ್ಯಾನ್ ಮಾಡ್ಬೋದು. ಅಲ್ದೇ, ಲಾಕ್​​​ಡೌನ್​ನಿಂದ ಕಂಗೆಟ್ಟಿರೋ ವಲಸೆ ಕಾರ್ಮಿಕರ ಸಮಸ್ಯೆಗಳನ್ನ ಬಗೆಹರಿಸೋಕೆ ಮಾಸ್ಟರ್ ಪ್ಲ್ಯಾನ್ ರೂಪಿಸೋ ಬಗ್ಗೆ ಚರ್ಚಿಯಾಗ್ಬೋದು. ಕೊರೊನಾ ಜೊತೆಜೊತೆಗೆ ಆತಂಕ ಹೆಚ್ಚಿಸಿರೋ ಅಂಫಾನ್ ಸೈಕ್ಲೋನ್ ಕಂಟ್ರೋಲ್​ಗೆ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮೀಟಿಂಗ್​​ನಲ್ಲಿ ನಿರ್ಧಾರ ಕೈಗೊಳ್ಳೋ ಸಾಧ್ಯತೆ ಇದೆ.

ಒಟ್ನಲ್ಲಿ ಕೊರೊನಾ ಕಟ್ಟಿಹಾಕೋಕೆ ಪ್ರಧಾನಿ ಮೋದಿ ಮತ್ತೊಂದು ಮೆಗಾ ಪ್ಲ್ಯಾನ್ ಮಾಡೋಕೆ ಕ್ಯಾಬಿನೆಟ್ ಮೀಟಿಂಗ್ ಕರೆದಿದ್ದಾರೆ. ಇಂದಿನ ಸಂಪುಟ ಸಭೆಯಲ್ಲಿ ಏನೇನ್ ನಿರ್ಣಯ ಕೈಗೊಳ್ತಾರೆ ಅನ್ನೋದೆ ಇಂಟರೆಸ್ಟಿಂಗ್‌.

Published On - 9:26 am, Wed, 20 May 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!