AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುದ್ಧನೆಲ ಉಕ್ರೇನ್​​ನಿಂದ ಭಾರತೀಯರ ಸ್ಥಳಾಂತರಕ್ಕೆ ಏರ್​ಫೋರ್ಸ್ ಬಲ; ಕಾರ್ಯಾಚರಣೆಗೆ ಸಾಥ್​ ನೀಡುವಂತೆ ಪ್ರಧಾನಿ ಮೋದಿ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಸೂಚನೆ ಅನ್ವಯ ಭಾರತೀಯ ವಾಯುಪಡೆ ಉಕ್ರೇನ್​ನಲ್ಲಿರುವ ಭಾರತೀಯರನ್ನು ಏರ್​ಲಿಫ್ಟ್ ಮಾಡುವ ಮೂಲಕ ಸ್ಥಳಾಂತರಿಸಲು ಸಿ-17 ವಿಮಾನವನ್ನು ಬಳಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಯುದ್ಧನೆಲ ಉಕ್ರೇನ್​​ನಿಂದ ಭಾರತೀಯರ ಸ್ಥಳಾಂತರಕ್ಕೆ ಏರ್​ಫೋರ್ಸ್ ಬಲ; ಕಾರ್ಯಾಚರಣೆಗೆ ಸಾಥ್​ ನೀಡುವಂತೆ ಪ್ರಧಾನಿ ಮೋದಿ ಸೂಚನೆ
ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on:Mar 01, 2022 | 1:47 PM

Share

ಉಕ್ರೇನ್​​ನಲ್ಲಿ ರಷ್ಯಾ ಯುದ್ಧ (Russia Attack On Ukraine) ಸಾರಿದಾಗಿನಿಂದಲೂ ಅಲ್ಲಿರುವ ಭಾರತೀಯರನ್ನು ವಾಪಸ್​ ಕರೆತರಲು ಕೇಂದ್ರ ಸರ್ಕಾರ ಎಡಬಿಡದೆ ಪ್ರಯತ್ನ ಮಾಡುತ್ತಲೇ ಇದೆ. ಇಷ್ಟು ದಿನ ಆಪರೇಶನ್​ ಗಂಗಾ (Operation Ganga) ಹೆಸರಿನ ಕಾರ್ಯಾಚರಣೆಯನ್ನು ಏರ್​ ಇಂಡಿಯಾ ವಿಮಾನಗಳ ಮೂಲಕ ನಡೆಸಲಾಗುತ್ತಿತ್ತು.  ಅಂದರೆ ಏರ್​ ಇಂಡಿಯಾ ವಿಮಾನ ಉಕ್ರೇನ್​ನ ನೆರೆ ರಾಷ್ಟ್ರಗಳಾದ ಪೋಲ್ಯಾಂಡ್​, ರೊಮೇನಿಯಾಗಳಿಗೆ ತೆರಳಿ ಅಲ್ಲಿಂದ ಭಾರತೀಯರನ್ನು ಕರೆತರುತ್ತಿದೆ. ಇಲ್ಲಿಯವರೆಗೆ ಏರ್​ ಇಂಡಿಯಾದ ಏಳು ವಿಮಾನಗಳು ಉಕ್ರೇನ್​​ನಲ್ಲಿರುವ ಸುಮಾರು 1600 ಭಾರತೀಯರನ್ನು ವಾಪಸ್ ಕರೆತಂದಿವೆ. ಆದರೆ ಈ ಕಾರ್ಯಾಚರಣೆಗೆ ಇನ್ನು ಭಾರತೀಯ ವಾಯು ಸೇನೆ (Airforce) ಬಲ ಸಿಗಲಿದೆ. ಉಕ್ರೇನ್​​(Ukraine)ನಿಂದ ಭಾರತೀಯರನ್ನು ಸ್ಥಳಾಂತರ ಮಾಡುವ ಕಾರ್ಯಕ್ಕೆ ಸಾಥ್​ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಏರ್​ಫೋರ್ಸ್​ಗೆ ಸೂಚನೆ ನೀಡಿದ್ದಾರೆ ಎಂದು ಎಎನ್​ಐ ವರದಿ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿ ಸೂಚನೆ ಅನ್ವಯ ಭಾರತೀಯ ವಾಯುಪಡೆ ಉಕ್ರೇನ್​ನಲ್ಲಿರುವ ಭಾರತೀಯರನ್ನು ಏರ್​ಲಿಫ್ಟ್ ಮಾಡುವ ಮೂಲಕ ಸ್ಥಳಾಂತರಿಸಲು ಸಿ-17 ವಿಮಾನವನ್ನು ಬಳಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ.  ಸದ್ಯ ನಡೆಯುತ್ತಿರುವ ಆಪರೇಶನ್​ ಗಂಗಾ ಕಾರ್ಯಾಚರಣೆಯನ್ನು ಇನ್ನಷ್ಟು ಚುರುಕುಗೊಳಿಸುವ ನಿಟ್ಟಿನಲ್ಲಿ, ಸಾಥ್​ ನೀಡುವಂತೆ ಭಾರತೀಯ ವಾಯುಪಡೆಗೆ ಪ್ರಧಾನಿ ಮೋದಿ ಕರೆಕೊಟ್ಟಿದ್ದಾರೆ. ಅತ್ಯಂತ ಕಡಿಮೆ ಸಮಯದಲ್ಲಿ ಹೆಚ್ಚು ಜನರನ್ನು ಅಲ್ಲಿಂದ ಕರೆತರುವ ಅನಿವಾರ್ಯತೆ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಲವಾದ ಮೂಲಗಳು ಮಾಹಿತಿ ನೀಡಿವೆ.

ಇನ್ನು ಉಕ್ರೇನ್​ಗೆ ಮಾನವೀಯ ನೆರವು ನೀಡಲು ಭಾರತ ಮುಂದಾಗಿದ್ದು, ಅದಕ್ಕೆ ಕೂಡ ಏರ್​ಫೋರ್ಸ್​ ವಿಮಾನಗಳೇ ಬಳಕೆಯಾಗಲಿವೆ. ಉಕ್ರೇನ್​ ರಾಯಭಾರಿ ಮಾಡಿದ್ದ ಮನವಿ ಮೇರೆಗೆ  ಆಹಾರ, ಇಂಧನಗಳು, ಔಷಧ ಸೇರಿ ಇನ್ನಿತರ ಅಗತ್ಯವಸ್ತುಗಳ ಪೂರೈಕೆ ಮಾಡಲು ಭಾರತ ನಿರ್ಧಾರ ಮಾಡಿದೆ. ಹಾಗೇ, ಇನ್ನೊಂದೆಡೆ ಕೇಂದ್ರದ ನಾಲ್ವರು ಸಚಿವರಾದ ಜ್ಯೋತಿರಾದಿತ್ಯ ಸಿಂಧಿಯಾ, ಹರ್ದೀಪ್ ಸಿಂಗ್​ ಪುರಿ, ವಿಕೆ ಸಿಂಗ್​ ಮತ್ತು ಕಿರಣ್​ ರಿಜಿಜು ಉಕ್ರೇನ್​​ನಲ್ಲಿರುವ ಭಾರತೀಯರನ್ನು ರಕ್ಷಿಸಲು ಅಲ್ಲಿಗೆ ತೆರಳುತ್ತಿದ್ದರು. ಹರ್ದೀಪ್​ ಸಿಂಗ್ ಪುರಿ ಇಂದು ಹಂಗೇರಿಯಲ್ಲಿರುವ ಬುಡಾಪೆಸ್ಟ್​ನತ್ತ ತೆರಳುತ್ತಿದ್ದು, ಅದೇ ವಿಮಾನದಲ್ಲಿ ಇನ್ನೊಂದು ಬ್ಯಾಚ್​​ನಲ್ಲಿ ಭಾರತೀಯರು ಆಗಮಿಸಲಿದ್ದಾರೆ.

ಇದನ್ನೂ ಓದಿ: ಉಕ್ರೇನ್ ವಿಚಾರದಲ್ಲಿ ಭಾರತ ಎಚ್ಚರಿಕೆಯಿಂದ ಹೆಜ್ಜೆ ಹಾಕುತ್ತಿರುವುದಕ್ಕೆ 5 ಮುಖ್ಯ ಕಾರಣಗಳು ಇಲ್ಲಿವೆ

Published On - 1:33 pm, Tue, 1 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ