AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICDRI Conference 2023: ಹಿಂದಿನ ಘಟನೆಗಳಿಂದ ಕಲಿಯುವುದೊಂದೇ ದಾರಿ: ವಿಕೋಪಗಳ ಕುರಿತು ಪ್ರಧಾನಿ ಮೋದಿ ಮಾತು

ಪ್ರತಿಯೊಂದು ದೇಶವೂ ವಿವಿಧ ರೀತಿಯ ನೈಸರ್ಗಿಕ ವಿಕೋಪಗಳನ್ನು ಎದುರಿಸುತ್ತಿವೆ ಈ ಹಿಂದೆ ನಡೆದ ಘಟನೆಗಳಿಂದ ಕಲಿಯುವುದೊಂದೇ ದಾರಿ,  ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದರು.

ICDRI Conference 2023: ಹಿಂದಿನ ಘಟನೆಗಳಿಂದ ಕಲಿಯುವುದೊಂದೇ ದಾರಿ: ವಿಕೋಪಗಳ ಕುರಿತು ಪ್ರಧಾನಿ ಮೋದಿ ಮಾತು
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Apr 04, 2023 | 1:25 PM

Share

ಪ್ರತಿಯೊಂದು ದೇಶವೂ ವಿವಿಧ ರೀತಿಯ ನೈಸರ್ಗಿಕ ವಿಕೋಪಗಳನ್ನು ಎದುರಿಸುತ್ತಿವೆ ಈ ಹಿಂದೆ ನಡೆದ ಘಟನೆಗಳಿಂದ ಕಲಿಯುವುದೊಂದೇ ದಾರಿ,  ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದರು. International Conference on Disaster Resilient Infrastructure 2023 (ICDRI) ನಲ್ಲಿ ಭಾಗವಹಿಸಿದ್ದರು. ಈ ವೇದಿಕೆಯ ಮೂಲಕ ಸರ್ಕಾರಗಳು ಮಾತ್ರವಲ್ಲದೆ ಜಾಗತಿಕ ಸಂಸ್ಥೆಗಳು ಮತ್ತು ಖಾಸಗಿ ವಲಯವೂ ದೊಡ್ಡ ಪಾತ್ರವನ್ನು ವಹಿಸುತ್ತಿವೆ.

ಕೆಲವೇ ವರ್ಷಗಳಲ್ಲಿ, 40 ದೇಶಗಳು ಸಿಡಿಆರ್ಐಗೆ ಸೇರ್ಪಡೆಗೊಂಡಿವೆ. ಈ ಮೂಲಕ ಈ ಸಮ್ಮೇಳನ ಮಹತ್ವದ ವೇದಿಕೆಯ ರೂಪ ಪಡೆಯುತ್ತಿದೆ. ಭಾರತವು ಜಿ-20 ಅಧ್ಯಕ್ಷತೆ ಮೂಲಕ ಜಗತ್ತನ್ನು ಒಟ್ಟಿಗೆ ತರುತ್ತಿದೆ ಮತ್ತು ಅಧ್ಯಕ್ಷತೆವಹಿಸಿ ನಾವು ಸಿಡಿಆರ್‌ಐ ಅನ್ನು ಹಲವು ಗುಂಪುಗಳಲ್ಲಿ ಒಗ್ಗೂಡಿಸಿದ್ದೇವೆ. ಕಳೆದ ವರ್ಷ CDRI ನಿಧಿಯನ್ನು ಕೂಡ ಘೋಷಿಸಲಾಗಿದೆ.

ಈ 50 ಡಾಲರ್ ಮಿಲಿಯನ್ ನಿಧಿಯು ಅಭಿವೃದ್ಧಿಶೀಲ ರಾಷ್ಟ್ರಗಳಲ್ಲಿ ತ್ವರಿತ ಆಸಕ್ತಿಯನ್ನು ಹುಟ್ಟುಹಾಕಿದೆ ಎಂದು ಪ್ರಧಾನಿ ಹೇಳಿದರು. ಇತ್ತೀಚಿನ ದಿನಗಳಲ್ಲಿ, ಟರ್ಕಿ ಮತ್ತು ಸಿರಿಯಾದಲ್ಲಿ ಅತಿದೊಡ್ಡ  ವಿಕೋಪ ಕಂಡುಬಂದಿದೆ, ಈ ವರ್ಷ, ಫೆಬ್ರವರಿ 6 ರಂದು ಸಂಭವಿಸಿದ ಭೂಕಂಪದಿಂದಾಗಿ, ಎರಡೂ ದೇಶಗಳಲ್ಲಿ 40 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು. ವಿನಾಶಕಾರಿ ಭೂಕಂಪದ ನಂತರ ಭಾರತವು ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ತನ್ನ ತಂಡಗಳನ್ನು ಕಳುಹಿಸಿತ್ತು. ಭೂಕಂಪವು ಎಷ್ಟು ವಿನಾಶಕಾರಿಯಾಗಿತ್ತೆಂದರೆ ನೂರಾರು ಕಟ್ಟಡಗಳು ನೆಲಸಮವಾದವು.

ಮತ್ತಷ್ಟು ಓದಿ: Turkey Earthquake: ಟರ್ಕಿ ಭೂಕಂಪ; ಭಾರತೀಯರು ಅವಶೇಷಗಳಡಿ ಸಿಲುಕಿದ್ದಾರೆಯೇ? ರಾಯಭಾರಿ ನೀಡಿದ ಮಾಹಿತಿ ಇಲ್ಲಿದೆ

ಈ ಎರಡೂ ದೇಶಗಳಲ್ಲಿ ಪರಿಸ್ಥಿತಿ ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಕಟ್ಟಡಗಳ ಅವಶೇಷಗಳು ಎಲ್ಲೆಂದರಲ್ಲಿ ಬಿದ್ದಿವೆ. ಭೂಕಂಪನದ ಬಗ್ಗೆ ಜನರಲ್ಲಿ ಸಾಕಷ್ಟು ಭೀತಿ ಉಂಟಾಗಿದ್ದು, ಜನರು ತಮ್ಮ ಮನೆಗಳಿಗೆ ಹೋಗಲು ಇನ್ನೂ ಭಯಪಡುತ್ತಿದ್ದಾರೆ. ಹೆಚ್ಚಿನ ಜನರು ರಸ್ತೆ ಬದಿಯಲ್ಲಿ ಟೆಂಟ್‌ಗಳಲ್ಲಿ ವಾಸಿಸುತ್ತಿದ್ದಾರೆ.

ವಿಪತ್ತುಗಳ ಪರಿಣಾಮವು ಕೇವಲ ಸ್ಥಳೀಯವಾಗಿರುವುದಿಲ್ಲ. ಒಂದು ಪ್ರದೇಶದಲ್ಲಿನ ನೈಸರ್ಗಿಕ  ವಿಪತ್ತುಗಳು ವಿಭಿನ್ನ ದೇಶ,  ಪ್ರದೇಶಗಳ ಮೇಲೆಯೂ ಪರಿಣಾಮ ಬೀರುತ್ತವೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ