AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ವೈಪರೀತ್ಯ: ಭೂತಾನ್ ಪ್ರವಾಸ ಮುಂದೂಡಿದ ಪ್ರಧಾನಿ ಮೋದಿ

ಭೂತಾನ್​ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಪ್ರಧಾನಿ ಮೋದಿ ಭೇಟಿಯನ್ನು ಮುಂದೂಡಲಾಗಿದೆ. ಮಾರ್ಚ್​ 21,22ರಂದು ಮೋದಿ ಭೂತಾನ್​ಗೆ ಪ್ರವಾಸ ಕೈಗೊಳ್ಳಬೇಕಿತ್ತು.

ಹವಾಮಾನ ವೈಪರೀತ್ಯ: ಭೂತಾನ್ ಪ್ರವಾಸ ಮುಂದೂಡಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Mar 21, 2024 | 8:37 AM

Share

ಪಾರೋದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಎರಡು ದಿನಗಳ ಭೂತಾನ್ ಪ್ರವಾಸವನ್ನು ಮುಂದೂಡಲಾಗಿದೆ. ಭಾರತ ಮತ್ತು ಭೂತಾನ್ ನಡುವಿನ ಬಾಂಧವ್ಯವನ್ನು ಬಲಪಡಿಸಲು ಯೋಜಿಸಲಾಗಿದ್ದ ಪ್ರವಾಸವನ್ನು ಪಾರೋ ವಿಮಾನ ನಿಲ್ದಾಣವು ಪ್ರತಿಕೂಲ ಹವಾಮಾನದೊಂದಿಗೆ ಸವಾಲುಗಳನ್ನು ಎದುರಿಸುತ್ತಿರುವ ಕಾರಣ ತಡೆಹಿಡಿಯಲಾಗಿದೆ.

ಭೂತಾನ್‌ನ ಏಕೈಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದ ಪರೋ ಪ್ರತಿಕೂಲ ಹವಾಮಾನವನ್ನು ಅನುಭವಿಸಿದ ಕಾರಣ ಮೋದಿ ಭೇಟಿಯನ್ನು ವಿಳಂಬಗೊಳಿಸಲು ಸೂಚಿಸಲಾಗಿದೆ. ಗೆಲೆಫು ಸಂಪರ್ಕ ಯೋಜನೆ ಮತ್ತು ದ್ವಿಪಕ್ಷೀಯ ಸಹಕಾರ ಸೇರಿದಂತೆ ವಿವಿಧ ವಿಷಯಗಳನ್ನು ಒಳಗೊಂಡ ಚರ್ಚೆಗಳನ್ನು ನಿರೀಕ್ಷಿಸಲಾಗಿದೆ.

ಹೆಚ್ಚುವರಿಯಾಗಿ, ಚೀನಾ-ಭೂತಾನ್ ಗಡಿ ಸಮಸ್ಯೆಯ ಕುರಿತು ಮಾತುಕತೆಗಳನ್ನು ನಿರೀಕ್ಷಿಸಲಾಗಿತ್ತು. ಮಾರ್ಚ್​ 21-22ರಂದು ಮೋದಿ ಭೂತಾನ್​ಗೆ ಭೇಟಿ ನೀಡಬೇಕಿತ್ತು.

ಮತ್ತಷ್ಟು ಓದಿ: ಕರ್ನಾಟಕದಲ್ಲಿರೋದು ಜನರ ಬಗ್ಗೆ ಕಾಳಜಿಯಿಲ್ಲದ ಲೂಟಿಕೋರ, ಭ್ರಷ್ಟ ಸರ್ಕಾರ: ಪ್ರಧಾನಿ ನರೇಂದ್ರ ಮೋದಿ

ಭೂತಾನ್ ಪ್ರಧಾನಿ ಟೊಬ್ಗೇ ಕಳೆದ ವಾರ ಐದು ದಿನಗಳ ಕಾಲ ಭಾರತದ ಪ್ರವಾಸದಲ್ಲಿದ್ದರು. ಜನವರಿಯಲ್ಲಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಇದು ಅವರ ಮೊದಲ ವಿದೇಶ ಭೇಟಿಯಾಗಿದೆ. ಭಾರತ ಪ್ರವಾಸದ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದರು. ಪ್ರಸ್ತುತ ಭೇಟಿಗೆ ಹೊಸ ದಿನಾಂಕಗಳನ್ನು ನಿಗದಿಪಡಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ