AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹವಾಮಾನ ವೈಪರೀತ್ಯ: ಭೂತಾನ್ ಪ್ರವಾಸ ಮುಂದೂಡಿದ ಪ್ರಧಾನಿ ಮೋದಿ

ಭೂತಾನ್​ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಪ್ರಧಾನಿ ಮೋದಿ ಭೇಟಿಯನ್ನು ಮುಂದೂಡಲಾಗಿದೆ. ಮಾರ್ಚ್​ 21,22ರಂದು ಮೋದಿ ಭೂತಾನ್​ಗೆ ಪ್ರವಾಸ ಕೈಗೊಳ್ಳಬೇಕಿತ್ತು.

ಹವಾಮಾನ ವೈಪರೀತ್ಯ: ಭೂತಾನ್ ಪ್ರವಾಸ ಮುಂದೂಡಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Mar 21, 2024 | 8:37 AM

Share

ಪಾರೋದಲ್ಲಿ ಪ್ರತಿಕೂಲ ಹವಾಮಾನದಿಂದಾಗಿ ಪ್ರಧಾನಿ ನರೇಂದ್ರ ಮೋದಿ(Narendra Modi) ಅವರ ಎರಡು ದಿನಗಳ ಭೂತಾನ್ ಪ್ರವಾಸವನ್ನು ಮುಂದೂಡಲಾಗಿದೆ. ಭಾರತ ಮತ್ತು ಭೂತಾನ್ ನಡುವಿನ ಬಾಂಧವ್ಯವನ್ನು ಬಲಪಡಿಸಲು ಯೋಜಿಸಲಾಗಿದ್ದ ಪ್ರವಾಸವನ್ನು ಪಾರೋ ವಿಮಾನ ನಿಲ್ದಾಣವು ಪ್ರತಿಕೂಲ ಹವಾಮಾನದೊಂದಿಗೆ ಸವಾಲುಗಳನ್ನು ಎದುರಿಸುತ್ತಿರುವ ಕಾರಣ ತಡೆಹಿಡಿಯಲಾಗಿದೆ.

ಭೂತಾನ್‌ನ ಏಕೈಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾದ ಪರೋ ಪ್ರತಿಕೂಲ ಹವಾಮಾನವನ್ನು ಅನುಭವಿಸಿದ ಕಾರಣ ಮೋದಿ ಭೇಟಿಯನ್ನು ವಿಳಂಬಗೊಳಿಸಲು ಸೂಚಿಸಲಾಗಿದೆ. ಗೆಲೆಫು ಸಂಪರ್ಕ ಯೋಜನೆ ಮತ್ತು ದ್ವಿಪಕ್ಷೀಯ ಸಹಕಾರ ಸೇರಿದಂತೆ ವಿವಿಧ ವಿಷಯಗಳನ್ನು ಒಳಗೊಂಡ ಚರ್ಚೆಗಳನ್ನು ನಿರೀಕ್ಷಿಸಲಾಗಿದೆ.

ಹೆಚ್ಚುವರಿಯಾಗಿ, ಚೀನಾ-ಭೂತಾನ್ ಗಡಿ ಸಮಸ್ಯೆಯ ಕುರಿತು ಮಾತುಕತೆಗಳನ್ನು ನಿರೀಕ್ಷಿಸಲಾಗಿತ್ತು. ಮಾರ್ಚ್​ 21-22ರಂದು ಮೋದಿ ಭೂತಾನ್​ಗೆ ಭೇಟಿ ನೀಡಬೇಕಿತ್ತು.

ಮತ್ತಷ್ಟು ಓದಿ: ಕರ್ನಾಟಕದಲ್ಲಿರೋದು ಜನರ ಬಗ್ಗೆ ಕಾಳಜಿಯಿಲ್ಲದ ಲೂಟಿಕೋರ, ಭ್ರಷ್ಟ ಸರ್ಕಾರ: ಪ್ರಧಾನಿ ನರೇಂದ್ರ ಮೋದಿ

ಭೂತಾನ್ ಪ್ರಧಾನಿ ಟೊಬ್ಗೇ ಕಳೆದ ವಾರ ಐದು ದಿನಗಳ ಕಾಲ ಭಾರತದ ಪ್ರವಾಸದಲ್ಲಿದ್ದರು. ಜನವರಿಯಲ್ಲಿ ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡ ಬಳಿಕ ಇದು ಅವರ ಮೊದಲ ವಿದೇಶ ಭೇಟಿಯಾಗಿದೆ. ಭಾರತ ಪ್ರವಾಸದ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದರು. ಪ್ರಸ್ತುತ ಭೇಟಿಗೆ ಹೊಸ ದಿನಾಂಕಗಳನ್ನು ನಿಗದಿಪಡಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ