AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ವಾರಾಣಸಿಯಲ್ಲಿ ಬಿಜೆಪಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ; ಮಧ್ಯಾಹ್ನ ಸಮಾವೇಶದಲ್ಲಿ ಭಾಗಿ

ಉತ್ತರಪ್ರದೇಶದಲ್ಲಿ 2022ರ ಪ್ರಾರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಂದಿನ ಅವಧಿಗೂ ಅಧಿಕಾರ ಉಳಿಸಿಕೊಳ್ಳಲು ಅಲ್ಲಿ ಬಿಜೆಪಿ ಈಗಾಗಲೇ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ.

Video: ವಾರಾಣಸಿಯಲ್ಲಿ ಬಿಜೆಪಿ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ; ಮಧ್ಯಾಹ್ನ ಸಮಾವೇಶದಲ್ಲಿ ಭಾಗಿ
ಸಭೆಗೂ ಮೊದಲು ಪ್ರಧಾನಿ ಮೋದಿಯನ್ನು ಸ್ವಾಗತಿಸಿದ ಜೆಪಿ ನಡ್ಡಾ
TV9 Web
| Edited By: |

Updated on: Dec 14, 2021 | 1:57 PM

Share

ವಾರಾಣಸಿ: ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi)ಯವರು ಕಳೆದ ಎರಡು ದಿನಗಳಿಂದ ವಾರಾಣಸಿ ಪ್ರವಾಸದಲ್ಲಿದ್ದಾರೆ. ನಿನ್ನೆ ಮೊದಲ ದಿನ ಅವರು ಕಾಶಿ ವಿಶ್ವನಾಥ ಕಾರಿಡಾರ್​ ಮೊದಲ ಹಂತವನ್ನು ಉದ್ಘಾಟನೆ ಮಾಡಿದ್ದಾರೆ. ನಂತರ ಮಧ್ಯರಾತ್ರಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರೊಟ್ಟಿಗೆ ಸೇರಿ ಬನಾರಸ್​ ರೈಲ್ವೆ ನಿಲ್ದಾಣವನ್ನು ಪರಿಶೀಲನೆ ನಡೆಸಿದರು. ಹಾಗೇ, ಇಂದು ಬೆಳಗ್ಗೆ ವಾರಾಣಸಿಯಲ್ಲಿ, ಭಾರತೀಯ ಜನತಾ ಪಕ್ಷದ ಮುಖ್ಯಮಂತ್ರಿಗಳು (ವಿವಿಧ ರಾಜ್ಯಗಳ) ಮತ್ತು ಜಿಲ್ಲೆ ಮತ್ತು ಮಂಡಲ್​ ಅಧ್ಯಕ್ಷರ ಜತೆ ಸಭೆ ನಡೆಸಿದ್ದಾರೆ. ಇಂದು ಪ್ರಧಾನಿ ನರೇಂದ್ರ ಮೋದಿಯವರು ಬಿಜೆಪಿ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸುತ್ತಾರೆ ಎಂಬುದನ್ನು ನಿನ್ನೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್​ ಜೋಶಿ ತಿಳಿಸಿದ್ದರು. ಇಂದಿನ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಕೂಡ ಭಾಗವಹಿಸಿದ್ದರು.

ಉತ್ತರಪ್ರದೇಶದಲ್ಲಿ 2022ರ ಪ್ರಾರಂಭದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಮುಂದಿನ ಅವಧಿಗೂ ಅಧಿಕಾರ ಉಳಿಸಿಕೊಳ್ಳಲು ಅಲ್ಲಿ ಬಿಜೆಪಿ ಈಗಾಗಲೇ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಅದಕ್ಕೆ ಸಾಕ್ಷಿಯೆಂಬಂತೆ ಪ್ರಧಾನಮಂತ್ರಿ ಮೋದಿಯವರು ಪದೇಪದೆ ಅಲ್ಲಿಗೆ ತೆರಳಿ ಸಾಲುಸಾಲು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುತ್ತಿದ್ದಾರೆ. ಇತ್ತೀಚೆಗೆ ನೊಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕುಸ್ಥಾಪನೆ ಮಾಡಿದ್ದ ಅವರು, ಬಳಿಕ ಸರಯೂ ರಾಷ್ಟ್ರೀಯ ನಾಲೆ ಯೋಜನೆಗೆ ಉದ್ಘಾಟನೆ ಮಾಡಿದ್ದಾರೆ. ನಿನ್ನೆ ಅವರ ಕನಸಿನ ಯೋಜನೆಯಾದ ಕಾಶಿ ವಿಶ್ವನಾಥ ಕಾರಿಡಾರ್​ನ್ನು ಲೋಕಾರ್ಪಣೆ ಮಾಡಿದ್ದಾರೆ. ಉತ್ತರ ಪ್ರದೇಶ ಚುನಾವಣೆ ಪೂರ್ವ ಮಾಡಿದ ಕೆಲವು ಸಮೀಕ್ಷೆಗಳು, ಅಲ್ಲಿ ಬಿಜೆಪಿ ಮತ್ತು ಅಖಿಲೇಶ್​ ಯಾದವ್ ನೇತೃತ್ವದ ಸಮಾಜವಾದಿ ಪಕ್ಷಗಳ ನಡುವೆ ನೇರ ಹಣಾಹಣಿ ನಡೆಯಲಿದೆ ಎಂದು ವರದಿ ನೀಡಿವೆ.

ಇಂದು ಮಧ್ಯಾಹ್ನ 3ಗಂಟೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉತ್ತರಪ್ರದೇಶ, ಉತ್ತರಾಖಂಡ, ಗೋವಾ, ಅಸ್ಸಾಂ, ಅರುಣಾಚಲಪ್ರದೇಶ, ಗುಜರಾತ್​, ಹರ್ಯಾಣ, ಹಿಮಾಚಲ ಪ್ರದೇಶ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ತ್ರಿಪುರದ ಮುಖ್ಯಮಂತ್ರಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಮಾವೇಶದಲ್ಲಿ ಬಿಹಾರ ಮತ್ತು ನಾಗಾಲ್ಯಾಂಡ್​ ರಾಜ್ಯಗಳ ಉಪಮುಖ್ಯಮಂತ್ರಿಗಳೂ ಇರುವರು.  ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಗಾಗಲೇ ತಮ್ಮ ಪತ್ನಿಯೊಂದಿಗೆ ಕಾಶಿಗೆ ತೆರಳಿದ್ದಾರೆ.

ಇದನ್ನೂ ಓದಿ:  WPI Inflation: ಸಗಟು ದರ ಸೂಚ್ಯಂಕ ಹಣದುಬ್ಬರ ನವೆಂಬರ್​ ತಿಂಗಳಿನಲ್ಲಿ 12 ವರ್ಷಗಳ ಗರಿಷ್ಠ ಮಟ್ಟಕ್ಕೆ ಏರಿ ಶೇ 14.23ಕ್ಕೆ

ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್