
ನವದೆಹಲಿ, ಜೂನ್ 30: ಪ್ರಧಾನಮಂತ್ರಿ ನರೇಂದ್ರ ಮೋದಿ (PM Modi) ಅವರು ಇಂದು ‘ಸೇವಾ ತೀರ್ಥ’ದಲ್ಲಿ ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯಗಳು ಮತ್ತು ಇಲಾಖೆಗಳ ಕಾರ್ಯದರ್ಶಿಗಳ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. 4 ಗಂಟೆಗಳ ಕಾಲ ಸುದೀರ್ಘ ಸಭೆಯಲ್ಲಿ ಸುಲಭ ವಾಣಿಜ್ಯ ವಹಿವಾಟು, ಸುಲಭ ಜೀವನೋಪಾಯ ಮತ್ತು ಸ್ವಾವಲಂಬನೆಗೆ ಉತ್ತೇಜನ ನೀಡುವ ಕುರಿತು ಚರ್ಚಿಸಲಾಯಿತು.
ಈ ಮಹತ್ವದ ಸಭೆಯಲ್ಲಿ ಕ್ಯಾಬಿನೆಟ್ ಕಾರ್ಯದರ್ಶಿ ಟಿ.ವಿ. ಸೋಮನಾಥನ್, ಪ್ರಧಾನಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಪಿ.ಕೆ. ಮಿಶ್ರಾ, ಪ್ರಧಾನ ಕಾರ್ಯದರ್ಶಿ ಶಕ್ತಿಕಾಂತ ದಾಸ್, ಮಿಲಿಟರಿ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಹಾಗೂ ಪ್ರಮುಖ ಸಚಿವಾಲಯಗಳ ಕಾರ್ಯದರ್ಶಿಗಳು ಭಾಗವಹಿಸಿದ್ದರು. ಈ ಸಭೆಯಲ್ಲಿ, ವಿವಿಧ ಇಲಾಖೆಗಳ ಕಾರ್ಯದರ್ಶಿಗಳು ಈ ಆದ್ಯತೆಗಳಿಗೆ ಅನುಗುಣವಾಗಿ ತಮ್ಮ ಸಚಿವಾಲಯಗಳು ತೆಗೆದುಕೊಳ್ಳುತ್ತಿರುವ ಪ್ರಮುಖ ಕ್ರಮಗಳ ಬಗ್ಗೆ ವಿವರಿಸಿದರು. ಪ್ರಧಾನಮಂತ್ರಿಯವರ ದೃಷ್ಟಿಕೋನವನ್ನು ತಳಮಟ್ಟದ ಜನರಿಗೆ ತಲುಪಿಸಲು ನಡೆಯುತ್ತಿರುವ ಪ್ರಯತ್ನಗಳನ್ನು ಅವರು ಹಂಚಿಕೊಂಡರು. ಜೊತೆಗೆ, ಆಯಾ ವಲಯಗಳಲ್ಲಿರುವ ಸವಾಲುಗಳು ಮತ್ತು ಭವಿಷ್ಯದಲ್ಲಿ ಆಡಳಿತ ಹಾಗೂ ಜನಸೇವೆಯನ್ನು ಸುಧಾರಿಸುವ ಕಾರ್ಯತಂತ್ರಗಳನ್ನು ಚರ್ಚಿಸಿದರು.
ಇದನ್ನೂ ಓದಿ: ನಾಳೆ ಭಾರತಕ್ಕೆ ಜಪಾನ್ ಪ್ರಧಾನಿ ಟಕೈಚಿ ಭೇಟಿ; ಮೋದಿ ಜೊತೆ ಮಹತ್ವದ ಮಾತುಕತೆ
ಈ ಸಭೆಯಲ್ಲಿ ಇಡೀ ಸರ್ಕಾರ ಒಂದಾಗಿ ಕೆಲಸ ಮಾಡುವ ವಿಧಾನವನ್ನು ಅಳವಡಿಸಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಪ್ರಧಾನಿ ಮೋದಿ ಒತ್ತಿಹೇಳಿದರು. ಇಲಾಖೆಗಳ ನಡುವಿನ ಕಟ್ಟುಪಾಡುಗಳನ್ನು ಮುರಿಯುವಂತೆ ಕರೆ ನೀಡಿದರು ಎಂದು ಮೂಲಗಳು ತಿಳಿಸಿವೆ. ಸರ್ಕಾರದ ವಿವಿಧ ಯೋಜನೆಗಳು ಜನರ ದೈನಂದಿನ ಜೀವನದ ಮೇಲೆ ಬೀರುವ ನೇರ ಮತ್ತು ಸ್ಪಷ್ಟವಾದ ಸಕಾರಾತ್ಮಕ ಪ್ರಭಾವದ ಕಡೆಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಪ್ರಧಾನಮಂತ್ರಿಯವರು ಕಾರ್ಯದರ್ಶಿಗಳಿಗೆ ಕರೆ ನೀಡಿದರು.
Delhi | Prime Minister Narendra Modi interacted with Secretaries to the Government of India at Seva Teerth.
The discussion focused on two key themes. The first was ‘Deregulation and other reforms for Ease of Doing Business and Ease of Living’; while the second was ‘Promoting… pic.twitter.com/qF1VajwMsH
— ANI (@ANI) June 30, 2026
ಇದನ್ನೂ ಓದಿ: ಸೆಶೆಲ್ಸ್ ಸಂಸತ್ನಲ್ಲಿ ಭಾಷಣ ಮಾಡಿ ಇತಿಹಾಸ ಸೃಷ್ಟಿಸಿದ ಪ್ರಧಾನಿ ಮೋದಿ; ಸಮೋಸಾ, ದೀಪಾವಳಿ, ಗರ್ಭಾ ನೃತ್ಯದ ಮೆಲುಕು
ಪ್ರಸಕ್ತ ಹಣಕಾಸು ವರ್ಷದಲ್ಲಿ ಪ್ರಧಾನಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಪೂರ್ಣ ಕಾರ್ಯದರ್ಶಿ ಮಟ್ಟದ ಸಭೆಗಳಲ್ಲಿ ಇದೂ ಒಂದಾಗಿದೆ. 2047ರಲ್ಲಿ ಭಾರತವು ಸ್ವಾತಂತ್ರ್ಯದ 100 ವರ್ಷಗಳನ್ನು ಪೂರೈಸುವ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಪರಿವರ್ತಿಸುವ ಮೋದಿ ಅವರ ದೃಷ್ಟಿಕೋನದ ಅಡಿಯಲ್ಲಿ, ಸರ್ಕಾರವು ದೀರ್ಘಕಾಲೀನ ಸುಧಾರಣೆಗಳ ಮೇಲೆ ತನ್ನ ಗಮನವನ್ನು ತೀವ್ರಗೊಳಿಸುತ್ತಿರುವ ಸಮಯದಲ್ಲಿ ಈ ಸಭೆ ನಡೆದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ