AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಧನೆಯ ಖುಷಿಗಾಗಿ ಸಾಮಾಜಿಕ ಜಾಲತಾಣಗಳ ಪ್ರೊಫೈಲ್​ ಫೋಟೋ ಬದಲಿಸಿದ ಪ್ರಧಾನಿ ಮೋದಿ !

ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯ ರಾಮ್​ ಮನೋಹರ್​ ಲೋಹಿಯಾ ಆಸ್ಪತ್ರೆಗೆ ಭೇಟಿಯಾಗಿ ಅಲ್ಲಿನ ಸಿಬ್ಬಂದಿ ಮತ್ತು ಲಸಿಕೆ ಫಲಾನುಭವಿಗಳೊಟ್ಟಿಗೆ ಸಂವಾದ ನಡೆಸಿದ್ದಾರೆ.

ಸಾಧನೆಯ ಖುಷಿಗಾಗಿ ಸಾಮಾಜಿಕ ಜಾಲತಾಣಗಳ ಪ್ರೊಫೈಲ್​ ಫೋಟೋ ಬದಲಿಸಿದ ಪ್ರಧಾನಿ ಮೋದಿ !
ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on:Oct 22, 2021 | 12:57 PM

Share

ಪ್ರಧಾನಮಂತ್ರಿ ನರೇಂದ್ರ ಮೋದಿ(PM Narendra Modi)ಯವರು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಯಾವುದೇ ವಿಶೇಷ ಸಮಾರಂಭಗಳು, ಯೋಜನೆಗಳ ಉದ್ಘಾಟನೆಗಳ ಬಗ್ಗೆ ಅಪ್​ಡೇಟ್​ ಕೊಡುತ್ತಾರೆ. ಗಣ್ಯರ ಹುಟ್ಟುಹಬ್ಬಕ್ಕೆ ವಿಶ್​ ಮಾಡುತ್ತಾರೆ. ಇದೀಗ ಪ್ರಧಾನಮಂತ್ರಿ ನರೇಂದ್ರ ತಮ್ಮ ಸೋಷಿಯಲ್​ ಮೀಡಿಯಾಗಳ ಪ್ರೊಫೈಲ್​ ಫೋಟೋ ಬದಲಿಸಿದ್ದಾರೆ. ಭಾರತದಲ್ಲಿ ಕೊರೊನಾ ಲಸಿಕೆ 100 ಕೋಟಿ ಡೋಸ್​ ನೀಡಿ ದಾಖಲೆ ಸೃಷ್ಟಿಸಿದ ಬೆನ್ನಲ್ಲೇ ನರೇಂದ್ರ ಮೋದಿಯವರು ತಮ್ಮ ಟ್ವಿಟರ್​ ಮತ್ತು ಫೇಸ್​​ಬುಕ್​ ಖಾತೆಗಳಲ್ಲಿ ಪ್ರೊಫೈಲ್​ ಫೋಟೊ ಬದಲಿಸಿಕೊಂಡಿದ್ದಾರೆ. 100 ಕೋಟಿ ಡೋಸ್​ ಲಸಿಕೆ  ನೀಡಿದ್ದಕ್ಕೆ ಅಭಿನಂದನೆಗಳು ಭಾರತ ಎಂದು ಹೇಳುವ ಫೋಟೋವೊಂದನ್ನು ಪ್ರೊಫೈಲ್​ಗೆ ಹಾಕಿಕೊಂಡಿದ್ದಾರೆ. 

Twitter Profile

ಸಾಮಾಜಿಕ ಜಾಲತಾಣಗಳ ಪ್ರೊಫೈಲ್​ ಫೋಟೋ ಬದಲಿಸಿದ ಪ್ರಧಾನಿ ಮೋದಿ

ಭಾರತದಲ್ಲಿ ನಿನ್ನೆಗೆ 100 ಕೋಟಿ ಡೋಸ್​ ಲಸಿಕೆ ಕೊಟ್ಟು ಪೂರ್ಣವಾಗಿದೆ. ಈ ಬೆನ್ನಲ್ಲೇ ಟ್ವೀಟ್​ ಮಾಡಿದ್ದ ನರೇಂದ್ರ ಮೋದಿಯವರು, ಭಾರತ ಇಂದು ಇತಿಹಾಸ ಬರೆದಿದೆ. ಭಾರತೀಯ ವಿಜ್ಞಾನ, ಉದ್ಯಮ ಮತ್ತು 130 ಕೋಟಿ ಭಾರತೀಯರ ಒಗ್ಗಟ್ಟಿನ ಸ್ಫೂರ್ತಿಗೆ ನಾವಿಂದು ಸಾಕ್ಷಿಯಾಗಿದ್ದೇವೆ ಎಂದು ಹೇಳಿದ್ದರು.  ಹಾಗೇ ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿ ದೆಹಲಿಯ ರಾಮ್​ ಮನೋಹರ್​ ಲೋಹಿಯಾ ಆಸ್ಪತ್ರೆಗೆ ಭೇಟಿಯಾಗಿ ಅಲ್ಲಿನ ಸಿಬ್ಬಂದಿ ಮತ್ತು ಲಸಿಕೆ ಫಲಾನುಭವಿಗಳೊಟ್ಟಿಗೆ ಸಂವಾದ ನಡೆಸಿದ್ದಾರೆ. ಇದುವರೆಗೆ ಶತಕೋಟಿ ಡೋಸ್​ ಲಸಿಕೆ ನೀಡಿದ ದೇಶಗಳ ಸಾಲಿಗೆ ಚೀನಾ ಬಿಟ್ಟರೆ ಸೇರಿದ್ದು ಭಾರತವೇ ಆಗಿದೆ.  ಡಬ್ಲ್ಯೂಎಚ್​ಒ ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನೊಮ್ ಘೆಬ್ರೆಯೆಸಸ್ ಅವರು ಮೋದಿ, ವಿಜ್ಞಾನಿಗಳು, ಆರೋಗ್ಯ ಕಾರ್ಯಕರ್ತರು ಮತ್ತು ಭಾರತದ ನಾಗರಿಕರನ್ನು ಅಭಿನಂದಿಸಿದ್ದಾರೆ.

ಕಳೆದ ಮಾರ್ಚ್​​ನಲ್ಲಿ ಕೊರೊನಾ ಸಾಂಕ್ರಾಮಿಕ ಶುರುವಾಗಿ ಮೊದಲ ಲಾಕ್​ಡೌನ್​ ಜಾರಿಯಾಗಿತ್ತು. ಅದಾದ ಬಳಿಕ ಏಪ್ರಿಲ್​ನಲ್ಲಿ ಪ್ರಧಾನಿ ಮೋದಿಯವರು ತಮ್ಮ ಮೂಗು, ಬಾಯಿಯನ್ನು ಗಮ್ಚಾ (ಹತ್ತಿಬಟ್ಟೆಯ ತೆಳುವಾದ ಶಾಲು)ದಿಂದ ಮುಚ್ಚಿಕೊಂಡಿದ್ದ ಫೋಟೋವನ್ನು ಸಾಮಾಜಿಕ ಜಾಲತಾಣಗಳ ಪ್ರೊಫೈಲ್​ ಮಾಡಿಕೊಂಡಿದ್ದರು. ಈ ಮೂಲಕ ಜನರಲ್ಲಿ ಕೊರೊನಾ ನಿಯಂತ್ರಣಕ್ಕೆ ಮಾಸ್ಕ್​ ಕಡ್ಡಾಯ ಎಂಬುದನ್ನು ಸಾರಿದ್ದರು. ಅಲ್ಲಿಂದ ಇಲ್ಲಿಯವರೆಗೆ ಪ್ರೊಫೈಲ್​ ಫೋಟೋ ಬದಲು ಮಾಡಿರಲಿಲ್ಲ. ಇದೀಗ 100 ಕೋಟಿ ಡೋಸ್​ ಲಸಿಕೆ ನೀಡಿದ ಬೆನ್ನಲ್ಲೇ ಸಾಧನೆಯ ಖುಷಿಗೆ ದೇಶಕ್ಕೆ ಅಭಿನಂದನೆ ಸಲ್ಲಿಸಲು ಹೊಸ ಪ್ರೊಫೈಲ್​ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: Ananya Pandey: ಆರ್ಯನ್ ಖಾನ್ ಬಂಧನ ಪ್ರಕರಣ; ಎನ್​ಸಿಬಿ ವಿಚಾರಣೆ ವೇಳೆ ಭಯಗೊಂಡು ಕಣ್ಣೀರಿಟ್ಟಿದ್ದ ಅನನ್ಯಾ ಪಾಂಡೆ

Anushka Sharma: ಒಂದೇ ಒಂದು ಚಿತ್ರದಿಂದ ಅಭಿಮಾನಿಗಳ ಮನಗೆದ್ದ ಅನುಷ್ಕಾ; ಅಂಥದ್ದೇನಿದೆ ಅದರಲ್ಲಿ?

Published On - 12:48 pm, Fri, 22 October 21

Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily Devotional: ಶ್ರೀ ಸೂಕ್ತದ ಮಹತ್ವ ಹಾಗೂ ಯಾವಾಗ ಪಠಿಸಬೇಕು ತಿಳಿಯಿರಿ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
Daily horoscope: ಗಂಡ-ಹೆಂಡತಿಯ ನಡುವೆ ಸಣ್ಣಪುಟ್ಟ ಕಲಹಗಳಾಗುವ ಸಾಧ್ಯತೆ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಡಾ. ರಾಜ್​ಕುಮಾರ್ ಅಪಹರಣಕ್ಕೂ ಮುನ್ನ ಏನೆಲ್ಲ ನಡೆದಿತ್ತು? ವಿವರಿಸಿದ ಅಳಿಯ
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಕನ್ನಡ, ತೆಲುಗು ಎರಡೂ ಕಡೆ ಪ್ರೀತಿ ಸಿಕ್ಕಿದ್ದಕ್ಕೆ ಕಿರೀಟಿ ರೆಡ್ಡಿ ಖುಷ್
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್