AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಬದಲಾಯ್ತು ನರೇಂದ್ರ ಮೋದಿ ಪ್ರೊಫೈಲ್ ಚಿತ್ರ; ಎದ್ದು ಕಾಣುತ್ತಿದೆ ತ್ರಿವರ್ಣ ಧ್ವಜ

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವಿಟರ್ ಮತ್ತು ಫೇಸ್​ಬುಕ್ ಅಕೌಂಟ್​ಗಳಲ್ಲಿ ಪ್ರೊಫೈಲ್ ಇಮೇಜ್ ಬದಲಿಸಿಕೊಂಡು ಉತ್ತಮ ಮಾದರಿಯನ್ನೂ ಹಾಕಿಕೊಂಡಿದ್ದಾರೆ.

Narendra Modi: ಬದಲಾಯ್ತು ನರೇಂದ್ರ ಮೋದಿ ಪ್ರೊಫೈಲ್ ಚಿತ್ರ; ಎದ್ದು ಕಾಣುತ್ತಿದೆ ತ್ರಿವರ್ಣ ಧ್ವಜ
ಪ್ರಧಾನಿ ನರೇಂದ್ರ ಮೋದಿ ಅವರು ಹಾಕಿಕೊಂಡಿರುವ ಡಿಸ್​ಪ್ಲೇ ಚಿತ್ರImage Credit source: facebook.com/narendramodi
TV9 Web
| Edited By: |

Updated on:Aug 02, 2022 | 9:39 AM

Share

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ 75ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ದೇಶವ್ಯಾಪಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ (Azadi Ka Amrit Mahotsav) ಅಭಿಯಾನಕ್ಕೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಕರೆ ನೀಡಿದ್ದಾರೆ. ಇತ್ತೀಚೆಗೆ ನಡೆದ ‘ಮನ್ ಕಿ ಬಾತ್’ ಮಾಸಿಕ ರೇಡಿಯೊ ಕಾರ್ಯಕ್ರಮದಲ್ಲಿಯೂ ಪ್ರಧಾನಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಕಾರ್ಯಕ್ರಮದ ಬಗ್ಗೆ ಪ್ರಸ್ತಾಪಿಸಿದ್ದರು. ‘ಸಾಮಾಜಿಕ ಮಾಧ್ಯಮಗಳಲ್ಲಿಯೂ ದೇಶದ ಹಿರಿಮೆ ಹೆಚ್ಚಿಸುವಂಥ ಪೋಸ್ಟ್ ಹಂಚಿಕೊಳ್ಳಿ’ ಎಂದು ಸಲಹೆ ಮಾಡಿದ್ದರು.

ಇದೀಗ ಸ್ವತಃ ನರೇಂದ್ರ ಮೋದಿ ಅವರೇ ತಮ್ಮ ಟ್ವಿಟರ್ ಮತ್ತು ಫೇಸ್​ಬುಕ್ ಅಕೌಂಟ್​ಗಳಲ್ಲಿ ಪ್ರೊಫೈಲ್ ಇಮೇಜ್ ಬದಲಿಸಿಕೊಂಡು ಉತ್ತಮ ಮಾದರಿಯನ್ನೂ ಹಾಕಿಕೊಂಡಿದ್ದಾರೆ. ಮೋದಿ ಅವರ ಅಕೌಂಟ್​ಗಳಲ್ಲಿ ಇದೀಗ ಪ್ರೊಫೈಲ್ ಇಮೇಜ್ ಆಗಿ ತ್ರಿವರ್ಣ ಧ್ವಜ ರಾರಾಜಿಸುತ್ತಿದೆ.

‘ಇಂದು ಆಗಸ್ಟ್ 2. ನಮ್ಮ ದೇಶದ ಇತಿಹಾಸದಲ್ಲಿ ವಿಶೇಷ ದಿನ. ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ಸಂಭ್ರಮದ ಹಿನ್ನೆಲೆಯಲ್ಲಿ ನಮ್ಮ ದೇಶದ ಪ್ರತಿ ಮನೆಯಲ್ಲಿಯೂ ತ್ರಿವರ್ಣ ಧ್ವಜ ಹಾರಿಸುವ ‘ಹರ್ ಘರ್ ತಿರಂಗಾ’ ಅಭಿಯಾನ ಆರಂಭವಾಗಿದೆ. ನಾನು ನನ್ನ ಸಾಮಾಜಿಕ ಮಾಧ್ಯಮದ ಡಿಸ್​ಪ್ಲೇ ಇಮೇಜ್ ಬದಲಿಸಿದ್ದೇನೆ. ನೀವೂ ಹೀಗೆ ಮಾಡಬೇಕು ಎಂದು ಕೋರುತ್ತೇನೆ’ ಎಂದು ನರೇಂದ್ರ ಮೋದಿ ಅವರು ಫೇಸ್​ಬುಕ್ ಪೋಸ್ಟ್​ನಲ್ಲಿ ವಿನಂತಿಸಿದ್ದಾರೆ.

Published On - 9:38 am, Tue, 2 August 22

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ