ಯುಪಿಎಸ್​ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಧಾನಿ ಅಭಿನಂದನೆ; ಫೇಲ್​ ಆದವರಲ್ಲೂ ಧೈರ್ಯ ತುಂಬಿದ ಮೋದಿ

UPSC Result: ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಅದರಲ್ಲಿ 545 ಪುರುಷರು ಮತ್ತು 216 ಮಹಿಳೆಯರು ಸೇರಿ ಒಟ್ಟು 761 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. 

ಯುಪಿಎಸ್​ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಧಾನಿ ಅಭಿನಂದನೆ; ಫೇಲ್​ ಆದವರಲ್ಲೂ ಧೈರ್ಯ ತುಂಬಿದ ಮೋದಿ
ಪ್ರಧಾನಿ ಮೋದಿ
Follow us
| Updated By: Lakshmi Hegde

Updated on: Sep 25, 2021 | 12:47 PM

ದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC)ದ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದನೆ ಸಲ್ಲಿಸಿದ್ದಾರೆ. ಇದೀಗ ಉತ್ತೀರ್ಣರಾದವರು ಮುಂದೆ ಪ್ರಮುಖ ಆಡಳಿತಾತ್ಮಕ ಹುದ್ದೆಗಳಿಗೆ ಏರಿ, ತೃಪ್ತಿದಾಯಕವಾಗಿ ಸಾರ್ವಜನಿಕ ಸೇವೆ ಸಲ್ಲಿಸಲಿದ್ದಾರೆ ಎಂಬ ಭರವಸೆ ವ್ಯಕ್ತಪಡಿಸಿದರು.   ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ (UPSC Civil Services Examination )ಉತ್ತೀರ್ಣರಾದ ಎಲ್ಲರಿಗೂ ಅಭಿನಂದನೆಗಳು. ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ಅವರಿಗಾಗಿ ಅತ್ಯಂತ ಆಕರ್ಷಕವಾದ ಮತ್ತು ತೃಪ್ತಿದಾಯಕವಾದ ವೃತ್ತಿ ಕಾಯುತ್ತಿದೆ. ನಮ್ಮ ರಾಷ್ಟ್ರದ ಅಭಿವೃದ್ಧಿಯೆಡೆಗಿನ ಪ್ರಯಾಣದ ಅವಧಿಯಲ್ಲಿ ಇವರೆಲ್ಲ ಅತ್ಯಂತ ಪ್ರಮುಖವಾದ ಆಡಳಿತಾತ್ಮಕ ಪಾತ್ರ ನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.  

ಯುಪಿಎಸ್​ಸಿ ಪರೀಕ್ಷೆಯಲ್ಲಿ ಪಾಸ್ ಆದವರಿಗೆ ಅಭಿನಂದನೆ ಸಲ್ಲಿಸಿದ್ದಲ್ಲದೆ, ಅನುತ್ತೀರ್ಣರಾದವರಿಗೂ ಧೈರ್ಯ ತುಂಬಿ ಟ್ವೀಟ್​ ಮಾಡಿದ್ದಾರೆ. ಪ್ರೋತ್ಸಾಹ ತುಂಬಿ ಟ್ವೀಟ್​ ಮಾಡಿದ್ದಾರೆ. ಯುಪಿಎಸ್​ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನನ್ನ ಎಲ್ಲ ಸ್ನೇಹಿತರಿಗೂ ನಾನೊಂದು ಮಾತು ಹೇಳುತ್ತೇನೆ. ನೀವೆಲ್ಲರೂ ತುಂಬ ಬುದ್ಧಿವಂತರೇ ಆಗಿದ್ದೀರಿ. ಆದರೆ ಇನ್ನೂ ಸ್ವಲ್ಪ ಹೆಚ್ಚಿನ ಪ್ರಯತ್ನ ಬೇಕಾಗಿದೆ. ಅಂದಹಾಗೆ, ಭಾರತದಲ್ಲಿ ವೈವಿಧ್ಯಮಯ ಅವಕಾಶ ಇದೆ.. ನಿಮ್ಮ ಅನ್ವೇಷಣೆಗೆ ಮಾನ್ಯತೆ ಇದೆ. ಹೀಗಾಗಿ ಮುಂದೆ ಏನನ್ನೇ ಆಯ್ಕೆ ಮಾಡಿಕೊಳ್ಳುವುದಿದ್ದರೂ ಶುಭವಾಗಲಿ ಎಂದು ಪ್ರಧಾನಿ ಟ್ವೀಟ್​ ಮಾಡಿದ್ದಾರೆ.

ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಅದರಲ್ಲಿ 545 ಪುರುಷರು ಮತ್ತು 216 ಮಹಿಳೆಯರು ಸೇರಿ ಒಟ್ಟು 761 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.  ವಿವಿಧ ಅಧಿಕಾರಿಗಳ ವರ್ಗ, ರಾಜತಾಂತ್ರಿಕರು ಮತ್ತು ಪೊಲೀಸ್​ ಅಧಿಕಾರಿಗಳ ಹುದ್ದೆ ತುಂಬಲು ಯುಪಿಎಸ್​ಸಿ ವಾರ್ಷಿಕವಾಗಿ ಈ ಪರೀಕ್ಷೆಯನ್ನು ನಡೆಸುತ್ತದೆ.

ಇದನ್ನೂ ಓದಿ: UPSC: ಯುಪಿಎಸ್​ಸಿ ಫಲಿತಾಂಶ ಪ್ರಕಟ; ಅಕ್ಷಯ್​ ಸಿಂಹಗೆ 77ನೇ ರ್‍ಯಾಂಕ್, ಸಿರಿವೆನ್ನೆಲಗೆ 204ನೇ ರ್‍ಯಾಂಕ್

ಚೆನ್ನೈ ಮೂಲದ 2 ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ಐಟಿ ದಾಳಿ; 300 ಕೋಟಿ ರೂ. ಬಹಿರಂಗ ಪಡಿಸದ ಆದಾಯ ಪತ್ತೆ

ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ