ಯುಪಿಎಸ್​ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಧಾನಿ ಅಭಿನಂದನೆ; ಫೇಲ್​ ಆದವರಲ್ಲೂ ಧೈರ್ಯ ತುಂಬಿದ ಮೋದಿ

UPSC Result: ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಅದರಲ್ಲಿ 545 ಪುರುಷರು ಮತ್ತು 216 ಮಹಿಳೆಯರು ಸೇರಿ ಒಟ್ಟು 761 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ. 

ಯುಪಿಎಸ್​ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಪ್ರಧಾನಿ ಅಭಿನಂದನೆ; ಫೇಲ್​ ಆದವರಲ್ಲೂ ಧೈರ್ಯ ತುಂಬಿದ ಮೋದಿ
ಪ್ರಧಾನಿ ಮೋದಿ
Follow us
| Updated By: Lakshmi Hegde

Updated on: Sep 25, 2021 | 12:47 PM

ದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC)ದ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಉತ್ತೀರ್ಣರಾದವರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅಭಿನಂದನೆ ಸಲ್ಲಿಸಿದ್ದಾರೆ. ಇದೀಗ ಉತ್ತೀರ್ಣರಾದವರು ಮುಂದೆ ಪ್ರಮುಖ ಆಡಳಿತಾತ್ಮಕ ಹುದ್ದೆಗಳಿಗೆ ಏರಿ, ತೃಪ್ತಿದಾಯಕವಾಗಿ ಸಾರ್ವಜನಿಕ ಸೇವೆ ಸಲ್ಲಿಸಲಿದ್ದಾರೆ ಎಂಬ ಭರವಸೆ ವ್ಯಕ್ತಪಡಿಸಿದರು.   ಟ್ವೀಟ್​ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ (UPSC Civil Services Examination )ಉತ್ತೀರ್ಣರಾದ ಎಲ್ಲರಿಗೂ ಅಭಿನಂದನೆಗಳು. ಸಾರ್ವಜನಿಕ ಸೇವಾ ಕ್ಷೇತ್ರದಲ್ಲಿ ಅವರಿಗಾಗಿ ಅತ್ಯಂತ ಆಕರ್ಷಕವಾದ ಮತ್ತು ತೃಪ್ತಿದಾಯಕವಾದ ವೃತ್ತಿ ಕಾಯುತ್ತಿದೆ. ನಮ್ಮ ರಾಷ್ಟ್ರದ ಅಭಿವೃದ್ಧಿಯೆಡೆಗಿನ ಪ್ರಯಾಣದ ಅವಧಿಯಲ್ಲಿ ಇವರೆಲ್ಲ ಅತ್ಯಂತ ಪ್ರಮುಖವಾದ ಆಡಳಿತಾತ್ಮಕ ಪಾತ್ರ ನಿರ್ವಹಿಸಲಿದ್ದಾರೆ ಎಂದು ಹೇಳಿದ್ದಾರೆ.  

ಯುಪಿಎಸ್​ಸಿ ಪರೀಕ್ಷೆಯಲ್ಲಿ ಪಾಸ್ ಆದವರಿಗೆ ಅಭಿನಂದನೆ ಸಲ್ಲಿಸಿದ್ದಲ್ಲದೆ, ಅನುತ್ತೀರ್ಣರಾದವರಿಗೂ ಧೈರ್ಯ ತುಂಬಿ ಟ್ವೀಟ್​ ಮಾಡಿದ್ದಾರೆ. ಪ್ರೋತ್ಸಾಹ ತುಂಬಿ ಟ್ವೀಟ್​ ಮಾಡಿದ್ದಾರೆ. ಯುಪಿಎಸ್​ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನನ್ನ ಎಲ್ಲ ಸ್ನೇಹಿತರಿಗೂ ನಾನೊಂದು ಮಾತು ಹೇಳುತ್ತೇನೆ. ನೀವೆಲ್ಲರೂ ತುಂಬ ಬುದ್ಧಿವಂತರೇ ಆಗಿದ್ದೀರಿ. ಆದರೆ ಇನ್ನೂ ಸ್ವಲ್ಪ ಹೆಚ್ಚಿನ ಪ್ರಯತ್ನ ಬೇಕಾಗಿದೆ. ಅಂದಹಾಗೆ, ಭಾರತದಲ್ಲಿ ವೈವಿಧ್ಯಮಯ ಅವಕಾಶ ಇದೆ.. ನಿಮ್ಮ ಅನ್ವೇಷಣೆಗೆ ಮಾನ್ಯತೆ ಇದೆ. ಹೀಗಾಗಿ ಮುಂದೆ ಏನನ್ನೇ ಆಯ್ಕೆ ಮಾಡಿಕೊಳ್ಳುವುದಿದ್ದರೂ ಶುಭವಾಗಲಿ ಎಂದು ಪ್ರಧಾನಿ ಟ್ವೀಟ್​ ಮಾಡಿದ್ದಾರೆ.

ಯುಪಿಎಸ್​ಸಿ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ನಿನ್ನೆ ಪ್ರಕಟವಾಗಿದ್ದು, ಅದರಲ್ಲಿ 545 ಪುರುಷರು ಮತ್ತು 216 ಮಹಿಳೆಯರು ಸೇರಿ ಒಟ್ಟು 761 ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.  ವಿವಿಧ ಅಧಿಕಾರಿಗಳ ವರ್ಗ, ರಾಜತಾಂತ್ರಿಕರು ಮತ್ತು ಪೊಲೀಸ್​ ಅಧಿಕಾರಿಗಳ ಹುದ್ದೆ ತುಂಬಲು ಯುಪಿಎಸ್​ಸಿ ವಾರ್ಷಿಕವಾಗಿ ಈ ಪರೀಕ್ಷೆಯನ್ನು ನಡೆಸುತ್ತದೆ.

ಇದನ್ನೂ ಓದಿ: UPSC: ಯುಪಿಎಸ್​ಸಿ ಫಲಿತಾಂಶ ಪ್ರಕಟ; ಅಕ್ಷಯ್​ ಸಿಂಹಗೆ 77ನೇ ರ್‍ಯಾಂಕ್, ಸಿರಿವೆನ್ನೆಲಗೆ 204ನೇ ರ್‍ಯಾಂಕ್

ಚೆನ್ನೈ ಮೂಲದ 2 ಖಾಸಗಿ ಹಣಕಾಸು ಸಂಸ್ಥೆಗಳ ಮೇಲೆ ಐಟಿ ದಾಳಿ; 300 ಕೋಟಿ ರೂ. ಬಹಿರಂಗ ಪಡಿಸದ ಆದಾಯ ಪತ್ತೆ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್