Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​ ನೂತನ ಪ್ರಧಾನಿ ನಫ್ತಾಲಿ ಬೆನೆಟ್​​ರಿಗೆ ಅಭಿನಂದನೆ, ಮಾಜಿ ಪ್ರಧಾನಿ ಬೆಂಜಮಿನ್​ ನೆತನ್ಯಾಹೂರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

Narendra Modi: ಇಬ್ಬರೂ ನಾಯಕರಿಗೂ ಟ್ವೀಟ್​ ಮೂಲಕವೇ ಅಭಿನಂದನೆ, ಕೃತಜ್ಞತೆ ಸಲ್ಲಿಸಿ, ಭಾರತ ಮತ್ತು ಇಸ್ರೇಲ್​ ನಡುವಿನ ಸಂಬಂಧವನ್ನು ಸ್ಮರಿಸಿದ್ದಾರೆ.

ಇಸ್ರೇಲ್​ ನೂತನ ಪ್ರಧಾನಿ ನಫ್ತಾಲಿ ಬೆನೆಟ್​​ರಿಗೆ ಅಭಿನಂದನೆ, ಮಾಜಿ ಪ್ರಧಾನಿ ಬೆಂಜಮಿನ್​ ನೆತನ್ಯಾಹೂರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: Lakshmi Hegde

Updated on:Jun 14, 2021 | 3:17 PM

ಜೆರುಸೇಲಂ: ಇಸ್ರೇಲ್​ನ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಫ್ತಾಲಿ ಬೆನೆಟ್​ರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೇ ಹಿಂದಿನ ಪ್ರಧಾನಮಂತ್ರಿ ಬೆಂಜಮಿನ್​ ನೆತನ್ಯಾಹು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇಬ್ಬರೂ ನಾಯಕರಿಗೂ ಟ್ವೀಟ್​ ಮೂಲಕವೇ ಅಭಿನಂದನೆ, ಕೃತಜ್ಞತೆ ಸಲ್ಲಿಸಿ, ಭಾರತ ಮತ್ತು ಇಸ್ರೇಲ್​ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಸ್ಮರಿಸಿದ್ದಾರೆ.

ಇಸ್ರೇಲ್​​ನ ನೂತನ ಪ್ರಧಾನಮಂತ್ರಿ ನಫ್ತಾಲಿ ಬೆನೆಟ್​ರಿಗೆ ಅಭಿನಂದನೆಗಳು. ಭಾರತ-ಇಸ್ರೇಲ್​ ರಾಜತಾಂತ್ರಿಕ ಸಂಬಂಧದ ಉನ್ನತೀಕರಣದ 30ನೇ ವರ್ಷವನ್ನು ಮುಂದಿನ ವರ್ಷ ನಾವು ಆಚರಿಸಲಿದ್ದೇವೆ. ಆ ಹೊತ್ತಲ್ಲಿ ನಿಮ್ಮನ್ನು ಭೇಟಿಯಾಗಲು ಮತ್ತು ನಮ್ಮೆರಡು ದೇಶಗಳ ನಡುವಿನ ಕಾರ್ಯತಂತ್ರವನ್ನು ವಿಸ್ತರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಹಾಗೇ ಇನ್ನೊಂದು ಟ್ವೀಟ್​ ಮೂಲಕ ಬೆಂಜಮಿನ್​ ನೆತನ್ಯಾಹುರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಇಸ್ರೇಲ್​​ನ ಪ್ರಧಾನಿಯಾಗಿ, ಯಶಸ್ವಿಯಾಗಿ ನಿಮ್ಮ ಅಧಿಕಾರ ಅವಧಿಯನ್ನು ಸಂಪೂರ್ಣಗೊಳಿಸಿದ್ದೀರಿ. ಭಾರತ-ಇಸ್ರೇಲ್​ ರಾಷ್ಟ್ರಗಳ ಕಾರ್ಯತಂತ್ರ ಸಹಭಾಗಿತ್ವದ ಬಗ್ಗೆ ನಿಮಗೆ ವೈಯಕ್ತಿಕವಾಗಿ ಇದ್ದ ವಿಶೇಷ ಗಮನ ಮತ್ತು ನೀವದನ್ನು ಮುನ್ನಡೆಸಿದ ರೀತಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಬೆಂಜಮಿನ್​ ನೇತನ್ಯಾಹೂ ಅವರ 12 ವರ್ಷದ ಅವಧಿ ನಿನ್ನೆಗೆ ಮುಗಿದು, ಇಂದು ಬೆಳಗ್ಗೆ ಇಸ್ರೇಲ್​ನಲ್ಲಿ ನಫ್ತಾಲಿ ಬೆನೆಟ್ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನೆಟ್​, ನೇತನ್ಯಾಹೂ ಅವರ ಮಾಜಿ ಮಿತ್ರನೇ ಆಗಿದ್ದಾರೆ.

ಇದನ್ನೂ ಓದಿ: ಷೇರುಪೇಟೆಯಲ್ಲಿ ಪತರಗುಟ್ಟಿದ ಅದಾನಿ ಕಂಪನಿಯ ಷೇರು ಬೆಲೆ; ಮೂರು ಗಂಟೆಯಲ್ಲಿ 92 ಸಾವಿರ ಕೋಟಿ ರೂ ಗಂಟು ನಷ್ಟ

(PM Narendra Modi congratulates Israel Prime Minister Naftali Bennet)

Published On - 3:13 pm, Mon, 14 June 21

ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ತಾಯಿಯನ್ನು ಬೇಗ ಕಳೆದುಕೊಂಡ ನಮಗೆ ಅಮ್ಮನ ಕೊರತೆ ಕಾಡದಂತೆ ಬೆಳೆಸಿದರು:ಜ್ಯೋತಿ
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಮೋಸದಾಟದ ಡೌಟ್... ಹಾರ್ದಿಕ್ ಪಾಂಡ್ಯ ಬ್ಯಾಟ್ ಪರಿಶೀಲಿಸಿದ ಅಂಪೈರ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಪ್ರತಿಭಟನೆ ಹೆಸರಲ್ಲಿ ಕುಟುಂಬವೊಂದರ ವೈಭವೀಕರಣ ನಡೆಯಬಾರದು: ಯತ್ನಾಳ್
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಫಿಲ್ ಸಾಲ್ಟ್​ನ ಔಟ್ ಮಾಡಿದ ಬೌಲರ್​ನ ಅಭಿನಂದಿಸಿದ ವಿರಾಟ್ ಕೊಹ್ಲಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಗನಿಗಾಗಿ ಮುಡಿಕೊಟ್ಟು ತಿರುಪತಿಯಲ್ಲಿ ದೇವರ ದರ್ಶನ ಮಾಡಿದ ಪವನ್ ಪತ್ನಿ
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
ಮಚ್ಚುಹಿಡಿದಿದ್ದ ಶ್ರೀನಿವಾಸ ಪೂಜಾರಿಯನ್ನು ಕೂಡಲೇ ವಶಕ್ಕೆ ಪಡೆದ ಪೊಲೀಸ್
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
‘ಬ್ಯಾಂಕ್ ಜನಾರ್ಧನ್ ಭೇಟಿ ಮಾಡಲು ಇತ್ತೀಚೆಗೆ ಆಗಲೇ ಇಲ್ಲ’; ಸುಧಾರಾಣಿ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಮೂರು ಎಸೆತಗಳಲ್ಲಿ 3 ರನೌಟ್: ಪಂದ್ಯದ ಫಲಿತಾಂಶವನ್ನೇ ಬದಲಿಸಿದ ರನ್ನೋಟ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ಗದ್ದುಗೆ ಅಥವಾ ಬೃಂದಾವನ ದರ್ಶನದ ಹಿಂದಿನ ಅಧ್ಯಾತ್ಮಿಕ ರಹಸ್ಯ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ