ಇಸ್ರೇಲ್​ ನೂತನ ಪ್ರಧಾನಿ ನಫ್ತಾಲಿ ಬೆನೆಟ್​​ರಿಗೆ ಅಭಿನಂದನೆ, ಮಾಜಿ ಪ್ರಧಾನಿ ಬೆಂಜಮಿನ್​ ನೆತನ್ಯಾಹೂರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

Narendra Modi: ಇಬ್ಬರೂ ನಾಯಕರಿಗೂ ಟ್ವೀಟ್​ ಮೂಲಕವೇ ಅಭಿನಂದನೆ, ಕೃತಜ್ಞತೆ ಸಲ್ಲಿಸಿ, ಭಾರತ ಮತ್ತು ಇಸ್ರೇಲ್​ ನಡುವಿನ ಸಂಬಂಧವನ್ನು ಸ್ಮರಿಸಿದ್ದಾರೆ.

ಇಸ್ರೇಲ್​ ನೂತನ ಪ್ರಧಾನಿ ನಫ್ತಾಲಿ ಬೆನೆಟ್​​ರಿಗೆ ಅಭಿನಂದನೆ, ಮಾಜಿ ಪ್ರಧಾನಿ ಬೆಂಜಮಿನ್​ ನೆತನ್ಯಾಹೂರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
| Updated By: Lakshmi Hegde

Updated on:Jun 14, 2021 | 3:17 PM

ಜೆರುಸೇಲಂ: ಇಸ್ರೇಲ್​ನ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಫ್ತಾಲಿ ಬೆನೆಟ್​ರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೇ ಹಿಂದಿನ ಪ್ರಧಾನಮಂತ್ರಿ ಬೆಂಜಮಿನ್​ ನೆತನ್ಯಾಹು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇಬ್ಬರೂ ನಾಯಕರಿಗೂ ಟ್ವೀಟ್​ ಮೂಲಕವೇ ಅಭಿನಂದನೆ, ಕೃತಜ್ಞತೆ ಸಲ್ಲಿಸಿ, ಭಾರತ ಮತ್ತು ಇಸ್ರೇಲ್​ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಸ್ಮರಿಸಿದ್ದಾರೆ.

ಇಸ್ರೇಲ್​​ನ ನೂತನ ಪ್ರಧಾನಮಂತ್ರಿ ನಫ್ತಾಲಿ ಬೆನೆಟ್​ರಿಗೆ ಅಭಿನಂದನೆಗಳು. ಭಾರತ-ಇಸ್ರೇಲ್​ ರಾಜತಾಂತ್ರಿಕ ಸಂಬಂಧದ ಉನ್ನತೀಕರಣದ 30ನೇ ವರ್ಷವನ್ನು ಮುಂದಿನ ವರ್ಷ ನಾವು ಆಚರಿಸಲಿದ್ದೇವೆ. ಆ ಹೊತ್ತಲ್ಲಿ ನಿಮ್ಮನ್ನು ಭೇಟಿಯಾಗಲು ಮತ್ತು ನಮ್ಮೆರಡು ದೇಶಗಳ ನಡುವಿನ ಕಾರ್ಯತಂತ್ರವನ್ನು ವಿಸ್ತರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಹಾಗೇ ಇನ್ನೊಂದು ಟ್ವೀಟ್​ ಮೂಲಕ ಬೆಂಜಮಿನ್​ ನೆತನ್ಯಾಹುರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಇಸ್ರೇಲ್​​ನ ಪ್ರಧಾನಿಯಾಗಿ, ಯಶಸ್ವಿಯಾಗಿ ನಿಮ್ಮ ಅಧಿಕಾರ ಅವಧಿಯನ್ನು ಸಂಪೂರ್ಣಗೊಳಿಸಿದ್ದೀರಿ. ಭಾರತ-ಇಸ್ರೇಲ್​ ರಾಷ್ಟ್ರಗಳ ಕಾರ್ಯತಂತ್ರ ಸಹಭಾಗಿತ್ವದ ಬಗ್ಗೆ ನಿಮಗೆ ವೈಯಕ್ತಿಕವಾಗಿ ಇದ್ದ ವಿಶೇಷ ಗಮನ ಮತ್ತು ನೀವದನ್ನು ಮುನ್ನಡೆಸಿದ ರೀತಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಬೆಂಜಮಿನ್​ ನೇತನ್ಯಾಹೂ ಅವರ 12 ವರ್ಷದ ಅವಧಿ ನಿನ್ನೆಗೆ ಮುಗಿದು, ಇಂದು ಬೆಳಗ್ಗೆ ಇಸ್ರೇಲ್​ನಲ್ಲಿ ನಫ್ತಾಲಿ ಬೆನೆಟ್ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನೆಟ್​, ನೇತನ್ಯಾಹೂ ಅವರ ಮಾಜಿ ಮಿತ್ರನೇ ಆಗಿದ್ದಾರೆ.

ಇದನ್ನೂ ಓದಿ: ಷೇರುಪೇಟೆಯಲ್ಲಿ ಪತರಗುಟ್ಟಿದ ಅದಾನಿ ಕಂಪನಿಯ ಷೇರು ಬೆಲೆ; ಮೂರು ಗಂಟೆಯಲ್ಲಿ 92 ಸಾವಿರ ಕೋಟಿ ರೂ ಗಂಟು ನಷ್ಟ

(PM Narendra Modi congratulates Israel Prime Minister Naftali Bennet)

Published On - 3:13 pm, Mon, 14 June 21

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ