AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​ ನೂತನ ಪ್ರಧಾನಿ ನಫ್ತಾಲಿ ಬೆನೆಟ್​​ರಿಗೆ ಅಭಿನಂದನೆ, ಮಾಜಿ ಪ್ರಧಾನಿ ಬೆಂಜಮಿನ್​ ನೆತನ್ಯಾಹೂರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ

Narendra Modi: ಇಬ್ಬರೂ ನಾಯಕರಿಗೂ ಟ್ವೀಟ್​ ಮೂಲಕವೇ ಅಭಿನಂದನೆ, ಕೃತಜ್ಞತೆ ಸಲ್ಲಿಸಿ, ಭಾರತ ಮತ್ತು ಇಸ್ರೇಲ್​ ನಡುವಿನ ಸಂಬಂಧವನ್ನು ಸ್ಮರಿಸಿದ್ದಾರೆ.

ಇಸ್ರೇಲ್​ ನೂತನ ಪ್ರಧಾನಿ ನಫ್ತಾಲಿ ಬೆನೆಟ್​​ರಿಗೆ ಅಭಿನಂದನೆ, ಮಾಜಿ ಪ್ರಧಾನಿ ಬೆಂಜಮಿನ್​ ನೆತನ್ಯಾಹೂರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
TV9 Web
| Edited By: |

Updated on:Jun 14, 2021 | 3:17 PM

Share

ಜೆರುಸೇಲಂ: ಇಸ್ರೇಲ್​ನ ನೂತನ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಫ್ತಾಲಿ ಬೆನೆಟ್​ರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಹಾಗೇ ಹಿಂದಿನ ಪ್ರಧಾನಮಂತ್ರಿ ಬೆಂಜಮಿನ್​ ನೆತನ್ಯಾಹು ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಇಬ್ಬರೂ ನಾಯಕರಿಗೂ ಟ್ವೀಟ್​ ಮೂಲಕವೇ ಅಭಿನಂದನೆ, ಕೃತಜ್ಞತೆ ಸಲ್ಲಿಸಿ, ಭಾರತ ಮತ್ತು ಇಸ್ರೇಲ್​ ನಡುವಿನ ದ್ವಿಪಕ್ಷೀಯ ಸಂಬಂಧವನ್ನು ಸ್ಮರಿಸಿದ್ದಾರೆ.

ಇಸ್ರೇಲ್​​ನ ನೂತನ ಪ್ರಧಾನಮಂತ್ರಿ ನಫ್ತಾಲಿ ಬೆನೆಟ್​ರಿಗೆ ಅಭಿನಂದನೆಗಳು. ಭಾರತ-ಇಸ್ರೇಲ್​ ರಾಜತಾಂತ್ರಿಕ ಸಂಬಂಧದ ಉನ್ನತೀಕರಣದ 30ನೇ ವರ್ಷವನ್ನು ಮುಂದಿನ ವರ್ಷ ನಾವು ಆಚರಿಸಲಿದ್ದೇವೆ. ಆ ಹೊತ್ತಲ್ಲಿ ನಿಮ್ಮನ್ನು ಭೇಟಿಯಾಗಲು ಮತ್ತು ನಮ್ಮೆರಡು ದೇಶಗಳ ನಡುವಿನ ಕಾರ್ಯತಂತ್ರವನ್ನು ವಿಸ್ತರಿಸಲು ನಾನು ಎದುರು ನೋಡುತ್ತಿದ್ದೇನೆ ಎಂದು ನರೇಂದ್ರ ಮೋದಿ ಹೇಳಿದ್ದಾರೆ.

ಹಾಗೇ ಇನ್ನೊಂದು ಟ್ವೀಟ್​ ಮೂಲಕ ಬೆಂಜಮಿನ್​ ನೆತನ್ಯಾಹುರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಇಸ್ರೇಲ್​​ನ ಪ್ರಧಾನಿಯಾಗಿ, ಯಶಸ್ವಿಯಾಗಿ ನಿಮ್ಮ ಅಧಿಕಾರ ಅವಧಿಯನ್ನು ಸಂಪೂರ್ಣಗೊಳಿಸಿದ್ದೀರಿ. ಭಾರತ-ಇಸ್ರೇಲ್​ ರಾಷ್ಟ್ರಗಳ ಕಾರ್ಯತಂತ್ರ ಸಹಭಾಗಿತ್ವದ ಬಗ್ಗೆ ನಿಮಗೆ ವೈಯಕ್ತಿಕವಾಗಿ ಇದ್ದ ವಿಶೇಷ ಗಮನ ಮತ್ತು ನೀವದನ್ನು ಮುನ್ನಡೆಸಿದ ರೀತಿಗೆ ನಾನು ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ. ಬೆಂಜಮಿನ್​ ನೇತನ್ಯಾಹೂ ಅವರ 12 ವರ್ಷದ ಅವಧಿ ನಿನ್ನೆಗೆ ಮುಗಿದು, ಇಂದು ಬೆಳಗ್ಗೆ ಇಸ್ರೇಲ್​ನಲ್ಲಿ ನಫ್ತಾಲಿ ಬೆನೆಟ್ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಬೆನೆಟ್​, ನೇತನ್ಯಾಹೂ ಅವರ ಮಾಜಿ ಮಿತ್ರನೇ ಆಗಿದ್ದಾರೆ.

ಇದನ್ನೂ ಓದಿ: ಷೇರುಪೇಟೆಯಲ್ಲಿ ಪತರಗುಟ್ಟಿದ ಅದಾನಿ ಕಂಪನಿಯ ಷೇರು ಬೆಲೆ; ಮೂರು ಗಂಟೆಯಲ್ಲಿ 92 ಸಾವಿರ ಕೋಟಿ ರೂ ಗಂಟು ನಷ್ಟ

(PM Narendra Modi congratulates Israel Prime Minister Naftali Bennet)

Published On - 3:13 pm, Mon, 14 June 21

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?