AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸಾಧನೆಯನ್ನು ಇಡೀ ರಾಷ್ಟ್ರ ಗೌರವಿಸುತ್ತದೆ; ಪದ್ಮ ಪ್ರಶಸ್ತಿಗೆ ಭಾಜನರಾದವರಿಗೆ ಪ್ರಧಾನಿ ಮೋದಿ ಅಭಿನಂದನೆ

ಈ ವರ್ಷ ಒಂದು ಜೋಡಿಗೆ ಸೇರಿ ಒಟ್ಟು 128 ಮಂದಿಗೆ ಪದ್ಮ ಪ್ರಶಸ್ತಿ ನೀಡಲು ರಾಷ್ಟ್ರಪತಿ ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. ಇವರಲ್ಲಿ ನಾಲ್ಕು ಜನರಿಗೆ ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.

ನಿಮ್ಮ ಸಾಧನೆಯನ್ನು ಇಡೀ ರಾಷ್ಟ್ರ ಗೌರವಿಸುತ್ತದೆ; ಪದ್ಮ ಪ್ರಶಸ್ತಿಗೆ ಭಾಜನರಾದವರಿಗೆ ಪ್ರಧಾನಿ ಮೋದಿ ಅಭಿನಂದನೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 26, 2022 | 7:40 AM

Share

ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅಭಿನಂದನೆ ಸಲ್ಲಿಸಿದ್ದಾರೆ. ಇವರ ಸಾಧನೆಗಳನ್ನು ಇಡೀ ರಾಷ್ಟ್ರವೇ ಗೌರವಿಸುತ್ತದೆ ಎಂದು ಹೇಳಿದ್ದಾರೆ. ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಅಭಿನಂದನೆಗಳು. ಇಡೀ ರಾಷ್ಟ್ರವೇ ಗೌರವ ಪಡುತ್ತಿದೆ. ಸಮಾಜಕ್ಕೆ ನೀವು ನೀಡಿದ ಕೊಡುಗೆಗಳ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಎಂದು ಹೇಳಿದ್ದಾರೆ.

ಈ ವರ್ಷ ಒಂದು ಜೋಡಿಗೆ ಸೇರಿ ಒಟ್ಟು 128 ಮಂದಿಗೆ ಪದ್ಮ ಪ್ರಶಸ್ತಿ ನೀಡಲು ರಾಷ್ಟ್ರಪತಿ ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. ಇವರಲ್ಲಿ ನಾಲ್ಕು ಜನರಿಗೆ ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಪ್ರತಿವರ್ಷವೂ ಗಣರಾಜ್ಯೋತ್ಸವದ ಮುನ್ನಾದಿನ ಈ ಪ್ರಶಸ್ತಿ ಘೋಷಣೆಯಾಗುತ್ತದೆ. ಹಾಗೇ, ಈ ಸಲವೂ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಮಡಿದ ಮಾಜಿ ಸಿಡಿಎಸ್​ ಬಿಪಿನ್​ ರಾವತ್​ ಸೇರಿ ಒಟ್ಟು 13 ಜನರು ಮರಣೋತ್ತರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಿಪಿನ್​ ರಾವತ್​ಗೆ ಮರಣೋತ್ತದ ಪದ್ಮವಿಭೂಷಣ ಘೋಷಿಸಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಇದ್ದಾರೆ.

ಪದ್ಮ ಪ್ರಶಸ್ತಿಗಳನ್ನು 1954 ರಲ್ಲಿ ಸ್ಥಾಪಿಸಲಾಯಿತು ಮತ್ತು ಶಿಕ್ಷಣ, ಕಲೆ, ಸಾಹಿತ್ಯ, ವಿಜ್ಞಾನ, ನಟನೆ, ಸಮಾಜ ಸೇವೆ ಮತ್ತು ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ಚಟುವಟಿಕೆಯ ವಿವಿಧ ಕ್ಷೇತ್ರಗಳಲ್ಲಿ ಅವರ ವಿಶಿಷ್ಟ ಕೊಡುಗೆಗಾಗಿ ಭಾರತದ ನಾಗರಿಕರಿಗೆ ನೀಡಲಾಗುತ್ತದೆ.

ಇದನ್ನೂ ಓದಿ: Republic Day 2022: ಇಂದು 73ನೇ ಗಣರಾಜ್ಯೋತ್ಸವ; ಭಾರತಕ್ಕೆ ಸಂವಿಧಾನ ಬಂದು, ಅಸ್ತಿತ್ವ ರೂಪಿಸಿಕೊಂಡಿದ್ದನ್ನು ಸಾರುವ ಹಬ್ಬ

Published On - 7:39 am, Wed, 26 January 22

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ