AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಸಾಧನೆಯನ್ನು ಇಡೀ ರಾಷ್ಟ್ರ ಗೌರವಿಸುತ್ತದೆ; ಪದ್ಮ ಪ್ರಶಸ್ತಿಗೆ ಭಾಜನರಾದವರಿಗೆ ಪ್ರಧಾನಿ ಮೋದಿ ಅಭಿನಂದನೆ

ಈ ವರ್ಷ ಒಂದು ಜೋಡಿಗೆ ಸೇರಿ ಒಟ್ಟು 128 ಮಂದಿಗೆ ಪದ್ಮ ಪ್ರಶಸ್ತಿ ನೀಡಲು ರಾಷ್ಟ್ರಪತಿ ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. ಇವರಲ್ಲಿ ನಾಲ್ಕು ಜನರಿಗೆ ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ.

ನಿಮ್ಮ ಸಾಧನೆಯನ್ನು ಇಡೀ ರಾಷ್ಟ್ರ ಗೌರವಿಸುತ್ತದೆ; ಪದ್ಮ ಪ್ರಶಸ್ತಿಗೆ ಭಾಜನರಾದವರಿಗೆ ಪ್ರಧಾನಿ ಮೋದಿ ಅಭಿನಂದನೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Jan 26, 2022 | 7:40 AM

Share

ಪದ್ಮ ಪ್ರಶಸ್ತಿ ಪುರಸ್ಕೃತರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಅಭಿನಂದನೆ ಸಲ್ಲಿಸಿದ್ದಾರೆ. ಇವರ ಸಾಧನೆಗಳನ್ನು ಇಡೀ ರಾಷ್ಟ್ರವೇ ಗೌರವಿಸುತ್ತದೆ ಎಂದು ಹೇಳಿದ್ದಾರೆ. ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಎಲ್ಲರಿಗೂ ಅಭಿನಂದನೆಗಳು. ಇಡೀ ರಾಷ್ಟ್ರವೇ ಗೌರವ ಪಡುತ್ತಿದೆ. ಸಮಾಜಕ್ಕೆ ನೀವು ನೀಡಿದ ಕೊಡುಗೆಗಳ ಬಗ್ಗೆ ನಮಗೆಲ್ಲರಿಗೂ ಹೆಮ್ಮೆಯಿದೆ ಎಂದು ಹೇಳಿದ್ದಾರೆ.

ಈ ವರ್ಷ ಒಂದು ಜೋಡಿಗೆ ಸೇರಿ ಒಟ್ಟು 128 ಮಂದಿಗೆ ಪದ್ಮ ಪ್ರಶಸ್ತಿ ನೀಡಲು ರಾಷ್ಟ್ರಪತಿ ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಗೃಹ ಇಲಾಖೆ ತಿಳಿಸಿದೆ. ಇವರಲ್ಲಿ ನಾಲ್ಕು ಜನರಿಗೆ ಪದ್ಮವಿಭೂಷಣ, 17 ಪದ್ಮಭೂಷಣ ಮತ್ತು 107 ಮಂದಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿದೆ. ಪ್ರತಿವರ್ಷವೂ ಗಣರಾಜ್ಯೋತ್ಸವದ ಮುನ್ನಾದಿನ ಈ ಪ್ರಶಸ್ತಿ ಘೋಷಣೆಯಾಗುತ್ತದೆ. ಹಾಗೇ, ಈ ಸಲವೂ ಪದ್ಮ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ತಮಿಳುನಾಡಿನಲ್ಲಿ ಸೇನಾ ಹೆಲಿಕಾಪ್ಟರ್​ ದುರಂತದಲ್ಲಿ ಮಡಿದ ಮಾಜಿ ಸಿಡಿಎಸ್​ ಬಿಪಿನ್​ ರಾವತ್​ ಸೇರಿ ಒಟ್ಟು 13 ಜನರು ಮರಣೋತ್ತರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬಿಪಿನ್​ ರಾವತ್​ಗೆ ಮರಣೋತ್ತದ ಪದ್ಮವಿಭೂಷಣ ಘೋಷಿಸಲಾಗಿದೆ. ಪ್ರಶಸ್ತಿ ಪುರಸ್ಕೃತರಲ್ಲಿ 34 ಮಹಿಳೆಯರು ಮತ್ತು 10 ವಿದೇಶಿಯರು ಇದ್ದಾರೆ.

ಪದ್ಮ ಪ್ರಶಸ್ತಿಗಳನ್ನು 1954 ರಲ್ಲಿ ಸ್ಥಾಪಿಸಲಾಯಿತು ಮತ್ತು ಶಿಕ್ಷಣ, ಕಲೆ, ಸಾಹಿತ್ಯ, ವಿಜ್ಞಾನ, ನಟನೆ, ಸಮಾಜ ಸೇವೆ ಮತ್ತು ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ಚಟುವಟಿಕೆಯ ವಿವಿಧ ಕ್ಷೇತ್ರಗಳಲ್ಲಿ ಅವರ ವಿಶಿಷ್ಟ ಕೊಡುಗೆಗಾಗಿ ಭಾರತದ ನಾಗರಿಕರಿಗೆ ನೀಡಲಾಗುತ್ತದೆ.

ಇದನ್ನೂ ಓದಿ: Republic Day 2022: ಇಂದು 73ನೇ ಗಣರಾಜ್ಯೋತ್ಸವ; ಭಾರತಕ್ಕೆ ಸಂವಿಧಾನ ಬಂದು, ಅಸ್ತಿತ್ವ ರೂಪಿಸಿಕೊಂಡಿದ್ದನ್ನು ಸಾರುವ ಹಬ್ಬ

Published On - 7:39 am, Wed, 26 January 22

ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
3 ಮದುವೆಯಾಗಿ ಲಕ್ಷಾಂತರ ರೂ ಪಟಾಯಿಸಿದ ಮಹಿಳೆಯ ಮೋಸದಾಟ ಬಿಚ್ಚಿಟ್ಟ 2ನೇ ಗಂಡ!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ