Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾತನಾಡಿದ ಮೋದಿ, ನಾವು ಏಕಕಾಲದಲ್ಲಿ ಎರಡು ವಿಷಯಗಳಲ್ಲಿ ಕೆಲಸ ಮಾಡಿದ್ದೇವೆ. ಮೊದಲನೆಯದಾಗಿ, ಬ್ಯಾಂಕಿಂಗ್ ವ್ಯವಸ್ಥೆಯನ್ನು ಸುಧಾರಿಸುವುದು...

ದೇಶದಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Oct 16, 2022 | 12:54 PM

ದೆಹಲಿ: ದೇಶದಲ್ಲಿ ಆರ್ಥಿಕ ಒಳಗೊಳ್ಳುವಿಕೆಯನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ದೇಶಾದ್ಯಂತ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ (DBU) ಚಾಲನೆ ನೀಡಿದ್ದಾರೆ. ಡಿಬಿಯು ಗ್ರಾಹಕರಿಗೆ ಕಾಗದರಹಿತ, ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಸೈಬರ್ ಸುರಕ್ಷತೆ ಕುರಿತು ಆರ್ಥಿಕ ಸಾಕ್ಷರತೆ ಮತ್ತು ಗ್ರಾಹಕರಿಗೆ ಶಿಕ್ಷಣವನ್ನು ಹರಡುತ್ತವೆ. ದೇಶಾದ್ಯಂತ ಈ ಆರ್ಥಿಕ ವರ್ಷದಲ್ಲಿ ಡಿಬಿಯುಗಳ ಸ್ಥಾಪನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದರು. ಡಿಬಿಯು ಡಿಜಿಟಲ್ ಬ್ಯಾಂಕಿಂಗ್ ಸವಲತ್ತುಗಳನ್ನು ಒದಗಿಸುತ್ತಿದ್ದು, ಉಳಿತಾಯ ಖಾತೆ ತೆರೆಯುವುದು, ಬ್ಯಾಲೆನ್ಸ್-ಚೆಕ್, ಪ್ರಿಂಟ್ ಪಾಸ್‌ಬುಕ್, ಹಣ ವರ್ಗಾವಣೆ, ಸ್ಥಿರ ಠೇವಣಿಗಳಲ್ಲಿ ಹೂಡಿಕೆ, ಸಾಲದ ಅರ್ಜಿಗಳು, ನೀಡಿದ ಚೆಕ್‌ಗಳಿಗೆ ಪಾವತಿಯನ್ನು ನಿಲ್ಲಿಸುವ ಸೂಚನೆಗಳು, ಕ್ರೆಡಿಟ್/ಡೆಬಿಟ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಕೆ, ಖಾತೆಯ ವಿವರ ನೋಡುವುದು , ತೆರಿಗೆಗಳನ್ನು ಪಾವತಿ, ಬಿಲ್‌ಗಳನ್ನು ಪಾವತಿ ಮೊದಲಾದ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸುತ್ತವೆ.

ಪತ್ರಿಕಾ ಪ್ರಕಟಣೆಯ ಪ್ರಕಾರ ಡಿಬಿಯುಗಳು ವರ್ಷಪೂರ್ತಿ ಬ್ಯಾಂಕಿಂಗ್ ಉತ್ಪನ್ನಗಳು ಮತ್ತು ಸೇವೆಗಳ ಬಗ್ಗೆ ಅನುಕೂಲಕರ ಪ್ರವೇಶ ಮತ್ತು ವರ್ಧಿತ ಡಿಜಿಟಲ್ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿವೆ. ಇದು ಡಿಜಿಟಲ್ ಆರ್ಥಿಕ ಸಾಕ್ಷರತೆಯನ್ನು ಹರಡುವ ಜವಾಬ್ದಾರಿಯನ್ನು ಹೊಂದಿದ್ದು, ಸೈಬರ್ ಭದ್ರತೆಯ ಜಾಗೃತಿ ಮತ್ತು ಸುರಕ್ಷತೆಗಳ ಮೇಲೆ ಗ್ರಾಹಕರ ಶಿಕ್ಷಣಕ್ಕಾಗಿ ವಿಶೇಷ ಒತ್ತು ನೀಡುತ್ತದೆ.

75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾತನಾಡಿದ ಮೋದಿ, ನಾವು ಏಕಕಾಲದಲ್ಲಿ ಎರಡು ವಿಷಯಗಳಲ್ಲಿ ಕೆಲಸ ಮಾಡಿದ್ದೇವೆ. ಮೊದಲನೆಯದಾಗಿ, ಬ್ಯಾಂಕಿಂಗ್ ವ್ಯವಸ್ಥೆಯನ್ನು ಸುಧಾರಿಸುವುದು, ಅದನ್ನು ಬಲಪಡಿಸುವುದು ಮತ್ತು ಪಾರದರ್ಶಕತೆ ತರುವುದು. ಎರಡನೆಯದಾಗಿ, ನಾವು ಆರ್ಥಿಕತೆಯನ್ನು ಒಳಗೊಳ್ಳುವ ಕೆಲಸ ಮಾಡಿದ್ದೇವೆ. ಡಿಜಿಟಲೀಕರಣದ ಮೂಲಕ ಸಾಮಾಜಿಕ ಭದ್ರತೆಯನ್ನು ಖಾತರಿಪಡಿಸುವಲ್ಲಿ ಭಾರತವು ಮುಂಚೂಣಿಯಲ್ಲಿದೆ ಎಂದು ವಿಶ್ವ ಬ್ಯಾಂಕ್ ಹೇಳಿದೆ. ತಂತ್ರಜ್ಞಾನ ಕ್ಷೇತ್ರದ ಅತ್ಯಂತ ಯಶಸ್ವಿ ವ್ಯಕ್ತಿಗಳು, ಟೆಕ್ ಪ್ರಪಂಚದ ತಜ್ಞರು ಸಹ ಭಾರತದಲ್ಲಿ ಈ ವ್ಯವಸ್ಥೆಯನ್ನು ಶ್ಲಾಘಿಸುತ್ತಿದ್ದಾರೆ. ಅದರ ಯಶಸ್ಸಿನಿಂದ ಅವರೂ ಅಚ್ಚರಿಗೊಂಡಿದ್ದಾರೆ ಎಂದು ಮೋದಿ  ಹೇಳಿದ್ದಾರೆ.

ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ನಿರ್ಮಾಪಕಿಯಾಗಿ ನಿವೇದಿತಾ ಶಿವರಾಜ್​ಕುಮಾರ್​ ಮೊದಲ ಸಂದರ್ಶನ; ಲೈವ್ ನೋಡಿ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!