AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾತನಾಡಿದ ಮೋದಿ, ನಾವು ಏಕಕಾಲದಲ್ಲಿ ಎರಡು ವಿಷಯಗಳಲ್ಲಿ ಕೆಲಸ ಮಾಡಿದ್ದೇವೆ. ಮೊದಲನೆಯದಾಗಿ, ಬ್ಯಾಂಕಿಂಗ್ ವ್ಯವಸ್ಥೆಯನ್ನು ಸುಧಾರಿಸುವುದು...

ದೇಶದಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 16, 2022 | 12:54 PM

Share

ದೆಹಲಿ: ದೇಶದಲ್ಲಿ ಆರ್ಥಿಕ ಒಳಗೊಳ್ಳುವಿಕೆಯನ್ನು ಉತ್ತೇಜಿಸಲು ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಇಂದು ದೇಶಾದ್ಯಂತ 75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ (DBU) ಚಾಲನೆ ನೀಡಿದ್ದಾರೆ. ಡಿಬಿಯು ಗ್ರಾಹಕರಿಗೆ ಕಾಗದರಹಿತ, ಡಿಜಿಟಲ್ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಸೈಬರ್ ಸುರಕ್ಷತೆ ಕುರಿತು ಆರ್ಥಿಕ ಸಾಕ್ಷರತೆ ಮತ್ತು ಗ್ರಾಹಕರಿಗೆ ಶಿಕ್ಷಣವನ್ನು ಹರಡುತ್ತವೆ. ದೇಶಾದ್ಯಂತ ಈ ಆರ್ಥಿಕ ವರ್ಷದಲ್ಲಿ ಡಿಬಿಯುಗಳ ಸ್ಥಾಪನೆಯನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದರು. ಡಿಬಿಯು ಡಿಜಿಟಲ್ ಬ್ಯಾಂಕಿಂಗ್ ಸವಲತ್ತುಗಳನ್ನು ಒದಗಿಸುತ್ತಿದ್ದು, ಉಳಿತಾಯ ಖಾತೆ ತೆರೆಯುವುದು, ಬ್ಯಾಲೆನ್ಸ್-ಚೆಕ್, ಪ್ರಿಂಟ್ ಪಾಸ್‌ಬುಕ್, ಹಣ ವರ್ಗಾವಣೆ, ಸ್ಥಿರ ಠೇವಣಿಗಳಲ್ಲಿ ಹೂಡಿಕೆ, ಸಾಲದ ಅರ್ಜಿಗಳು, ನೀಡಿದ ಚೆಕ್‌ಗಳಿಗೆ ಪಾವತಿಯನ್ನು ನಿಲ್ಲಿಸುವ ಸೂಚನೆಗಳು, ಕ್ರೆಡಿಟ್/ಡೆಬಿಟ್ ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಕೆ, ಖಾತೆಯ ವಿವರ ನೋಡುವುದು , ತೆರಿಗೆಗಳನ್ನು ಪಾವತಿ, ಬಿಲ್‌ಗಳನ್ನು ಪಾವತಿ ಮೊದಲಾದ ಬ್ಯಾಂಕಿಂಗ್ ಸೌಲಭ್ಯಗಳನ್ನು ಒದಗಿಸುತ್ತವೆ.

ಪತ್ರಿಕಾ ಪ್ರಕಟಣೆಯ ಪ್ರಕಾರ ಡಿಬಿಯುಗಳು ವರ್ಷಪೂರ್ತಿ ಬ್ಯಾಂಕಿಂಗ್ ಉತ್ಪನ್ನಗಳು ಮತ್ತು ಸೇವೆಗಳ ಬಗ್ಗೆ ಅನುಕೂಲಕರ ಪ್ರವೇಶ ಮತ್ತು ವರ್ಧಿತ ಡಿಜಿಟಲ್ ಅನುಭವವನ್ನು ಒದಗಿಸುವ ಗುರಿಯನ್ನು ಹೊಂದಿವೆ. ಇದು ಡಿಜಿಟಲ್ ಆರ್ಥಿಕ ಸಾಕ್ಷರತೆಯನ್ನು ಹರಡುವ ಜವಾಬ್ದಾರಿಯನ್ನು ಹೊಂದಿದ್ದು, ಸೈಬರ್ ಭದ್ರತೆಯ ಜಾಗೃತಿ ಮತ್ತು ಸುರಕ್ಷತೆಗಳ ಮೇಲೆ ಗ್ರಾಹಕರ ಶಿಕ್ಷಣಕ್ಕಾಗಿ ವಿಶೇಷ ಒತ್ತು ನೀಡುತ್ತದೆ.

75 ಜಿಲ್ಲೆಗಳಲ್ಲಿ 75 ಡಿಜಿಟಲ್ ಬ್ಯಾಂಕಿಂಗ್ ಘಟಕಗಳಿಗೆ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿ ಮಾತನಾಡಿದ ಮೋದಿ, ನಾವು ಏಕಕಾಲದಲ್ಲಿ ಎರಡು ವಿಷಯಗಳಲ್ಲಿ ಕೆಲಸ ಮಾಡಿದ್ದೇವೆ. ಮೊದಲನೆಯದಾಗಿ, ಬ್ಯಾಂಕಿಂಗ್ ವ್ಯವಸ್ಥೆಯನ್ನು ಸುಧಾರಿಸುವುದು, ಅದನ್ನು ಬಲಪಡಿಸುವುದು ಮತ್ತು ಪಾರದರ್ಶಕತೆ ತರುವುದು. ಎರಡನೆಯದಾಗಿ, ನಾವು ಆರ್ಥಿಕತೆಯನ್ನು ಒಳಗೊಳ್ಳುವ ಕೆಲಸ ಮಾಡಿದ್ದೇವೆ. ಡಿಜಿಟಲೀಕರಣದ ಮೂಲಕ ಸಾಮಾಜಿಕ ಭದ್ರತೆಯನ್ನು ಖಾತರಿಪಡಿಸುವಲ್ಲಿ ಭಾರತವು ಮುಂಚೂಣಿಯಲ್ಲಿದೆ ಎಂದು ವಿಶ್ವ ಬ್ಯಾಂಕ್ ಹೇಳಿದೆ. ತಂತ್ರಜ್ಞಾನ ಕ್ಷೇತ್ರದ ಅತ್ಯಂತ ಯಶಸ್ವಿ ವ್ಯಕ್ತಿಗಳು, ಟೆಕ್ ಪ್ರಪಂಚದ ತಜ್ಞರು ಸಹ ಭಾರತದಲ್ಲಿ ಈ ವ್ಯವಸ್ಥೆಯನ್ನು ಶ್ಲಾಘಿಸುತ್ತಿದ್ದಾರೆ. ಅದರ ಯಶಸ್ಸಿನಿಂದ ಅವರೂ ಅಚ್ಚರಿಗೊಂಡಿದ್ದಾರೆ ಎಂದು ಮೋದಿ  ಹೇಳಿದ್ದಾರೆ.

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!