AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರದ 7 ಹೊಸ ರಕ್ಷಣಾ ಕಂಪನಿಗಳು ಮಿಲಿಟರಿ ಪಡೆಗೆ ಶಕ್ತಿ ತುಂಬಲಿದೆ: ಪ್ರಧಾನಿ ನರೇಂದ್ರ ಮೋದಿ

Narendra Modi: ವಿಜಯ ದಶಮಿಯ ಸಂದರ್ಭದಲ್ಲಿ ಈ ಕಂಪನಿಗಳ ಬಿಡುಗಡೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, "ಭಾರತವು ಹೊಸ ಭವಿಷ್ಯವನ್ನು ನಿರ್ಮಿಸಲು ಹೊಸ ನಿರ್ಣಯಗಳನ್ನು ತೆಗೆದುಕೊಳ್ಳುತ್ತಿದೆ. 41 ಶಸ್ತ್ರಾಸ್ತ್ರ ಕಾರ್ಖಾನೆಗಳನ್ನು ಪರಿಷ್ಕರಿಸುವ ನಿರ್ಧಾರ ಮತ್ತು ಈ ಏಳು ಕಂಪನಿಗಳ ಆರಂಭವು ಈ ನಿರ್ಣಯದ ಪ್ರಯಾಣದ ಒಂದು ಭಾಗವಾಗಿದೆ.

ಕೇಂದ್ರದ 7 ಹೊಸ ರಕ್ಷಣಾ ಕಂಪನಿಗಳು ಮಿಲಿಟರಿ ಪಡೆಗೆ ಶಕ್ತಿ ತುಂಬಲಿದೆ: ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Oct 15, 2021 | 1:53 PM

Share

ದೆಹಲಿ: ವಿಜಯದಶಮಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (NarendraModi) ಅವರು ಈ ವರ್ಷದ ಆರಂಭದಲ್ಲಿ ರಕ್ಷಣಾ ಸಚಿವಾಲಯದಿಂದ ವಿಸರ್ಜಿಸಲ್ಪಟ್ಟಿದ್ದ ಆರ್ಡಿನೆನ್ಸ್ ಫ್ಯಾಕ್ಟರಿ ಬೋರ್ಡ್ ನ (OFB) ಏಳು ಹೊಸ ರಕ್ಷಣಾ ಕಂಪನಿಗಳನ್ನು ಉದ್ಘಾಟಿಸಿದ್ದಾರೆ. ಕೇಂದ್ರ ಕ್ಯಾಬಿನೆಟ್ ತೆಗೆದುಕೊಂಡ ನಿರ್ಧಾರಕ್ಕೆ ಅನುಗುಣವಾಗಿ, 200 ವರ್ಷಗಳ ಹಳೆಯ ಒಎಫ್‌ಬಿಯ ಸ್ವತ್ತುಗಳನ್ನು ಈ ಏಳು ಹೊಸದಾಗಿ ಸ್ಥಾಪಿಸಲಾದ ರಕ್ಷಣಾ ಸಾರ್ವಜನಿಕ ವಲಯದ ಸಂಸ್ಥೆಗಳಾಗಿ (DPSUs) ವಿಂಗಡಿಸಲಾಗಿದೆ. ಅದರ ಸುಮಾರು 70,000 ಉದ್ಯೋಗಿಗಳನ್ನು ಈ ಏಳು ಹೊಸ ಘಟಕಗಳಿಗೆ ಯಾವುದೇ ಬದಲಾವಣೆ ಇಲ್ಲದೆ ವರ್ಗಾಯಿಸಲಾಗಿದೆ. ಈ ಕಂಪನಿಗಳಲ್ಲಿ ಪಿಸ್ತೂಲಿನಿಂದ ಯುದ್ಧ ವಿಮಾನದವರೆಗೆ ತಯಾರಿಸಲಾಗುತ್ತದೆ. ಸರ್ಕಾರದ ಈ ಹೆಜ್ಜೆಯನ್ನು ಆತ್ಮನಿರ್ಭರ್ ಭಾರತ ಅಭಿಯಾನದ ಅಡಿಯಲ್ಲಿ ಭಾರತವನ್ನು ಸ್ವಾವಲಂಬಿಯಾಗಿಸುವ ದೊಡ್ಡ ಹೆಜ್ಜೆಯೆಂದು ಪರಿಗಣಿಸಲಾಗಿದೆ. ವಿಜಯ ದಶಮಿಯ ಸಂದರ್ಭದಲ್ಲಿ ಈ ಕಂಪನಿಗಳ ಬಿಡುಗಡೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಭಾರತವು ಹೊಸ ಭವಿಷ್ಯವನ್ನು ನಿರ್ಮಿಸಲು ಹೊಸ ನಿರ್ಣಯಗಳನ್ನು ತೆಗೆದುಕೊಳ್ಳುತ್ತಿದೆ. 41 ಶಸ್ತ್ರಾಸ್ತ್ರ ಕಾರ್ಖಾನೆಗಳನ್ನು ಪರಿಷ್ಕರಿಸುವ ನಿರ್ಧಾರ ಮತ್ತು ಈ ಏಳು ಕಂಪನಿಗಳ ಆರಂಭವು ಈ ನಿರ್ಣಯದ ಪ್ರಯಾಣದ ಒಂದು ಭಾಗವಾಗಿದೆ. ಈ ನಿರ್ಧಾರವು ಕಳೆದ 15-20 ವರ್ಷಗಳಿಂದ ಬಾಕಿಯಿತ್ತು ಎಂದು ಹೇಳಿದ್ದಾರೆ.

ಪ್ರಾರಂಭಿಸಿದ ಏಳು ಹೊಸ ಕಂಪನಿಗಳು – ಮುನಿಶನ್ಸ್ ಇಂಡಿಯಾ ಲಿಮಿಟೆಡ್ (MIL), ಆರ್ಮರ್ಡ್ ವೆಹಿಕಲ್ಸ್ ನಿಗಮ್ ಲಿಮಿಟೆಡ್ (AVANI), ಅಡ್ವಾನ್ಸ್ಡ್ ವೆಪನ್ಸ್ ಅಂಡ್ ಇಕ್ವಿಪ್ಮೆಂಟ್ ಇಂಡಿಯಾ ಲಿಮಿಟೆಡ್ (AWE ಇಂಡಿಯಾ), ಟ್ರೂಪ್ ಕಂಫರ್ಟ್ಸ್ ಲಿಮಿಟೆಡ್ (TCL), ಯಂತ್ರ ಇಂಡಿಯಾ ಲಿಮಿಟೆಡ್ (YIL), ಇಂಡಿಯಾ ಆಪ್ಟೆಲ್ ಲಿಮಿಟೆಡ್ (IOL) ಮತ್ತು ಗ್ಲೈಡರ್ಸ್ ಇಂಡಿಯಾ ಲಿಮಿಟೆಡ್ (GIL). ಇವುಗಳು ಮೂರು ಸೇವೆಗಳು ಮತ್ತು ಅರೆಸೇನಾ ಪಡೆಗಳಿಂದ 65,000 ಕೋಟಿ ಮೌಲ್ಯದ 66 ದೃ ಢ ಒಪ್ಪಂದಗಳನ್ನು ಹೊಂದಿವೆ. ಭಾರತದ ಶಸ್ತ್ರಾಸ್ತ್ರ ಕಾರ್ಖಾನೆಗಳು ಒಂದು ಕಾಲದಲ್ಲಿ ಜಾಗತಿಕವಾಗಿ ಅತ್ಯಂತ ಶಕ್ತಿಶಾಲಿಯಾಗಿವೆ ಎಂದು ಸೂಚಿಸಿದ ಪ್ರಧಾನಿ ಮೋದಿ, ಈ ಕಾರ್ಖಾನೆಗಳು 100 ರಿಂದ 150 ವರ್ಷಗಳ ಅನುಭವವನ್ನು ಹೊಂದಿವೆ ಎಂದು ಹೇಳಿದರು.

“ವಿಶ್ವ ಯುದ್ಧದ ಸಮಯದಲ್ಲಿ, ಭಾರತದ ಶಸ್ತ್ರಾಸ್ತ್ರ ಕಾರ್ಖಾನೆಗಳ ಬಲವನ್ನು ಜಗತ್ತು ಕಂಡಿತು. ನಾವು ಉತ್ತಮ ಸಂಪನ್ಮೂಲಗಳನ್ನು ಮತ್ತು ವಿಶ್ವದರ್ಜೆಯ ಕೌಶಲ್ಯಗಳನ್ನು ಹೊಂದಿದ್ದೆವು. ಸ್ವಾತಂತ್ರ್ಯಾನಂತರ, ನಾವು ಈ ಕಾರ್ಖಾನೆಗಳನ್ನು ಮೇಲ್ದರ್ಜೆಗೇರಿಸುವ ಅಗತ್ಯವಿದೆ, ಹೊಸ ಕಾಲದ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬೇಕು. ಆದರೆ ಇದು ಹೆಚ್ಚು ಗಮನ ಹರಿಸಲಿಲ್ಲ “ಎಂದು ಪಿಎಂ ಮೋದಿ ಹೇಳಿದರು.

ಪ್ರಧಾನ ಮಂತ್ರಿಗಳ ಕಚೇರಿಯ (PMO) ಪ್ರಕಟಣೆ ಪ್ರಕಾರ ಕೇಂದ್ರವು ಭಾರತದ ರಕ್ಷಣಾ ಸನ್ನದ್ಧತೆಯಲ್ಲಿ ಸ್ವಾವಲಂಬನೆಯನ್ನು ಸುಧಾರಿಸುವ ಸಲುವಾಗಿ ಸರ್ಕಾರಿ ಇಲಾಖೆಯಿಂದ ಆರ್ಡೆನ್ಸ್ ಫ್ಯಾಕ್ಟರಿ ಬೋರ್ಡ್ ಅನ್ನು (Ordnance Factory Board) ಏಳು ಸರ್ಕಾರಿ ಸ್ವಾಮ್ಯದ ಕಾರ್ಪೊರೇಟ್ ಕಂಪನಿಗಳಾಗಿ ಪರಿವರ್ತಿಸಲು ನಿರ್ಧರಿಸಿದೆ.  ಮೇಲಿನ ಕ್ರಮವು ವರ್ಧಿತ ಕ್ರಿಯಾತ್ಮಕ ಸ್ವಾಯತ್ತತೆ, ದಕ್ಷತೆಯನ್ನು ತರುತ್ತದೆ ಮತ್ತು ಹೊಸ ಬೆಳವಣಿಗೆಯ ಸಾಮರ್ಥ್ಯ ಮತ್ತು ನಾವೀನ್ಯತೆಯನ್ನು ಹೊರಹಾಕುತ್ತದೆ ಎಂದು ಪ್ರಕಟಣೆಯಲ್ಲಿ ಹೇಳಿದೆ.

ಇದನ್ನೂ ಓದಿ: ತಾಲಿಬಾನ್ ಬದಲಾದರೂ ಪಾಕಿಸ್ತಾನ ಬದಲಾಗಲ್ಲ; ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್

ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!