AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CDS Bipin Rawat: ಸಿಡಿಎಸ್ ಬಿಪಿನ್ ರಾವತ್, ಇತರರಿಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವರಿಂದ ಅಂತಿಮ ನಮನ

ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್ ಅಂತಿಮ ನಮನ ಸಲ್ಲಿಸಿದರು.

CDS Bipin Rawat: ಸಿಡಿಎಸ್ ಬಿಪಿನ್ ರಾವತ್, ಇತರರಿಗೆ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವರಿಂದ ಅಂತಿಮ ನಮನ
ಸಿಡಿಎಸ್ ಬಿಪಿನ್ ರಾವತ್ ಪಾರ್ಥಿವ ಶರೀರದ ಎದುರು ಕೈಮುಗಿದು ನಿಂತ ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Dec 09, 2021 | 9:46 PM

Share

ದೆಹಲಿ: ತಮಿಳುನಾಡಿನ ಕೂನೂರು ಸಮೀಪ ಹೆಲಿಕಾಪ್ಟರ್​ ದುರಂತದಲ್ಲಿ ಮೃತಪಟ್ಟ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ಹಾಗೂ ಇತರ 11 ಮಂದಿಗೆ ಗುರುವಾರ ರಾತ್ರಿ ದೆಹಲಿಯ ಪಾಲಂ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್, ನೌಕಾಪಡೆ, ವಾಯುಪಡೆ ಮತ್ತು ಭೂಸೇನೆಯ ಮುಖ್ಯಸ್ಥರು ಅಂತಿಮ ನಮನ ಸಲ್ಲಿಸಿದರು.

ದುರಂತದಲ್ಲಿ ಮೃತಪಟ್ಟ 13 ಜನರ ಪೈಕಿ ನಾಲ್ವರ ಶವಗಳನ್ನು ಮಾತ್ರ ಈವರೆಗೆ ಗುರುತಿಸಲಾಗಿದೆ. ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕ ರಾವತ್, ಬ್ರಿಗೇಡಿಯರ್ ಎಲ್​.ಎಸ್.ಲಿಡೆರ್ ಮತ್ತು ಲ್ಯಾನ್ಸ್​ ನಾಯಕ್ ವಿವೇಕ್ ಕುಮಾರ್ ಅವರ ದೇಹಗಳನ್ನು ಗುರುತಿಸಲಾಗಿದ್ದು ಅಂತಿಮ ವಿಧಿವಿಧಾನ ನೆರವೇರಿಸಲು ಕುಟುಂಬ ಸದಸ್ಯರಿಗೆ ಅನುಮತಿ ನೀಡಲಾಗಿದೆ. ಇತರರ ದೇಹಗಳನ್ನು ಗುರುತು ಪತ್ತೆ ಮಾಡುವವರೆಗೆ ಸೇನಾ ನೆಲೆಯಲ್ಲಿಯೇ ಇಡಲಾಗುವುದು.

ಶುಕ್ರವಾರ ಮುಂಜಾನೆ 11 ಗಂಟೆಗೆ ಜನರಲ್ ರಾವತ್ ಮತ್ತು ಅವರ ಪತ್ನಿಯ ದೇಹಗಳನ್ನು ದೆಹಲಿಯ ಅವರ ನಿವಾಸಕ್ಕೆ ಕೊಂಡೊಯ್ಯಲಾಗುವುದು. ಅಲ್ಲಿ ಸಾರ್ವಜನಿಕರು, ಮಿಲಿಟರಿ ಮತ್ತು ನಾಗರಿಕರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಮಧ್ಯಾಹ್ನ 2 ಗಂಟೆಗೆ ಅಂತಿಮ ಯಾತ್ರೆ ಆರಂಭವಾಗಲಿದ್ದು, 4 ಗಂಟೆಗೆ ಬ್ರಾರ್​ ಸ್ಕೇರ್ ಕ್ರೆಮಟೊರಿಯಂನಲ್ಲಿ ಅಂತಿಮ ಸಂಸ್ಕಾರ ನಡೆಯಲಿದೆ.

ಪಾರ್ಥಿವ ಶರೀರಗಳಿದ್ದ ವಾಹನದ ಮೇಲೆ ಹೂಮಳೆ ಸುರಿಸಿ ಘೋಷಣೆ ಕೂಗಿದ ಸ್ಥಳೀಯರು ಕೂನೂರಿನಲ್ಲಿ ಬುಧವಾರ ಸಂಭವಿಸಿದ ಹೆಲಿಕಾಪ್ಟರ್ ಅಪಘಾತದಲ್ಲಿ (helicopter crash) ಮಡಿದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ (Bipin Rawat) ಅವರ ಪತ್ನಿ ಮತ್ತು ಇತರ ಭದ್ರತಾ ಪಡೆ ಸಿಬ್ಬಂದಿಯ ಪಾರ್ಥಿವ ಶರೀರವನ್ನು ಹೊತ್ತೊಯ್ಯುತ್ತಿದ್ದ ವಾಹನಗಳ ಮೇಲೆ ತಮಿಳುನಾಡಿನ ಸ್ಥಳೀಯರು ಹೂವಿನ ದಳ ಸುರಿದು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ನೀಲಗಿರಿ ಜಿಲ್ಲೆಯ ಮದ್ರಾಸ್ ರೆಜಿಮೆಂಟಲ್ ಸೆಂಟರ್‌ನಿಂದ (Madras Regimental Centre) ಸೂಲೂರು ವಾಯುನೆಲೆಗೆ ತೆರಳುತ್ತಿದ್ದಾಗ ಮೃತರ ಪಾರ್ಥಿವ ಶರೀರವನ್ನು ಹೊತ್ತ ಆಂಬುಲೆನ್ಸ್‌ಗಳ ಮೇಲೆ ಸ್ಥಳೀಯರು ಘೋಷಣೆಗಳನ್ನು ಕೂಗುತ್ತಾ ಹೂವಿನ ದಳಗಳನ್ನು ಸುರಿಯುವುದನ್ನು ವಿಡಿಯೊ ಎಎನ್ಐ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ. ವಾಹನಗಳು ಸೂಲೂರು ವಾಯುನೆಲೆಗೆ ಆಗಮಿಸುತ್ತಿದ್ದಂತೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಎಲ್ಲಾ 13 ಮೃತದೇಹಗಳನ್ನು ಭಾರತೀಯ ವಾಯುಪಡೆಯ C-130J ಸೂಪರ್ ಹರ್ಕ್ಯುಲಸ್ ಸಾರಿಗೆ ವಿಮಾನದಲ್ಲಿ ನವದೆಹಲಿಗೆ ತರಲಾಗುವುದು ಎಂದು ಎಎನ್ಐ ವರದಿ ಮಾಡಿದೆ. ಜನರಲ್ ರಾವತ್, ಅವರ ಪತ್ನಿ ಮಧುಲಿಕಾ ಮತ್ತು ಬ್ರಿಗೇಡಿಯರ್ ಎಲ್ಎಸ್ ಲಿಡ್ಡರ್ ಸೇರಿದಂತೆ ನಾಲ್ಕು ದೇಹಗಳನ್ನು ಗುರುತಿಸಲಾಗಿದೆ ಎಂದು ವರದಿ ಹೇಳಿದೆ.

ಗುರುವಾರ ಭಾರತೀಯ ಸೇನೆಯು ಅಪಘಾತದ ತೀವ್ರತೆಯು ದೇಹಗಳನ್ನು ಗುರುತಿಸಲು ಕಷ್ಟಕರವಾಗಿದೆ ಎಂದು ಹೇಳಿದರು. ಪ್ರೀತಿಪಾತ್ರರ ಸೂಕ್ಷ್ಮತೆ ಮತ್ತು ಭಾವನಾತ್ಮಕ ಯೋಗಕ್ಷೇಮವನ್ನು ಪರಿಗಣಿಸಿ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದರು. ಮೃತದೇಹಗಳನ್ನು ಗುರುತಿಸಲು ವೈಜ್ಞಾನಿಕ ಕ್ರಮಗಳ ಜೊತೆಗೆ ನಿಕಟ ಕುಟುಂಬ ಸದಸ್ಯರ ಸಹಾಯವನ್ನು ಸಹ ತೆಗೆದುಕೊಳ್ಳಲಾಗುವುದು ಎಂದು ಅದು ಹೇಳಿದೆ.

ಇದನ್ನೂ ಓದಿ: Fact Check ಆಕಾಶದಲ್ಲಿಯೇ ಹೊತ್ತಿ ಉರಿಯುತ್ತಿರುವ ಹೆಲಿಕಾಪ್ಟರ್; ಬಿಪಿನ್ ರಾವತ್ ಪ್ರಯಾಣಿಸಿದ್ದ ಹೆಲಿಕಾಪ್ಟರ್ ಪತನದ ವಿಡಿಯೊ ಇದಲ್ಲ ಇದನ್ನೂ ಓದಿ: Bipin Rawat: ಬಿಪಿನ್ ರಾವತ್​ಗೆ ಚಾಲಕರಾಗಿದ್ದರು ಮೈಸೂರಿನ ಯೋಧ; ಹಳೆಯ ದಿನಗಳನ್ನು ಮೆಲುಕು ಹಾಕಿದ ವೇಣು

Published On - 9:16 pm, Thu, 9 December 21

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ