AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಯೋಗಿ ಹುಟ್ಟುಹಬ್ಬಕ್ಕೆ ವಿಶ್​​ ಮಾಡದ ಪ್ರಧಾನಿ ಮೋದಿ; ಅನುಮಾನಗಳಿಗೆ ಮತ್ತಷ್ಟು ಪುಷ್ಟಿ..ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ

ಈ ವಾರದ ಪ್ರಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್​.ಸಂತೋಷ್​ ಅವರು ಉತ್ತರ ಪ್ರದೇಶ ಸರ್ಕಾರದ ಸಚಿವರ ಜತೆ, ಲಖನೌದಲ್ಲಿ ಒಂದರ ಬೆನ್ನಿಗೆ ಒಂದರಂತೆ ಸಭೆಗಳನ್ನು ನಡೆಸಿದ್ದರು. ಯೋಗಿ ಸರ್ಕಾರದ ಬಗ್ಗೆ ಫೀಡ್​​ಬ್ಯಾಕ್​ ಪಡೆದಿದ್ದರು.

ಸಿಎಂ ಯೋಗಿ ಹುಟ್ಟುಹಬ್ಬಕ್ಕೆ ವಿಶ್​​ ಮಾಡದ ಪ್ರಧಾನಿ ಮೋದಿ; ಅನುಮಾನಗಳಿಗೆ ಮತ್ತಷ್ಟು ಪುಷ್ಟಿ..ಸ್ಪಷ್ಟನೆ ನೀಡಿದ ಕೇಂದ್ರ ಸರ್ಕಾರ
ಯೋಗಿ ಆದಿತ್ಯನಾಥ್​ ಮತ್ತು ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Lakshmi Hegde

Updated on:Jun 06, 2021 | 11:58 AM

ಉತ್ತರಪ್ರದೇಶದಲ್ಲಿ ನಾಯಕತ್ವ ಬದಲಾವಣೆಯಾಗಲಿದೆಯಾ? ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ನಡುವೆ ಏನೂ ಸರಿಯಿಲ್ಲವಾ? ಯೋಗಿ ಆದಿತ್ಯನಾಥ್​ ಅವರ ಆಡಳಿತದ ಬಗ್ಗೆ ನರೇಂದ್ರ ಮೋದಿ ಸೇರಿ ಕೇಂದ್ರ ನಾಯಕರು ಅಸಮಾಧಾನಗೊಂಡಿದ್ದಾರಾ? ಇಂಥ ಹತ್ತು ಹಲವು ಪ್ರಶ್ನೆಗಳು ಇತ್ತೀಚೆಗೆ ಎದ್ದಿದ್ದವು. ಅದರಲ್ಲೂ ನಿನ್ನೆ ಜೂ.5ರಂದು ಯೋಗಿ ಆದಿತ್ಯನಾಥ್​ರ ಹುಟ್ಟಿದ ದಿನವಾಗಿದ್ದರೂ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಟ್ವಿಟರ್​​ನಲ್ಲಿ ಅವರಿಗೆ ಶುಭ ಹಾರೈಸಲಿಲ್ಲ. ಹೀಗಾಗಿ ಮತ್ತೊಂದಷ್ಟು ಅನುಮಾನಗಳು ಕಾಡಲು ಶುರುವಾಗಿವೆ. ಆದರೆ ಉತ್ತರ ಪ್ರದೇಶದಲ್ಲಿ ಸಂಪುಟ ವಿಸ್ತರಣೆ ಆಗಲಿದ್ದರೂ ನಾಯಕತ್ವದ ಬದಲಾವಣೆ ಇಲ್ಲ. ಮುಂದಿನ ವರ್ಷದ ವಿಧಾನಸಭೆ ಚುನಾವಣೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ನೇತೃತ್ವದಲ್ಲೇ ನಡೆಯಲಿದೆ ಎಂದು ಕೇಂದ್ರ ಸರ್ಕಾರದ ಮೂಲಗಳು ಸ್ಪಷ್ಟಪಡಿಸಿವೆ.

ಪ್ರಧಾನಿ ನರೇಂದ್ರ ಮೋದಿಯವರು ಸಾಮಾನ್ಯವಾಗಿ ಭಾರತದ ಪ್ರಮುಖ ರಾಜಕಾರಣಿಗಳು, ಗಣ್ಯರಷ್ಟೇ ಅಲ್ಲದೆ, ವಿದೇಶಿ ನಾಯಕರ ಹುಟ್ಟಿದ ದಿನಕ್ಕೆ ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ಹಾರೈಕೆಯ ಟ್ವೀಟ್ ಮಾಡುತ್ತಾರೆ. ಅದರ ಹೊರತಾಗಿ ಕೂಡ ಏನಾದರೂ ವಿಶೇಷ ಸಂದರ್ಭಗಳಲ್ಲಿ ಅಭಿನಂದನೆ ಸಲ್ಲಿಸುತ್ತಾರೆ. ಯೋಗಿ ಆದಿತ್ಯನಾಥ್​ ಅವರ ಕಳೆದ ವರ್ಷದ ಬರ್ತ್​ ಡೇ ದಿನವೂ ನರೇಂದ್ರ ಮೋದಿ ಟ್ವೀಟ್​ ಮಾಡಿ, ಅವರನ್ನು ಹೊಗಳಿ ಶುಭ ಹಾರೈಸಿದ್ದರು. ಆದರೆ ಈ ಸಲ ವಿಶ್​ ಮಾಡಲಿಲ್ಲ. ಇದು ಸಹಜವಾಗಿಯೇ ಟ್ವೀಟಿಗರಲ್ಲಿ ಅಚ್ಚರಿ ಮೂಡಿಸಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಬಗ್ಗೆ ನರೇಂದ್ರ ಮೋದಿ ಅಸಮಾಧಾನ ಹೊಂದಿದ್ದಾರೆ ಎಂಬರ್ಥದ ಟ್ವೀಟ್​​ಗಳೂ ಮಾಡಲ್ಪಟ್ಟಿವೆ.

ಈ ವಾರದ ಪ್ರಾರಂಭದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್​.ಸಂತೋಷ್​ ಅವರು ಉತ್ತರ ಪ್ರದೇಶ ಸರ್ಕಾರದ ಸಚಿವರ ಜತೆ, ಲಖನೌದಲ್ಲಿ ಒಂದರ ಬೆನ್ನಿಗೆ ಒಂದರಂತೆ ಸಭೆಗಳನ್ನು ನಡೆಸಿದ್ದರು. ಯೋಗಿ ಸರ್ಕಾರದ ಬಗ್ಗೆ ಫೀಡ್​​ಬ್ಯಾಕ್​ ಪಡೆದಿದ್ದರು. ಹಾಗೇ 2022ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ರಾಜ್ಯ ಘಟಕದ ಸಿದ್ಧತೆಗಳ ಬಗ್ಗೆಯೂ ಪರಿಶೀಲನೆ ಮಾಡಿದ್ದರು. ಅದಾದ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​​ ಜತೆ ಗುಪ್ತವಾಗಿ ಸಭೆ ನಡೆಸಿದ್ದರು. ರಾಜ್ಯದ ಹಲವು ಬಿಜೆಪಿ ನಾಯಕರು, ಸಚಿವರು ಕೊವಿಡ್​ 19 ನಿರ್ವಹಣೆಯಲ್ಲಿ ಸರ್ಕಾರದ ವಿಫಲತೆಯ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಿ.ಎಲ್.ಸಂತೋಷ್ ಭೇಟಿ, ಸಭೆ ನಡೆಸಿದ್ದರು. ಈ ಎಲ್ಲ ಬೆಳವಣಿಗಗಳು ಸಹಜವಾಗಿಯೇ ಒಂದಷ್ಟು ಕುತೂಹಲ, ಅನುಮಾನಗಳನ್ನು ಹುಟ್ಟಿಸಿದ್ದವು. ಆದರೆ ಅದಕ್ಕೆಲ್ಲ ನಿನ್ನೆಯೇ ಸಿಕ್ಕಿದೆ.

ಇನ್ನು ನರೇಂದ್ರ ಮೋದಿಯವರು ಯಾಕಾಗಿ ಯೋಗಿ ಆದಿತ್ಯನಾಥ್​ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಲಿಲ್ಲ ಎಂಬುದಕ್ಕೂ ಕೇಂದ್ರ ಸರ್ಕಾರದ ಮೂಲಗಳು ಸ್ಪಷ್ಟನೆ ನೀಡಿವೆ. ಕೊವಿಡ್​ 19 ಎರಡನೇ ಅಲೆ ಉಲ್ಬಣಗೊಂಡಾಗಿನಿಂದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಟ್ವಿಟರ್​ ಅಥವಾ ಇನ್ಯಾವುದೇ ಸೋಷಿಯಲ್​ ಮೀಡಿಯಾ ಮೂಲಕ, ಯಾವುದೇ ಗಣ್ಯರು, ರಾಜಕಾರಣಿಗಳ ಹುಟ್ಟುಹಬ್ಬಕ್ಕೆ ವಿಶ್​ ಮಾಡಲಿಲ್ಲ ಎಂದು ಸರ್ಕಾರ ತಿಳಿಸಿದೆ.

ಏಪ್ರಿಲ್​ ಕೊನೇ ವಾರದಿಂದ ಪಿಎಂ ಮೋದಿ ಯಾರಿಗೂ ಅಭಿನಂದನೆ, ಬರ್ತ್ ಡೇ ವಿಶ್​​ಗಳನ್ನು ತಿಳಿಸಿಲ್ಲ. ಜನರಿಗೆ ಹಬ್ಬಗಳಿಗೆ ವಿಶ್​ ಮಾಡುತ್ತಿದ್ದಾರೆ. ಆದರೆ ಯಾವುದೇ ಮುಖಂಡರು, ನಾಯಕರಿಗೆ ವೈಯಕ್ತಿಕ ವಿಶ್​ ಮಾಡೋದನ್ನು ಬಿಟ್ಟಿದ್ದಾರೆ ಎಂದು ಕೇಂದ್ರ ಸರ್ಕಾರದ ಹಿರಿಯ ಸಚಿವರೊಬ್ಬರು ತಿಳಿಸಿದ್ದಾರೆ. ಏಪ್ರಿಲ್​ 24ರಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್​ ಜನ್ಮದಿನವಿತ್ತು. ಅವರಿಗೂ ಪ್ರಧಾನಿ ಮೋದಿ ವಿಶ್​ ಮಾಡಲಿಲ್ಲ. ಮೇ 3ರಂದು ಜಾರ್ಖಂಡ ಮುಖಂಡ ಅರ್ಜುನ್​ ಮುಂದಾ ಮತ್ತು ರಾಜಸ್ಥಾನ ಸಿಎಂ ಅಶೋಕ್​ ಗೆಹ್ಲೋಟ್​ ಬರ್ತ್​ ಡೇ ಇತ್ತು. ಹಾಗೇ ಮೇ 5ರಂದು ಹರ್ಯಾಣ ಸಿಎಂ ಮನೋಹರ್​ ಲಾಲ್​ ಖಟ್ಟರ್​, ಮೇ 24ರಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್​ ಹುಟ್ಟುಹಬ್ಬವಿತ್ತು. ಅಷ್ಟೇ ಏಕೆ ಮೇ 27ರಂದು ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ಜನ್ಮದಿನವಿತ್ತು. ಇವರ್ಯಾರ ಹುಟ್ಟುಹಬ್ಬಕ್ಕೂ ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣಗಳಲ್ಲಿ ವಿಶ್​ ಮಾಡಲಿಲ್ಲ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ಬಿ.ಎಸ್.ಯಡಿಯೂರಪ್ಪ ಪ್ರಶ್ನಾತೀತ ನಾಯಕ, ಸಿಎಂ ಬದಲಾವಣೆ ಬಗ್ಗೆ ಯಾವುದೇ ಪ್ರಸ್ತಾಪ ಇಲ್ಲ: ಗೋವಿಂದ ಕಾರಜೋಳ ಪ್ರತಿಕ್ರಿಯೆ

PM Narendra Modi did not wish on Uttar Pradesh CM Yogi adityanath Birthday

Published On - 11:57 am, Sun, 6 June 21

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!