AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮಿತ್​ ಶಾ, ರಾಜನಾಥ್​ ಸಿಂಗ್​ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ; ಏನದು ಮಹತ್ವದ ವಿಷಯ?

ಇಂದು ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ನಡೆದ ಸಭೆಯಲ್ಲಿ ಅಮಿತ್​ ಶಾ, ರಾಜನಾಥ್​ ಸಿಂಗ್​ ಜತೆ ನಿರ್ಮಲಾ ಸೀತಾರಾಮನ್​, ಪಿಯೂಷ್​ ಗೋಯೆಲ್​ ಕೂಡ ಭಾಗವಹಿಸಿದ್ದರು.

ಅಮಿತ್​ ಶಾ, ರಾಜನಾಥ್​ ಸಿಂಗ್​ ಜತೆ ಪ್ರಧಾನಿ ನರೇಂದ್ರ ಮೋದಿ ಸಭೆ; ಏನದು ಮಹತ್ವದ ವಿಷಯ?
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Jun 20, 2021 | 4:13 PM

Share

ಪ್ರಧಾನಿ ನರೇಂದ್ರ ಮೋದಿಯವರು ಇಂದು ಗೃಹ ಸಚಿವ ಅಮಿತ್​ ಶಾ, ರಕ್ಷಣಾ ಸಚಿವ ರಾಜನಾಥ್​​ ಸಿಂಗ್​​ ಸೇರಿ ಹಲವು ಕೇಂದ್ರ ಸಚಿವರೊಂದಿಗೆ ತಮ್ಮ ನಿವಾಸದಲ್ಲಿ ಸಭೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದೆ. ಈ ತಿಂಗಳ ಆರಂಭದಿಂದಲೂ ಪ್ರಧಾನಿ ಮೋದಿಯವರು ಕೇಂದ್ರ ಸಚಿವರೊಂದಿಗೆ ಸಭೆ ನಡೆಸುತ್ತಲೇ ಇದ್ದಾರೆ. ಎಲ್ಲರೊಂದಿಗೂ ಒಂದೇ ಬಾರಿ ನಡೆಸದೆ, ನಾಲ್ಕೈದು ಸಚಿವರಂತೆ ಚರ್ಚೆ ನಡೆಸುತ್ತಿದ್ದಾರೆ. ಇದುವರೆಗೂ ಇಂಥ ಐದು ಸಭೆಗಳು ನಡೆದಿವೆ.

ಪ್ರಧಾನಿ ನರೇಂದ್ರ ಮೋದಿಯವರು ಶೀಘ್ರದಲ್ಲೇ ಅಂದರೆ ಈ ತಿಂಗಳ ಕೊನೆ ಅಥವಾ ಜುಲೈ ಮೊದಲ ವಾರದಲ್ಲಿ ಸಂಪುಟ ವಿಸ್ತರಣೆ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಕಾರ್ಯವೈಖರಿಯನ್ನೂ ಖುದ್ದಾಗಿ ಪರಿಶೀಲಿಸುತ್ತಿದ್ದಾರೆ. ಆಯಾ ಸಚಿವರೊಟ್ಟಿಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಕ್ಯಾಬಿನೆಟ್​ ವಿಸ್ತರಣೆ ಬಳಿಕ ಈಗಿನ ಕೆಲವರು ಸಚಿವರನ್ನು ಕೈಬಿಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದ್ದು, ಜ್ಯೋತಿರಾದಿತ್ಯ ಸಿಂಧಿಯಾ ಸೇರಿ ಹಲವು ಮೋದಿ ಸಂಪುಟ ಸೇರಲಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಹಾಗೇ, ಜೂನ್​ 24ರಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಜಮ್ಮು-ಕಾಶ್ಮೀರದ ಪ್ರಮುಖ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಉನ್ನತಮಟ್ಟದ ಸಭೆ ನಡೆಸಲಿದ್ದು, ಆ ಸಂಬಂಧ ಕೂಡ ಇಂದು ಅಮಿತ್ ಶಾ, ರಾಜನಾಥ್​ ಸಿಂಗ್​ ಜತೆ ಚರ್ಚೆ ನಡೆಸಿರಬಹುದು ಎನ್ನಲಾಗಿದೆ. ಜಮ್ಮುಕಾಶ್ಮೀರದಲ್ಲಿ ಮುಂದಿನ ವರ್ಷ ನಡೆಯಲಿರುವ ಚುನಾವಣೆ ಸಂಬಂಧ ಭೂನಕ್ಷೆ, ಜನಸಂಖ್ಯೆ ಅಧ್ಯಯನ ಇತ್ಯಾದಿ ವಿಚಾರಗಳ ಬಗ್ಗೆ ಚರ್ಚಿಸಲು ಈ ಉನ್ನತ ಮಟ್ಟದ ಸಭೆ ಕರೆಯಲಾಗಿದೆ. ಇಂದಿನ ಸಭೆಯಲ್ಲಿ ಅಮಿತ್​ ಶಾ, ರಾಜನಾಥ್​ ಸಿಂಗ್​ ಜತೆ ನಿರ್ಮಲಾ ಸೀತಾರಾಮನ್​, ಪಿಯೂಷ್​ ಗೋಯೆಲ್​ ಕೂಡ ಭಾಗವಹಿಸಿದ್ದರು.

ಇದನ್ನೂ ಓದಿ: Farmers Protest: ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸ್ಥಳೀಯ ಹಳ್ಳಿಗಳ ಜನರ ಆಕ್ರೋಶ; 10 ದಿನ ಗಡುವು ಕೊಟ್ಟ ಗ್ರಾಮಸ್ಥರು

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?