AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದೊಂದಿಗೆ ಮೋದಿ ಡಿಸ್ಕೋ ಮಾಡುತ್ತಿದ್ದಾರೆ; ಪ್ರಧಾನಿ ‘ಮುಜ್ರಾ’ ಹೇಳಿಕೆಗೆ ಅಸಾದುದ್ದೀನ್ ಓವೈಸಿ ತಿರುಗೇಟು

8 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಒಟ್ಟು 57 ಸಂಸದೀಯ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಲೋಕಸಭೆ ಚುನಾವಣೆಯ ಕೊನೆಯ ಹಂತದಲ್ಲಿ ಜೂನ್ 1ರಂದು ಮತದಾನ ನಡೆಯಲಿದೆ. ಪಿಎಂ ನರೇಂದ್ರ ಮೋದಿ (ವಾರಣಾಸಿ), ರವಿಶಂಕರ್ ಪ್ರಸಾದ್ (ಪಾಟ್ನಾ ಸಾಹಿಬ್), ಕಂಗನಾ ರನೌತ್ (ಮಂಡಿ), ಮತ್ತು ಅಭಿಷೇಕ್ ಬ್ಯಾನರ್ಜಿ (ಡೈಮಂಡ್ ಹಾರ್ಬರ್) ಸೇರಿದಂತೆ ಹಲವು ಪ್ರಮುಖ ಅಭ್ಯರ್ಥಿಗಳು ಕೊನೆಯ ಹಂತದಲ್ಲಿ ಕಣದಲ್ಲಿದ್ದಾರೆ.

ಚೀನಾದೊಂದಿಗೆ ಮೋದಿ ಡಿಸ್ಕೋ ಮಾಡುತ್ತಿದ್ದಾರೆ; ಪ್ರಧಾನಿ 'ಮುಜ್ರಾ' ಹೇಳಿಕೆಗೆ ಅಸಾದುದ್ದೀನ್ ಓವೈಸಿ ತಿರುಗೇಟು
ಅಸಾದುದ್ದೀನ್ ಓವೈಸಿ
ಸುಷ್ಮಾ ಚಕ್ರೆ
|

Updated on: May 27, 2024 | 9:42 PM

Share

ಪಾಟ್ನಾ: ಮೀಸಲಾತಿ ವಿಚಾರದಲ್ಲಿ ಇಂಡಿಯಾ ಬಣದ ವಿರುದ್ಧ ಕೆಲವು ದಿನಗಳ ಹಿಂದೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ವಾಗ್ದಾಳಿ ನಡೆಸಿದ್ದರು. ಇಂಡಿಯಾ (INDIA) ಬಣ ವೋಟ್ ಬ್ಯಾಂಕ್‌ಗಾಗಿ ಮುಸ್ಲಿಮರೆದುರು”ಗುಲಾಮಗಿರಿ” ಮತ್ತು “ಮುಜ್ರಾ” ಮಾಡುತ್ತಿದೆ ಎಂದು ಮೋದಿ ಆರೋಪಿಸಿದ್ದರು. ಇದಕ್ಕೆ ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ (Asaduddin Owaisi) ತಿರುಗೇಟು ನೀಡಿದ್ದಾರೆ.

“ವೋಟ್ ಬ್ಯಾಂಕ್‌ಗಾಗಿ ಇಂಡಿಯಾ ಒಕ್ಕೂಟ ಮುಸ್ಲಿಮರೆದುರು ಮುಜ್ರಾ ಅಥವಾ ನೃತ್ಯ ಮಾಡುತ್ತಿದೆ” ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯ ಬಗ್ಗೆ ಓವೈಸಿ ವಾಗ್ದಾಳಿ ನಡೆಸಿದ್ದಾರೆ. ಚೀನಾದ ಸೈನಿಕರು ಭಾರತದ ಭೂಪ್ರದೇಶದ ಸುಮಾರು 2,000 ಚದರ ಕಿಮೀ ವಿಸ್ತೀರ್ಣವನ್ನು ವಶಪಡಿಸಿಕೊಂಡಾಗ ಪ್ರಧಾನಿ ನರೇಂದ್ರ ಮೋದಿ ಚೀನಾದೊಂದಿಗೆ ಡಿಸ್ಕೋ ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

ಹೈದರಾಬಾದ್ ಸಂಸದ ಓವೈಸಿ ಅವರು ಭಾನುವಾರ ಬಿಹಾರದ ಪಾಟ್ಲಿಪುತ್ರ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ರ್ಯಾಲಿಯೊಂದರ ತುಣುಕನ್ನು ಹಂಚಿಕೊಂಡಿದ್ದಾರೆ. ಕಳೆದ ವಾರ ಅದೇ ಪ್ರದೇಶದಲ್ಲಿ ಪ್ರಧಾನಿಯವರು “ಮತ ಜಿಹಾದ್‌ನಲ್ಲಿ ತೊಡಗಿರುವ ಇಂಡಿಯಾ ಒಕ್ಕೂಟದವರು ಮುಸ್ಲಿಮರಿಗೆ ಮುಜ್ರಾ” ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಪಾಕಿಸ್ತಾನದಿಂದ ರಾಹುಲ್ ಗಾಂಧಿ, ಕೇಜ್ರಿವಾಲ್​ಗೆ ಬೆಂಬಲ; ಮೋದಿ ಹೇಳಿದ್ದೇನು?

“ನರೇಂದ್ರ ಮೋದಿಯವರೇ, ನೀವು ಮುಜ್ರಾ ಬಗ್ಗೆ ಮಾತನಾಡಿದ್ದೀರಿ. ಕಳೆದ 3 ವರ್ಷಗಳಿಂದ, ಚೀನಾ 2 ಸಾವಿರ ಚದರ ಕಿಲೋ ಮೀಟರ್ ಭಾರತೀಯ ಭೂಮಿಯನ್ನು ಆಕ್ರಮಿಸಿಕೊಂಡಿದೆ. ಆದರೂ ನೀವು ಚೀನಾವನ್ನು ದೂರ ಇಟ್ಟಿಲ್ಲ. ಆದ್ದರಿಂದ ನೀವು ಚೀನಾದವರೊಂದಿಗೆ ಡಿಸ್ಕೋ ಡ್ಯಾನ್ಸ್ ಮಾಡುತ್ತಿದ್ದೀರಾ? ಎಂದು ನಾನು ನಿಮ್ಮನ್ನು ಕೇಳಲು ಬಯಸುತ್ತೇನೆ” ಎಂದು ಓವೈಸಿ ಪೋಸ್ಟ್ ಮಾಡಿದ್ದಾರೆ.

“ಇದು ಪ್ರಧಾನಿ ಬಳಸಬಹುದಾದ ಭಾಷೆಯೇ? ನಮಗೆ ಮಾತನಾಡಲು ಬಾಯಿ ಇಲ್ಲ ಎಂದು ಮೋದಿ ಭಾವಿಸುತ್ತಾರೆಯೇ?” ಎಂದು ಓವೈಸಿ ಪ್ರಶ್ನಿಸಿದ್ದಾರೆ.

ಪೌರತ್ವ (ತಿದ್ದುಪಡಿ) ಕಾಯಿದೆಯನ್ನು ಮುಸ್ಲಿಮರ ಹಕ್ಕುಗಳನ್ನು ಕಸಿದುಕೊಳ್ಳಲು ತರಲಾಯಿತು ಮತ್ತು ಮೋದಿ ಈ ವಿಷಯದ ಬಗ್ಗೆ ಭಾಂಗ್ರಾ ಮಾಡುತ್ತಲೇ ಇದ್ದರು. ಅಲ್ಲದೆ, ಹಿಂದೂ ಸಭೆಗಳಲ್ಲಿ ಮುಸ್ಲಿಮರು, ವಿಶೇಷವಾಗಿ ನಮ್ಮ ತಾಯಿ ಮತ್ತು ಸಹೋದರಿಯರ ಬಗ್ಗೆ ಎಲ್ಲಾ ರೀತಿಯ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ನರೇಂದ್ರ ಮೋದಿ ಒಬಿಸಿ ಆದದ್ದು ಹೇಗೆ?’; ಜಾತಿ ಗಣತಿ ಪರ ಮತ್ತೆ ರಾಹುಲ್ ಗಾಂಧಿ ಬ್ಯಾಟಿಂಗ್

ಮೀಸಲಾತಿ ವಿಷಯದ ಬಗ್ಗೆ ಪಿಎಂ ಮೋದಿ ಇಂಡಿಯಾ ಬಣದ ಮೇಲೆ ದಾಳಿ ಮಾಡಿದ ಕೆಲವು ದಿನಗಳ ನಂತರ ಓವೈಸಿ ಈ ಹೇಳಿಕೆಗಳನ್ನು ನೀಡಿದ್ದಾರೆ. ಅದು ಮುಸ್ಲಿಂ ಮತ ಬ್ಯಾಂಕ್‌ಗಾಗಿ “ಗುಲಾಮಗಿರಿ” ಮತ್ತು “ಮುಜ್ರಾ” ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

“ನಾನು ಬಿಹಾರ, ಎಸ್‌ಸಿ, ಎಸ್‌ಟಿ, ಒಬಿಸಿ ಸಮುದಾಯಗಳಿಗೆ ಭರವಸೆ ನೀಡುತ್ತಿದ್ದೇನೆ. ಮೋದಿ ಬದುಕುವವರೆಗೂ ಅವರ ಹಕ್ಕುಗಳನ್ನು ಕಸಿದುಕೊಳ್ಳಲು ನಾನು ಬಿಡುವುದಿಲ್ಲ. ಮೋದಿಗೆ ಸಂವಿಧಾನವೇ ಸರ್ವಶ್ರೇಷ್ಠ, ಮೋದಿಯವರಿಗೆ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವನೆಗಳು ಸರ್ವೋಚ್ಚ. INDI ಮೈತ್ರಿಕೂಟವು ತಮ್ಮ ಮತಬ್ಯಾಂಕ್‌ನ ಗುಲಾಮಗಿರಿಯನ್ನು ಸ್ವೀಕರಿಸಲು ಬಯಸಿದರೆ, ಅವರು ಹಾಗೆ ಮಾಡಲು ಸ್ವತಂತ್ರರು. ಅವರು ಮುಜ್ರಾ (ನೃತ್ಯ) ಮಾಡಲು ಬಯಸಿದರೆ ಅವರು ಸ್ವತಂತ್ರರು. ನಾನು ಎಂದಿಗೂ SC, ST ಜೊತೆ ನಿಲ್ಲುತ್ತೇನೆ ಎಂದು ಮೋದಿ ಹೇಳಿದ್ದರು.

ಕಾಂಗ್ರೆಸ್‌ನ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಎನ್‌ಸಿಯ ಫಾರೂಕ್ ಅಬ್ದುಲ್ಲಾ ಮತ್ತು ಆರ್‌ಜೆಡಿಯ ತೇಜಸ್ವಿ ಯಾದವ್ ಸೇರಿದಂತೆ ಹಲವಾರು ವಿರೋಧ ಪಕ್ಷದ ನಾಯಕರು, ದೇಶದ ಇತಿಹಾಸದಲ್ಲಿ ಯಾವುದೇ ಪ್ರಧಾನಿ ವಿರೋಧ ಪಕ್ಷದ ನಾಯಕರಿಗೆ ಇಂತಹ ಪದಗಳನ್ನು ಬಳಸಿಲ್ಲ ಎಂದು ಮೋದಿಯವರ ಹೇಳಿಕೆಗೆ ತೀವ್ರ ಟೀಕೆ ವ್ಯಕ್ತಪಡಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್