AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cabinet Reshuffle: ಸಂಪುಟ ಸೇರಿದ 43 ಹೊಸ ಸಚಿವರಿಗೆ ಶುಭ ಹಾರೈಸಿ, ಗ್ರೂಪ್​ ಫೋಟೋ ಶೇರ್​ ಮಾಡಿದ ಪ್ರಧಾನಿ ಮೋದಿ..

ಗೃಹ ಸಚಿವ ಅಮಿತ್ ಶಾ ಕೂಡ ಟ್ವೀಟ್ ಮಾಡಿ, ಸಂಪುಟವನ್ನು ಹೊಸದಾಗಿ ಸೇರಿದವರಿಗೆ ಶುಭ ಕೋರಿದ್ದಾರೆ. ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ನನ್ನೆಲ್ಲ ಒಡನಾಡಿಗಳಿಗೆ ಅಭಿನಂದನೆಗಳು ಎಂದಿದ್ದಾರೆ.

Cabinet Reshuffle: ಸಂಪುಟ ಸೇರಿದ 43 ಹೊಸ ಸಚಿವರಿಗೆ ಶುಭ ಹಾರೈಸಿ, ಗ್ರೂಪ್​ ಫೋಟೋ ಶೇರ್​ ಮಾಡಿದ ಪ್ರಧಾನಿ ಮೋದಿ..
ನೂತನವಾಗಿ ಸೇರ್ಪಡೆಯಾದ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on: Jul 07, 2021 | 9:49 PM

Share

ದೆಹಲಿ: ಅಂತೂ ಬಹುದಿನಗಳಿಂದ ಬಾಕಿ ಉಳಿದಿದ್ದ ಕೇಂದ್ರ ಸಂಪುಟ ಮರು ರಚನೆ ಕಾರ್ಯ ಮುಕ್ತಾಯವಾಗಿದೆ. ಇಂದು 43 ಸಚಿವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಬಾರಿ ಕೇಂದ್ರ ಸಂಪುಟ ವಿಸ್ತರಣೆಗೂ ಮೊದಲು ಪ್ರಧಾನಿ ಮೋದಿ ಸಾಲುಸಾಲು ಸಭೆ ನಡೆಸಿದ್ದರು. ಪ್ರತಿ ಖಾತೆಯ ಸಚಿವರೊಟ್ಟಿಗೂ ಮಾತುಕತೆ ನಡೆಸಿದ್ದರು. ಅಂತೆಯೇ ಇಂದು ಹಲವು ಪ್ರಮುಖ ಸಚಿವರ ರಾಜೀನಾಮೆಯೂ ಆಗಿದೆ..ಹೊಸ ಮುಖಗಳು ಕ್ಯಾಬಿನೆಟ್​ ಸೇರಿವೆ. ಇಷ್ಟೆಲ್ಲ ಆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಒಂದು ಗ್ರೂಪ್​ ಫೋಟೋ ಶೇರ್ ಮಾಡಿಕೊಂಡು, ಹೊಸಬರಿಗೆ ಶುಭ ಹಾರೈಸಿದ್ದಾರೆ. Govt 4 Growth (ಅಭಿವೃದ್ಧಿಗಾಗಿ ಸರ್ಕಾರ) ಎಂಬ ಹ್ಯಾಷ್​ಟ್ಯಾಗ್ ಕೊಟ್ಟಿದ್ದಾರೆ.

ಎಲ್ಲ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ನನ್ನೆಲ್ಲ ಸಹೋದ್ಯೋಗಿ ಮಿತ್ರರಿಗೆ ಅಭಿನಂದನೆಗಳು. ಅವರ ಮಂತ್ರಿಮಂಡಲದ ಅವಧಿಗೆ ನನ್ನ ಶುಭ ಹಾರೈಕೆಗಳು. ನಾವೆಲ್ಲರೂ ಒಟ್ಟಾಗಿ ಈ ದೇಶದ ಜನರ ಆಕಾಂಕ್ಷೆಗಳನ್ನು ಪೂರೈಸಬೇಕು. ಸಮೃದ್ಧ, ಬಲಿಷ್ಠ ಭಾರತ ಕಟ್ಟಬೇಕು ಎಂದು ಹೇಳಿದ್ದಾರೆ.

ಹಾಗೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಟ್ವೀಟ್ ಮಾಡಿ, ಎಲ್ಲ ನೂತನ ಸಚಿವರಿಗೆ ಅಭಿನಂದನೆಗಳು. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಲಿಷ್ಠ ಭಾರತ ಕಟ್ಟೋಣ. ದೇಶದ ಅಭಿವೃದ್ಧಿಯೇ ಎಲ್ಲರ ಗುರಿಯಾಗಿರಲಿ ಎಂದಿದ್ದಾರೆ. ಹಾಗೇ ಗೃಹ ಸಚಿವ ಅಮಿತ್ ಶಾ ಕೂಡ ಟ್ವೀಟ್ ಮಾಡಿ, ಸಂಪುಟವನ್ನು ಹೊಸದಾಗಿ ಸೇರಿದವರಿಗೆ ಶುಭ ಕೋರಿದ್ದಾರೆ. ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ನನ್ನೆಲ್ಲ ಒಡನಾಡಿಗಳಿಗೆ ಅಭಿನಂದನೆಗಳು. ಸರ್ಕಾರದ ಕಲ್ಯಾಣ ನೀತಿಗಳು ಎಲ್ಲರೂ ಸೇರಿ ಜನರಿಗೆ ತಲುಪಿಸೋಣ. ಸ್ವಾವಲಂಬಿ ಭಾರತದ ಸಂಕಲ್ಪವನ್ನು ಸಾಕಾರಗೊಳಿಸೋಣ ಎಂದಿದ್ದಾರೆ. ಇನ್ನು ಸಚಿವ ನಿತಿನ್ ಗಡ್ಕರಿ ಸೇರಿ ಅನೇಕ ಪ್ರಮುಖ ನಾಯಕರು ಟ್ವೀಟ್ ಮಾಡಿ ಹೊಸಬರಿಗೆ ಶುಭಹಾರೈಸಿದ್ದಾರೆ.

ಇದನ್ನೂ ಓದಿ: Cabinet Reshuffle: ನರೇಂದ್ರ ಮೋದಿ ಸಚಿವ ಸಂಪುಟ ಸೇರಿದ ನೂತನ ಸಚಿವರ ಕಿರು ಪರಿಚಯ

PM Narendra Modi extends best wishes to 43 new inductees of his Cabinet

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ