AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cabinet Reshuffle: ಸಂಪುಟ ಸೇರಿದ 43 ಹೊಸ ಸಚಿವರಿಗೆ ಶುಭ ಹಾರೈಸಿ, ಗ್ರೂಪ್​ ಫೋಟೋ ಶೇರ್​ ಮಾಡಿದ ಪ್ರಧಾನಿ ಮೋದಿ..

ಗೃಹ ಸಚಿವ ಅಮಿತ್ ಶಾ ಕೂಡ ಟ್ವೀಟ್ ಮಾಡಿ, ಸಂಪುಟವನ್ನು ಹೊಸದಾಗಿ ಸೇರಿದವರಿಗೆ ಶುಭ ಕೋರಿದ್ದಾರೆ. ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ನನ್ನೆಲ್ಲ ಒಡನಾಡಿಗಳಿಗೆ ಅಭಿನಂದನೆಗಳು ಎಂದಿದ್ದಾರೆ.

Cabinet Reshuffle: ಸಂಪುಟ ಸೇರಿದ 43 ಹೊಸ ಸಚಿವರಿಗೆ ಶುಭ ಹಾರೈಸಿ, ಗ್ರೂಪ್​ ಫೋಟೋ ಶೇರ್​ ಮಾಡಿದ ಪ್ರಧಾನಿ ಮೋದಿ..
ನೂತನವಾಗಿ ಸೇರ್ಪಡೆಯಾದ ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Jul 07, 2021 | 9:49 PM

Share

ದೆಹಲಿ: ಅಂತೂ ಬಹುದಿನಗಳಿಂದ ಬಾಕಿ ಉಳಿದಿದ್ದ ಕೇಂದ್ರ ಸಂಪುಟ ಮರು ರಚನೆ ಕಾರ್ಯ ಮುಕ್ತಾಯವಾಗಿದೆ. ಇಂದು 43 ಸಚಿವರು ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಈ ಬಾರಿ ಕೇಂದ್ರ ಸಂಪುಟ ವಿಸ್ತರಣೆಗೂ ಮೊದಲು ಪ್ರಧಾನಿ ಮೋದಿ ಸಾಲುಸಾಲು ಸಭೆ ನಡೆಸಿದ್ದರು. ಪ್ರತಿ ಖಾತೆಯ ಸಚಿವರೊಟ್ಟಿಗೂ ಮಾತುಕತೆ ನಡೆಸಿದ್ದರು. ಅಂತೆಯೇ ಇಂದು ಹಲವು ಪ್ರಮುಖ ಸಚಿವರ ರಾಜೀನಾಮೆಯೂ ಆಗಿದೆ..ಹೊಸ ಮುಖಗಳು ಕ್ಯಾಬಿನೆಟ್​ ಸೇರಿವೆ. ಇಷ್ಟೆಲ್ಲ ಆದ ಬಳಿಕ ಪ್ರಧಾನಿ ನರೇಂದ್ರ ಮೋದಿ ಒಂದು ಗ್ರೂಪ್​ ಫೋಟೋ ಶೇರ್ ಮಾಡಿಕೊಂಡು, ಹೊಸಬರಿಗೆ ಶುಭ ಹಾರೈಸಿದ್ದಾರೆ. Govt 4 Growth (ಅಭಿವೃದ್ಧಿಗಾಗಿ ಸರ್ಕಾರ) ಎಂಬ ಹ್ಯಾಷ್​ಟ್ಯಾಗ್ ಕೊಟ್ಟಿದ್ದಾರೆ.

ಎಲ್ಲ ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕಾರ ಮಾಡಿದ ನನ್ನೆಲ್ಲ ಸಹೋದ್ಯೋಗಿ ಮಿತ್ರರಿಗೆ ಅಭಿನಂದನೆಗಳು. ಅವರ ಮಂತ್ರಿಮಂಡಲದ ಅವಧಿಗೆ ನನ್ನ ಶುಭ ಹಾರೈಕೆಗಳು. ನಾವೆಲ್ಲರೂ ಒಟ್ಟಾಗಿ ಈ ದೇಶದ ಜನರ ಆಕಾಂಕ್ಷೆಗಳನ್ನು ಪೂರೈಸಬೇಕು. ಸಮೃದ್ಧ, ಬಲಿಷ್ಠ ಭಾರತ ಕಟ್ಟಬೇಕು ಎಂದು ಹೇಳಿದ್ದಾರೆ.

ಹಾಗೇ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್​ ಟ್ವೀಟ್ ಮಾಡಿ, ಎಲ್ಲ ನೂತನ ಸಚಿವರಿಗೆ ಅಭಿನಂದನೆಗಳು. ಪ್ರಧಾನಿ ಮೋದಿ ನೇತೃತ್ವದಲ್ಲಿ ಬಲಿಷ್ಠ ಭಾರತ ಕಟ್ಟೋಣ. ದೇಶದ ಅಭಿವೃದ್ಧಿಯೇ ಎಲ್ಲರ ಗುರಿಯಾಗಿರಲಿ ಎಂದಿದ್ದಾರೆ. ಹಾಗೇ ಗೃಹ ಸಚಿವ ಅಮಿತ್ ಶಾ ಕೂಡ ಟ್ವೀಟ್ ಮಾಡಿ, ಸಂಪುಟವನ್ನು ಹೊಸದಾಗಿ ಸೇರಿದವರಿಗೆ ಶುಭ ಕೋರಿದ್ದಾರೆ. ಹೊಸದಾಗಿ ಪ್ರಮಾಣವಚನ ಸ್ವೀಕರಿಸಿದ ನನ್ನೆಲ್ಲ ಒಡನಾಡಿಗಳಿಗೆ ಅಭಿನಂದನೆಗಳು. ಸರ್ಕಾರದ ಕಲ್ಯಾಣ ನೀತಿಗಳು ಎಲ್ಲರೂ ಸೇರಿ ಜನರಿಗೆ ತಲುಪಿಸೋಣ. ಸ್ವಾವಲಂಬಿ ಭಾರತದ ಸಂಕಲ್ಪವನ್ನು ಸಾಕಾರಗೊಳಿಸೋಣ ಎಂದಿದ್ದಾರೆ. ಇನ್ನು ಸಚಿವ ನಿತಿನ್ ಗಡ್ಕರಿ ಸೇರಿ ಅನೇಕ ಪ್ರಮುಖ ನಾಯಕರು ಟ್ವೀಟ್ ಮಾಡಿ ಹೊಸಬರಿಗೆ ಶುಭಹಾರೈಸಿದ್ದಾರೆ.

ಇದನ್ನೂ ಓದಿ: Cabinet Reshuffle: ನರೇಂದ್ರ ಮೋದಿ ಸಚಿವ ಸಂಪುಟ ಸೇರಿದ ನೂತನ ಸಚಿವರ ಕಿರು ಪರಿಚಯ

PM Narendra Modi extends best wishes to 43 new inductees of his Cabinet

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ