AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Indian Air Force Day: ನಿಮ್ಮಿಂದಲೇ ಭಾರತದ ವಾಯು ಪ್ರದೇಶ ಸುರಕ್ಷಿತವಾಗಿದೆ: ಪ್ರಧಾನಿ ಮೋದಿ

ನಿಮ್ಮಿಂದಲೇ ಭಾರತದ ವಾಯು ಪ್ರದೇಶ ಸುರಕ್ಷಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಭಾರತೀಯ ವಾಯುಪಡೆ ದಿನದ ಹಿನ್ನೆಲೆಯಲ್ಲಿ ವಾಯು ಯೋಧರು ಹಾಗೂ ಅವರ ಕುಟುಂಬಕ್ಕೆ ಶುಭಾಶಯ ತಿಳಿಸಿದರು. ಭಾರತದ ವಾಯುಪಡೆಯ ಶೌರ್ಯ, ಬದ್ಧತೆ ಮತ್ತು ಸಮರ್ಪಣೆಯ ಬಗ್ಗೆ ಭಾರತವು ಹೆಮ್ಮೆ ಪಡುತ್ತದೆ. ಅವರ ಮಹಾನ್ ಸೇವೆ ಹಾಗೂ ತ್ಯಾಗದಿಂದಲೇ ನಮ್ಮ ವಾಯು ಪ್ರದೇಶ ಸುರಕ್ಷಿತವಾಗಿದೆ. ದೇಶದ ಸಮಗ್ರತೆ ಹಾಗೂ ಸಾರ್ವಭೌಮತ್ವ ಕಾಪಾಡುವಲ್ಲಿ ಅವರ ಕೊಡುಗೆಗೆ ಸಾಟಿಯಿಲ್ಲ ಎಂದರು.

Indian Air Force Day: ನಿಮ್ಮಿಂದಲೇ ಭಾರತದ ವಾಯು ಪ್ರದೇಶ ಸುರಕ್ಷಿತವಾಗಿದೆ: ಪ್ರಧಾನಿ ಮೋದಿ
ಭಾರತೀಯ ವಾಯು ಪಡೆImage Credit source: Jagaran
Follow us
ನಯನಾ ರಾಜೀವ್
|

Updated on: Oct 08, 2023 | 12:06 PM

ನಿಮ್ಮಿಂದಲೇ ಭಾರತದ ವಾಯು ಪ್ರದೇಶ ಸುರಕ್ಷಿತವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಭಾರತೀಯ ವಾಯುಪಡೆ ದಿನ(Indian Air Force Day)ದ ಹಿನ್ನೆಲೆಯಲ್ಲಿ ವಾಯು ಯೋಧರು ಹಾಗೂ ಅವರ ಕುಟುಂಬಕ್ಕೆ ಶುಭಾಶಯ ತಿಳಿಸಿದರು. ಭಾರತದ ವಾಯುಪಡೆಯ ಶೌರ್ಯ, ಬದ್ಧತೆ ಮತ್ತು ಸಮರ್ಪಣೆಯ ಬಗ್ಗೆ ಭಾರತವು ಹೆಮ್ಮೆ ಪಡುತ್ತದೆ. ಅವರ ಮಹಾನ್ ಸೇವೆ ಹಾಗೂ ತ್ಯಾಗದಿಂದಲೇ ನಮ್ಮ ವಾಯು ಪ್ರದೇಶ ಸುರಕ್ಷಿತವಾಗಿದೆ. ದೇಶದ ಸಮಗ್ರತೆ ಹಾಗೂ ಸಾರ್ವಭೌಮತ್ವ ಕಾಪಾಡುವಲ್ಲಿ ಅವರ ಕೊಡುಗೆಗೆ ಸಾಟಿಯಿಲ್ಲ ಎಂದರು.

90 ವರ್ಷಗಳ ಹಿಂದೆ 1932ರ ಅಕ್ಟೋಬರ್ 8 ರಂದು ಭಾರತೀಯ ವಾಯುಪಡೆಯನ್ನು ಸ್ಥಾಪಿಸಲಾಯಿತು. ಭಾರತದ ಎಲ್ಲಾ ವಾಯುನೆಲೆಗಳಲ್ಲಿ ಭಾರತೀಯ ವಾಯುಪಡೆ ದಿನವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.

ಪ್ರಯಾಗರಾಜ್‌ನಲ್ಲಿ ವಾಯುಪಡೆಯ ವೈಮಾನಿಕ ಪ್ರದರ್ಶನ ನಡೆಯುತ್ತಿದೆ. ಮಾಹಿತಿ ಪ್ರಕಾರ, ಭಾರತೀಯ ಯೋಧರು ಸುಖೋಯ್, ತೇಜಸ್ ಮತ್ತು ರಫೇಲ್ ಸೇರಿದಂತೆ ಸುಮಾರು 100 ಯುದ್ಧ ವಿಮಾನಗಳೊಂದಿಗೆ ವಾಯುಪಡೆಯ ಶಕ್ತಿಯನ್ನು ಪ್ರದರ್ಶಿಸುತ್ತಿದ್ದಾರೆ. ಈ ಏರ್ ಶೋ ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಮುಖ್ಯ ಅತಿಥಿಯಾಗಿದ್ದಾರೆ.

ಮತ್ತಷ್ಟು ಓದಿ: Indian Air Force Day 2023: 19 ಯೋಧರೊಂದಿಗೆ ಪ್ರಾರಂಭವಾದ ಭಾರತೀಯ ವಾಯುಪಡೆ, ಇಂದು ವಿಶ್ವದ 4ನೇ ಪ್ರಬಲ ವಾಯುಸೇನೆ

ರಾಜ್ಯ ಕೈಗಾರಿಕಾ ಅಭಿವೃದ್ಧಿ ಸಚಿವ ನಂದಗೋಪಾಲ್ ಗುಪ್ತಾ, ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ, ಸೇನಾ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಮತ್ತು ಜನರಲ್ ಆಫೀಸರ್ ಕಮಾಂಡಿಂಗ್, ಸೆಂಟ್ರಲ್ ಏರ್ ಕಮಾಂಡ್, ಏರ್ ಮಾರ್ಷಲ್ ಆರ್.ಜಿ. ಆಫ್. ಕಪೂರ್ ಕೂಡ ಇದ್ದಾರೆ.

ಭಾರತೀಯ ವಾಯುಪಡೆಗೆ ಹೊಸ ಧ್ವಜ ಇಂದು ಭಾರತೀಯ ವಾಯುಪಡೆ ಹೊಸ ಧ್ವಜವನ್ನು ಸ್ವೀಕರಿಸಿದೆ. 72 ವರ್ಷಗಳ ನಂತರ ಈ ಬದಲಾವಣೆ ಮಾಡಲಾಗಿದೆ. ಏರ್ ಸ್ಟಾಫ್ ಮುಖ್ಯಸ್ಥ ಚೀಫ್ ಏರ್ ಮಾರ್ಷಲ್ ವಿಆರ್ ಚೌಧರಿ ಅವರು ಪರೇಡ್‌ನಲ್ಲಿ ಧ್ವಜವನ್ನು ಬದಲಾಯಿಸಿದರು ಮತ್ತು ವಾಯು ಯೋಧರಿಗೆ ಪ್ರಮಾಣ ವಚನ ಬೋಧಿಸಿದರು. ಬಮ್ರೌಲಿಯಲ್ಲಿ ನಡೆಯುವ ವಿಧ್ಯುಕ್ತ ಮೆರವಣಿಗೆಯಲ್ಲಿ ಸ್ಕೈ ಪ್ಯಾರಾ ಜಂಪರ್‌ಗಳು ತಮ್ಮ ಕೈಚಳಕವನ್ನು ತೋರಿಸಲಿದ್ದಾರೆ. ಮೊದಲ ಬಾರಿಗೆ ಮಹಿಳಾ ಅಗ್ನಿಶಾಮಕ ಸಿಬ್ಬಂದಿಯ ಬೆಟಾಲಿಯನ್ ಕೂಡ ಪರೇಡ್‌ನಲ್ಲಿ ಸೇರ್ಪಡೆಗೊಂಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ರಾಕೇಶ್ ಪೂಜಾರಿ ಪ್ರತಿಭೆ ಕಂಡು ದರ್ಶನ್ ಕೂಡ ಫೋಟೋ ತೆಗೆಸಿಕೊಂಡಿದ್ರು: ರಘು
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ