AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PMGKY 2021: ದೀಪಾವಳಿವರೆಗೂ ಮುಂದುವರಿದ ಪ್ರಧಾನಮಂತ್ರಿ ಗರೀಬ್​ ಕಲ್ಯಾಣ್​ ಯೋಜನೆ; ಅಪ್ಲೈ ಮಾಡುವ ವಿಧಾನ ಇಲ್ಲಿದೆ..

Pradhan Mantri Garib Kalyan Yojana: ಇದೀಗ ಮುಂದುವರಿದಿರುವ ಗರೀಬ್​ ಕಲ್ಯಾಣ್​ ಯೋಜನೆಯಿಂದ ಬಡವರು ನಿಟ್ಟುಸಿರು ಬಿಡುವಂತಾಗಿದೆ. ಪ್ರಸ್ತುತ ಬಹುತೇಕ ರಾಜ್ಯಗಳಲ್ಲಿ ಲಾಕ್​ಡೌನ್​, ಕರ್ಫ್ಯೂದಂತ ಕೊವಿಡ್​ 19 ನಿಯಂತ್ರಣ ಕ್ರಮಗಳನ್ನು ಹೇರಲಾಗಿದ್ದರಿಂದ ದುಡಿಮೆ ಕಷ್ಟವೇ ಆಗಿತ್ತು.

PMGKY 2021: ದೀಪಾವಳಿವರೆಗೂ ಮುಂದುವರಿದ ಪ್ರಧಾನಮಂತ್ರಿ ಗರೀಬ್​ ಕಲ್ಯಾಣ್​ ಯೋಜನೆ; ಅಪ್ಲೈ ಮಾಡುವ ವಿಧಾನ ಇಲ್ಲಿದೆ..
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on:Jun 08, 2021 | 10:22 AM

Share

ದೆಹಲಿ: ಕೊವಿಡ್​ 19 ಸಾಂಕ್ರಾಮಿಕದಿಂದ ಬಿಕ್ಕಟ್ಟಿನ ಪರಿಸ್ಥಿತಿ ಮುಂದುವರಿದಿರುವ ಹಿನ್ನೆಲೆಯಲ್ಲಿ, ಪ್ರಧಾನಮಂತ್ರಿ ಗರೀಬ್​ ಕಲ್ಯಾಣ್​ ಯೋಜನೆಯನ್ನು ದೀಪಾವಳಿವರೆಗೂ ಮುಂದುವರಿಸುವುದಾಗಿ ಪ್ರಧಾನಿ ಮೋದಿ ನಿನ್ನೆ ಘೋಷಣೆ ಮಾಡಿದ್ದಾರೆ. ಅದರ ಅನ್ವಯ ದೇಶದ 80 ಕೋಟಿ ನಾಗರಿಕರಿಗೆ ದೀಪಾವಳಿಯವರೆಗೆ ಉಚಿತವಾಗಿ ಆಹಾರ ಧಾನ್ಯ ವಿತರಣೆ ಮಾಡುತ್ತೇವೆ. ಇಲ್ಲಿರುವ ಬಡವರು ಯಾರೂ ಹಸಿವಿನಿಂದ ಮಲಗಬಾರದು ಎಂಬುದೇ ನಮ್ಮ ಉದ್ದೇಶ ಎಂದು ನಿನ್ನೆ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಮಾತನಾಡುವ ವೇಳೆ ಹೇಳಿದ್ದಾರೆ.

2020ರ ಅಕ್ಟೋಬರ್​​ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮೊದಲ ಬಾರಿಗೆ ಈ ಉಚಿತ ಆಹಾರ ಧಾನ್ಯ ವಿತರಣೆಯ ಘೋಷಣೆ ಮಾಡಿದ್ದರು. 1.5 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ, 80 ಕೋಟಿ ಬಡವರಿಗೆ, ಏಳುತಿಂಗಳವರೆಗೆ ಉಚಿತ ಆಹಾರ-ಧಾನ್ಯವನ್ನು ಕೇಂದ್ರಸರ್ಕಾರ ಪೂರೈಸಲಿದೆ ಎಂದು ಹೇಳಿದ್ದರು. ಅದನ್ನೀಗ ದೀಪಾವಳಿಯವರೆಗೂ ಮುಂದುವರಿಸಿದ್ದಾರೆ. ಹಾಗೇ, ಜೂನ್​ 21ರ ನಂತರ ದೇಶದ ಎಲ್ಲರಿಗೂ ಉಚಿತವಾಗಿ ಕೊರೊನಾ ಲಸಿಕೆ ನೀಡುವುದಾಗಿಯೂ ನರೇಂದ್ರ ಮೋದಿ ತಿಳಿಸಿದ್ದಾರೆ.

ಮುಂಬರುವ ದಿನಗಳಲ್ಲಿ ದೇಶದಲ್ಲಿ ಲಸಿಕೆ ಉತ್ಪಾದನೆ ಪ್ರಮಾಣ ಜಾಸ್ತಿಯಾಗಲಿದೆ. ಸದ್ಯ ದೇಶದ 7 ವಿವಿಧ ಕಂಪನಿಗಳು ವಿವಿಧ ರೀತಿಯ ಲಸಿಕೆ ಉತ್ಪಾದನೆಯಲ್ಲಿ ತೊಡಗಿವೆ. ಮೂರು ಲಸಿಕೆಗಳ ಕ್ಲಿನಿಕಲ್​ ಟ್ರಯಲ್​ ನಡೆಯುತ್ತಿದೆ ಎಂದೂ ಪ್ರಧಾನಿ ನರೇಂದ್ರ ಮೋದಿ ನಿನ್ನೆ ತಿಳಿಸಿದ್ದಾರೆ.

ಇದೀಗ ಮುಂದುವರಿದಿರುವ ಗರೀಬ್​ ಕಲ್ಯಾಣ್​ ಯೋಜನೆಯಿಂದ ಬಡವರು ನಿಟ್ಟುಸಿರು ಬಿಡುವಂತಾಗಿದೆ. ಪ್ರಸ್ತುತ ಬಹುತೇಕ ರಾಜ್ಯಗಳಲ್ಲಿ ಲಾಕ್​ಡೌನ್​, ಕರ್ಫ್ಯೂದಂತ ಕೊವಿಡ್​ 19 ನಿಯಂತ್ರಣ ಕ್ರಮಗಳನ್ನು ಹೇರಲಾಗಿದ್ದರಿಂದ ದುಡಿಮೆ ಕಷ್ಟವೇ ಆಗಿತ್ತು. ಹೀಗಿರುವಾಗ ಗರೀಬ್ ಕಲ್ಯಾಣ್​ ಯೋಜನೆ ತುಂಬ ಅನುಕೂಲವಾಗಿದ್ದು, ಇದಕ್ಕಾಗಿ

ಆನ್​​ಲೈನ್​ನಲ್ಲಿ ಅಪ್ಲೈ ಮಾಡುವ ವಿಧಾನ ಇಲ್ಲಿದೆ.. 1. ಮೊದಲು https://pmuy.gov.in ವೆಬ್​​ಸೈಟ್​​ಗೆ ಭೇಟಿಕೊಡಿ 2. ಅಲ್ಲಿ ಹೋಂ ಪೇಜ್​​ನಲ್ಲಿ ಕಾಣಿಸುವ ಸ್ಕೀಮ್​​ ಆಯ್ಕೆ ಮಾಡಿ, ಅದರ ಫಾರ್ಮ್​​​ನ್ನು ಡೌನ್​​ಲೋಡ್ ಮಾಡಿ. 3. ಉಜ್ವಲ ಯೋಜನೆ ಫಾರ್ಮ್​​ನ್ನು ಸರಿಯಾಗಿ ತುಂಬಿ ನಂತರ ಸಬ್​ಮಿಟ್​ ಬಟನ್​ ಒತ್ತಿ. 4. ಈ ಯೋಜನೆಗೆ ಅಪ್ಲೈ ಮಾಡುವಾಗ ಆಧಾರ್​ಕಾರ್ಡ್​, ರೇಶನ್​ ಕಾರ್ಡ್​, ಬ್ಯಾಂಕ್​ ಪಾಸ್​​ಬುಕ್​ ಮತ್ತು ವೋಟರ್​ ಐಡಿ ಕಾರ್ಡ್​ಗಳ ದೃಢೀಕರಣ ಅತ್ಯಗತ್ಯವಾಗಿದೆ. 5. ಅತಿಮುಖ್ಯವಾಗಿ ಬಿಪಿಎಲ್​ ಕಾರ್ಡ್​ ಹೊಂದಿರುವವರಿಗೆ ಮಾತ್ರ ಈ ಯೋಜನೆ ಅನ್ವಯ ಆಗುತ್ತದೆ.

ಇದನ್ನೂ ಓದಿ: ಕೊರೊನಾದಿಂದ ಗುಣಮುಖರಾದ ಮಕ್ಕಳಲ್ಲಿ ‘ಮಿಸ್ಸಿ’ ಸಮಸ್ಯೆ, ಬಾಗಲಕೋಟೆಯಲ್ಲಿ ಐವರಿಗೆ ಚಿಕಿತ್ಸೆ

(PM Narendra Modi extends Pradhan Mantri Garib Kalyan Yojana check here to know apply method)

Published On - 10:15 am, Tue, 8 June 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ