AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kisan Drone: 100 ಕಿಸಾನ್​ ಡ್ರೋನ್​​ಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ; ಆಧುನಿಕ ಕೃಷಿ ಪದ್ಧತಿಯಲ್ಲೊಂದು ಹೊಸ ಅಧ್ಯಾಯ

ಈ ಬಾರಿಯ ಗಣರಾಜ್ಯೋತ್ಸವ ಬೀಟಿಂಗ್​ ರಿಟ್ರೀಟ್​ ಆಚರಣೆಯಲ್ಲಿ 100 ಡ್ರೋನ್​​ಗಳು ಪ್ರದರ್ಶನ ನೀಡಿದ್ದವು. ಹಾಗೇ, ಮುಂದಿನ ಎರಡು ವರ್ಷಗಳಲ್ಲಿ ಗರುಡಾ ಏರೋಸ್ಪೇಸ್ ಸುಮಾರು 1 ಲಕ್ಷ ಡ್ರೋನ್​​ಗಳ ತಯಾರಿಕೆಯ ಗುರಿ ಹೊಂದಿದೆ ಎಂಬ ಮಾಹಿತಿಯನ್ನು ನನಗೆ ನೀಡಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Kisan Drone: 100 ಕಿಸಾನ್​ ಡ್ರೋನ್​​ಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ; ಆಧುನಿಕ ಕೃಷಿ ಪದ್ಧತಿಯಲ್ಲೊಂದು ಹೊಸ ಅಧ್ಯಾಯ
ಕಿಸಾನ್​ ಡ್ರೋನ್​​ಗಳಿಗೆ ಪ್ರಧಾನಿ ನರೇಂದ್ರ ಮೋದಿಯವರಿಂದ ಹಸಿರು ನಿಶಾನೆ
TV9 Web
| Updated By: Lakshmi Hegde|

Updated on:Feb 19, 2022 | 11:47 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ನಿನ್ನೆ (ಫೆ.18) ಭಾರತದ ವಿವಿಧ ನಗರಗಳು, ಪಟ್ಟಣಗಳಲ್ಲಿ 100 ಕಿಸಾನ್​ ಡ್ರೋನ್​​ಗಳಿಗೆ (Kisan Drones) ವಿಡಿಯೋ ಕಾನ್ಫರೆನ್ಸ್​ ಮೂಲಕ ಹಸಿರು ನಿಶಾನೆ ತೋರಿದರು.  ಕೃಷಿ ಭೂಮಿಗಳಿಗೆ ಕೀಟನಾಶಕ ಸಿಂಪಡಿಸುವ ಡ್ರೋನ್​ಗಳು ಇವಾಗಿದ್ದು, ಇದರಿಂದ ರೈತರಿಗೆ ತುಂಬ ಅನುಕೂಲವಾಗಲಿವೆ. ಹಾಗೇ, ಆಧುನಿಕ ಕೃಷಿ ಪದ್ಧತಿಯ ನಿರ್ಮಾಣದಲ್ಲಿ ಇದೊಂದು ಹೊಸ ಅಧ್ಯಾಯವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು.

100 ಕಿಸಾನ್​ ಡ್ರೋನ್​ಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ಮೊದಲು ಡ್ರೋನ್​ ಎಂದರೆ ಕೇವಲ ಸೇನೆಗೆ ಸಂಬಂಧಪಟ್ಟಿದ್ದು, ವೈರಿಗಳೊಂದಿಗೆ ಹೋರಾಡಲು ಬಳಸುವಂಥದ್ದು ಎಂದು ಭಾವಿಸಲಾಗುತ್ತಿತ್ತು. ಆದರೆ ಪ್ರಸ್ತುತ 21ನೇ ಶತಮಾನದಲ್ಲಿ ಆಧುನಿಕ ಕೃಷಿ ಪದ್ಧತಿಯೆಡೆಗಿನ ಒಂದು ಹೆಜ್ಜೆಯಾಗಿ ಪರಿಗಣಿಸಲ್ಪಟ್ಟಿದೆ. ಇದೊಂದು ಹೊಸ ಅಧ್ಯಾಯ. ಈ ಕಿಸಾನ್​ ಡ್ರೋನ್​​ಗಳಿಂದಾಗಿ ಡ್ರೋನ್​ ವಲಯದ ಅಭಿವೃದ್ಧಿಯಲ್ಲಿ ಮೈಲಿಗಲ್ಲು ಸೃಷ್ಟಿಯಾಗುವ ಜತೆ, ಅನಂತ ಅವಕಾಶಗಳು ಸೃಷ್ಟಿಯಾಗುತ್ತವೆ ಎಂಬ ಬಗ್ಗೆ ನನಗೆ ಖಾತ್ರಿಯಿದೆ ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಪ್ರಧಾನಿ ಮೋದಿ, ಈ ಬಾರಿಯ ಗಣರಾಜ್ಯೋತ್ಸವ ಬೀಟಿಂಗ್​ ರಿಟ್ರೀಟ್​ ಆಚರಣೆಯಲ್ಲಿ 100 ಡ್ರೋನ್​​ಗಳು ಪ್ರದರ್ಶನ ನೀಡಿದ್ದವು. ಹಾಗೇ, ಮುಂದಿನ ಎರಡು ವರ್ಷಗಳಲ್ಲಿ ಗರುಡಾ ಏರೋಸ್ಪೇಸ್ ಸುಮಾರು 1 ಲಕ್ಷ ಡ್ರೋನ್​​ಗಳ ತಯಾರಿಕೆಯ ಗುರಿ ಹೊಂದಿದೆ ಎಂಬ ಮಾಹಿತಿಯನ್ನು ನನಗೆ ನೀಡಲಾಗಿದೆ. ಇದು ಯುವಜನರಿಗೆ ಉದ್ಯೋಗಾವಕಾಶ ನೀಡುತ್ತದೆ. ಅಷ್ಟೇ ಅಲ್ಲ, ಸಂಶೋಧನಾಸಕ್ತರಿಗೂ ಹೊಸ ಅವಕಾಶ ತೆರೆದುಕೊಳ್ಳಲಿದೆ ಎಂದು ಹೇಳಿದರು.

ದೇಶದಲ್ಲಿ ಸ್ವಾಮಿತ್ವ ಯೋಜನೆಯಡಿ, ಡ್ರೋನ್​​ ಮೂಲಕ ಭೂ ದಾಖಲೀಕರಣ ಮಾಡಲಾಗುತ್ತಿದೆ. ಈ ಬಾರಿ ಕೊರೊನಾ ಲಸಿಕೆ ಅಭಿಯಾನ ಶುರುವಾದಾಗ ಅದೆಷ್ಟೋ ದುರ್ಗಮ ಪ್ರದೇಶಗಳಿಗೆ ಡ್ರೋನ್​ ಮೂಲಕವೇ ಔಷಧಗಳು, ಲಸಿಕೆಗಳನ್ನು ಸಾಗಿಸಲಾಗಿದೆ. ಈ ಮಧ್ಯೆ ಕೃಷಿಯಲ್ಲೂ ಡ್ರೋನ್​ ಬಳಕೆ ಪ್ರಾರಂಭವಾಗಿದ್ದು ತುಂಬ ಸಂತೋಷದ ಸಂಗತಿ. ಬೆಳೆಗಳಿಗೆ ಕೀಟನಾಶಕ ಸಿಂಪಡಿಸಲು, ಕೀಟನಾಶಕ ಸಾಗಿಸಲು ಡ್ರೋನ್​ ಬಳಸುತ್ತಿರುವುದು ಖಂಡಿತ ಹೊಸ ವಿಧಾನ ಎಂದೂ ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಸಕ್ತ ಬಾರಿಯ 2022-23ನೇ ಬಜೆಟ್​ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಕೃಷಿ ವಲಯದ ಆಧುನಿಕತೆಗೆ ಒತ್ತುಕೊಡುವುದಾಗಿ ಹೇಳಿದ್ದರು.  ಕೃಷಿ ವಲಯದ ಆಧುನಿಕರಣಕ್ಕಾಗಿ ಕೇಂದ್ರ ಸರ್ಕಾರ ಕಿಸಾನ್​ ಡ್ರೋನ್​​ಗಳಿಗೆ ಉತ್ತೇಜನ ನೀಡಲಿದೆ, ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿ, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ರೈತರಿಗೆ ಡಿಜಿಟಲ್​ ಮತ್ತು ಹೈಟೆಕ್​ ಸೇವೆಗಳನ್ನು ನೀಡಲಾಗುವುದು ಎಂದೂ ಹೇಳಿದ್ದರು. ಅಷ್ಟೇ ಅಲ್ಲ, ಬೆಳೆ ಮೌಲ್ಯಮಾಪನ, ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು, ಬೆಳೆಗಳಿಗೆ ಕೀಟನಾಶಕಗಳು, ಪೋಷಕಾಂಶಗಳ ಸಿಂಪಡಣೆ ಮಾಡಲು ಕಿಸಾನ್ ಡ್ರೋನ್​​ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದೂ ಹೇಳಿದ್ದರು.

ಇದನ್ನೂ ಓದಿ: ಕೋಲ್​ ಇಂಡಿಯಾ ಲಿಮಿಟೆಡ್​​ನಲ್ಲಿ ಉದ್ಯೋಗ ಅವಕಾಶ : ಇಲ್ಲಿದೆ ಮಾಹಿತಿ

Published On - 11:34 am, Sat, 19 February 22

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ