AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kisan Drone: 100 ಕಿಸಾನ್​ ಡ್ರೋನ್​​ಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ; ಆಧುನಿಕ ಕೃಷಿ ಪದ್ಧತಿಯಲ್ಲೊಂದು ಹೊಸ ಅಧ್ಯಾಯ

ಈ ಬಾರಿಯ ಗಣರಾಜ್ಯೋತ್ಸವ ಬೀಟಿಂಗ್​ ರಿಟ್ರೀಟ್​ ಆಚರಣೆಯಲ್ಲಿ 100 ಡ್ರೋನ್​​ಗಳು ಪ್ರದರ್ಶನ ನೀಡಿದ್ದವು. ಹಾಗೇ, ಮುಂದಿನ ಎರಡು ವರ್ಷಗಳಲ್ಲಿ ಗರುಡಾ ಏರೋಸ್ಪೇಸ್ ಸುಮಾರು 1 ಲಕ್ಷ ಡ್ರೋನ್​​ಗಳ ತಯಾರಿಕೆಯ ಗುರಿ ಹೊಂದಿದೆ ಎಂಬ ಮಾಹಿತಿಯನ್ನು ನನಗೆ ನೀಡಲಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

Kisan Drone: 100 ಕಿಸಾನ್​ ಡ್ರೋನ್​​ಗಳಿಗೆ ಚಾಲನೆ ನೀಡಿದ ಪ್ರಧಾನಿ ನರೇಂದ್ರ ಮೋದಿ; ಆಧುನಿಕ ಕೃಷಿ ಪದ್ಧತಿಯಲ್ಲೊಂದು ಹೊಸ ಅಧ್ಯಾಯ
ಕಿಸಾನ್​ ಡ್ರೋನ್​​ಗಳಿಗೆ ಪ್ರಧಾನಿ ನರೇಂದ್ರ ಮೋದಿಯವರಿಂದ ಹಸಿರು ನಿಶಾನೆ
TV9 Web
| Edited By: |

Updated on:Feb 19, 2022 | 11:47 AM

Share

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ನಿನ್ನೆ (ಫೆ.18) ಭಾರತದ ವಿವಿಧ ನಗರಗಳು, ಪಟ್ಟಣಗಳಲ್ಲಿ 100 ಕಿಸಾನ್​ ಡ್ರೋನ್​​ಗಳಿಗೆ (Kisan Drones) ವಿಡಿಯೋ ಕಾನ್ಫರೆನ್ಸ್​ ಮೂಲಕ ಹಸಿರು ನಿಶಾನೆ ತೋರಿದರು.  ಕೃಷಿ ಭೂಮಿಗಳಿಗೆ ಕೀಟನಾಶಕ ಸಿಂಪಡಿಸುವ ಡ್ರೋನ್​ಗಳು ಇವಾಗಿದ್ದು, ಇದರಿಂದ ರೈತರಿಗೆ ತುಂಬ ಅನುಕೂಲವಾಗಲಿವೆ. ಹಾಗೇ, ಆಧುನಿಕ ಕೃಷಿ ಪದ್ಧತಿಯ ನಿರ್ಮಾಣದಲ್ಲಿ ಇದೊಂದು ಹೊಸ ಅಧ್ಯಾಯವಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು.

100 ಕಿಸಾನ್​ ಡ್ರೋನ್​ಗಳಿಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಈ ಮೊದಲು ಡ್ರೋನ್​ ಎಂದರೆ ಕೇವಲ ಸೇನೆಗೆ ಸಂಬಂಧಪಟ್ಟಿದ್ದು, ವೈರಿಗಳೊಂದಿಗೆ ಹೋರಾಡಲು ಬಳಸುವಂಥದ್ದು ಎಂದು ಭಾವಿಸಲಾಗುತ್ತಿತ್ತು. ಆದರೆ ಪ್ರಸ್ತುತ 21ನೇ ಶತಮಾನದಲ್ಲಿ ಆಧುನಿಕ ಕೃಷಿ ಪದ್ಧತಿಯೆಡೆಗಿನ ಒಂದು ಹೆಜ್ಜೆಯಾಗಿ ಪರಿಗಣಿಸಲ್ಪಟ್ಟಿದೆ. ಇದೊಂದು ಹೊಸ ಅಧ್ಯಾಯ. ಈ ಕಿಸಾನ್​ ಡ್ರೋನ್​​ಗಳಿಂದಾಗಿ ಡ್ರೋನ್​ ವಲಯದ ಅಭಿವೃದ್ಧಿಯಲ್ಲಿ ಮೈಲಿಗಲ್ಲು ಸೃಷ್ಟಿಯಾಗುವ ಜತೆ, ಅನಂತ ಅವಕಾಶಗಳು ಸೃಷ್ಟಿಯಾಗುತ್ತವೆ ಎಂಬ ಬಗ್ಗೆ ನನಗೆ ಖಾತ್ರಿಯಿದೆ ಎಂದು ಹೇಳಿದರು.

ಮುಂದುವರಿದು ಮಾತನಾಡಿದ ಪ್ರಧಾನಿ ಮೋದಿ, ಈ ಬಾರಿಯ ಗಣರಾಜ್ಯೋತ್ಸವ ಬೀಟಿಂಗ್​ ರಿಟ್ರೀಟ್​ ಆಚರಣೆಯಲ್ಲಿ 100 ಡ್ರೋನ್​​ಗಳು ಪ್ರದರ್ಶನ ನೀಡಿದ್ದವು. ಹಾಗೇ, ಮುಂದಿನ ಎರಡು ವರ್ಷಗಳಲ್ಲಿ ಗರುಡಾ ಏರೋಸ್ಪೇಸ್ ಸುಮಾರು 1 ಲಕ್ಷ ಡ್ರೋನ್​​ಗಳ ತಯಾರಿಕೆಯ ಗುರಿ ಹೊಂದಿದೆ ಎಂಬ ಮಾಹಿತಿಯನ್ನು ನನಗೆ ನೀಡಲಾಗಿದೆ. ಇದು ಯುವಜನರಿಗೆ ಉದ್ಯೋಗಾವಕಾಶ ನೀಡುತ್ತದೆ. ಅಷ್ಟೇ ಅಲ್ಲ, ಸಂಶೋಧನಾಸಕ್ತರಿಗೂ ಹೊಸ ಅವಕಾಶ ತೆರೆದುಕೊಳ್ಳಲಿದೆ ಎಂದು ಹೇಳಿದರು.

ದೇಶದಲ್ಲಿ ಸ್ವಾಮಿತ್ವ ಯೋಜನೆಯಡಿ, ಡ್ರೋನ್​​ ಮೂಲಕ ಭೂ ದಾಖಲೀಕರಣ ಮಾಡಲಾಗುತ್ತಿದೆ. ಈ ಬಾರಿ ಕೊರೊನಾ ಲಸಿಕೆ ಅಭಿಯಾನ ಶುರುವಾದಾಗ ಅದೆಷ್ಟೋ ದುರ್ಗಮ ಪ್ರದೇಶಗಳಿಗೆ ಡ್ರೋನ್​ ಮೂಲಕವೇ ಔಷಧಗಳು, ಲಸಿಕೆಗಳನ್ನು ಸಾಗಿಸಲಾಗಿದೆ. ಈ ಮಧ್ಯೆ ಕೃಷಿಯಲ್ಲೂ ಡ್ರೋನ್​ ಬಳಕೆ ಪ್ರಾರಂಭವಾಗಿದ್ದು ತುಂಬ ಸಂತೋಷದ ಸಂಗತಿ. ಬೆಳೆಗಳಿಗೆ ಕೀಟನಾಶಕ ಸಿಂಪಡಿಸಲು, ಕೀಟನಾಶಕ ಸಾಗಿಸಲು ಡ್ರೋನ್​ ಬಳಸುತ್ತಿರುವುದು ಖಂಡಿತ ಹೊಸ ವಿಧಾನ ಎಂದೂ ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪ್ರಸಕ್ತ ಬಾರಿಯ 2022-23ನೇ ಬಜೆಟ್​ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಅವರು ಕೃಷಿ ವಲಯದ ಆಧುನಿಕತೆಗೆ ಒತ್ತುಕೊಡುವುದಾಗಿ ಹೇಳಿದ್ದರು.  ಕೃಷಿ ವಲಯದ ಆಧುನಿಕರಣಕ್ಕಾಗಿ ಕೇಂದ್ರ ಸರ್ಕಾರ ಕಿಸಾನ್​ ಡ್ರೋನ್​​ಗಳಿಗೆ ಉತ್ತೇಜನ ನೀಡಲಿದೆ, ರಾಸಾಯನಿಕ ಮುಕ್ತ ನೈಸರ್ಗಿಕ ಕೃಷಿ, ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ರೈತರಿಗೆ ಡಿಜಿಟಲ್​ ಮತ್ತು ಹೈಟೆಕ್​ ಸೇವೆಗಳನ್ನು ನೀಡಲಾಗುವುದು ಎಂದೂ ಹೇಳಿದ್ದರು. ಅಷ್ಟೇ ಅಲ್ಲ, ಬೆಳೆ ಮೌಲ್ಯಮಾಪನ, ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು, ಬೆಳೆಗಳಿಗೆ ಕೀಟನಾಶಕಗಳು, ಪೋಷಕಾಂಶಗಳ ಸಿಂಪಡಣೆ ಮಾಡಲು ಕಿಸಾನ್ ಡ್ರೋನ್​​ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಲಾಗುವುದು ಎಂದೂ ಹೇಳಿದ್ದರು.

ಇದನ್ನೂ ಓದಿ: ಕೋಲ್​ ಇಂಡಿಯಾ ಲಿಮಿಟೆಡ್​​ನಲ್ಲಿ ಉದ್ಯೋಗ ಅವಕಾಶ : ಇಲ್ಲಿದೆ ಮಾಹಿತಿ

Published On - 11:34 am, Sat, 19 February 22

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ