AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ 100ನೇ ಕಿಸಾನ್ ರೈಲಿಗೆ ಪ್ರಧಾನಿ ಮೋದಿಯಿಂದ ಹಸಿರು ನಿಶಾನೆ, ವಿಶೇಷತೆಗಳು ಏನು ಗೊತ್ತಾ?

ಕೊವಿಡ್-19 ಸವಾಲಿನ ನಡುವೆಯೂ ಕಳೆದ ನಾಲ್ಕು ತಿಂಗಳಲ್ಲಿ ಕಿಸಾನ್ ರೈಲು ನೆಟ್​ವರ್ಕ್ ವಿಸ್ತರಣೆಗೊಂಡಿದೆ. ದೇಶದ 100ನೇ ಕಿಸಾನ್ ರೈಲು ಇಂದು ಸಂಚಾರ ಆರಂಭಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರೈತ ಸಮುದಾಯಕ್ಕೆ ಅಭಿನಂದನೆ ಸಲ್ಲಿಸಿದರು.

ದೇಶದ 100ನೇ ಕಿಸಾನ್ ರೈಲಿಗೆ ಪ್ರಧಾನಿ ಮೋದಿಯಿಂದ ಹಸಿರು ನಿಶಾನೆ, ವಿಶೇಷತೆಗಳು ಏನು ಗೊತ್ತಾ?
ಕಿಸಾನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
TV9 Web
| Edited By: |

Updated on:Apr 06, 2022 | 11:13 PM

Share

ದೆಹಲಿ: ಕೊವಿಡ್-19 ಸವಾಲಿನ ನಡುವೆಯೂ ಕಳೆದ ನಾಲ್ಕು ತಿಂಗಳಲ್ಲಿ ಕಿಸಾನ್ ರೈಲು ನೆಟ್​ವರ್ಕ್ ವಿಸ್ತರಣೆಗೊಂಡಿದೆ. ದೇಶದ 100ನೇ ಕಿಸಾನ್ ರೈಲು ಇಂದು ಸಂಚಾರ ಆರಂಭಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ರೈತ ಸಮುದಾಯಕ್ಕೆ ಅಭಿನಂದನೆ ಸಲ್ಲಿಸಿದರು.

ದೆಹಲಿಯಲ್ಲಿ ಇಂದು (ಡಿ.28) ಸಂಜೆ ದೇಶದ 100ನೇ ಕಿಸಾನ್ ರೈಲು ಸಂಚಾರಕ್ಕೆ ವೀಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿ ಮೋದಿ ಮಾತನಾಡಿದರು. ರೈತರ ಕಲ್ಯಾಣ ಹಾಗೂ ರೈತರ ಆದಾಯ ಹೆಚ್ಚಳಕ್ಕೆ ಕಿಸಾನ್ ರೈಲು ನೆಟ್​ವರ್ಕ್ ವಿಸ್ತರಣೆ ದೊಡ್ಡ ಹೆಜ್ಜೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕಿಸಾನ್ ರೈಲು, ಸಂಚಾರಿ ಶೈತ್ಯಾಗಾರ ಇದ್ದಂತೆ. ಹಣ್ಣು, ತರಕಾರಿ, ಹಾಲು, ಮೀನು ಮುಂತಾದ ಆಹಾರ ಪದಾರ್ಥಗಳನ್ನು ಸುರಕ್ಷಿತವಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಕೊಂಡೊಯ್ಯಲು ಕಿಸಾನ್ ರೈಲು ಸಹಕಾರಿಯಾಗಿರಲಿದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ಕೃಷಿ ಸಂಪದ ಯೋಜನೆಯಡಿ, ಮೆಗಾ ಫುಡ್ ಪಾರ್ಕ್ಸ್, ಕೋಲ್ಡ್ ಚೈನ್ ವ್ಯವಸ್ಥೆ, ಆಗ್ರೋ ಪ್ರೊಸೆಸಿಂಗ್​ನಂತಹ ಸುಮಾರು 6,500 ಪ್ರಾಜೆಕ್ಟ್​ಗಳನ್ನು ಕಾರ್ಯರೂಪಕ್ಕೆ ತರಲಾಗಿದೆ. ಆತ್ಮನಿರ್ಭರ್ ಪ್ಯಾಕೇಜ್ ಮೂಲಕ, ಮೈಕ್ರೋ ಫುಡ್ ಪ್ರೊಸೆಸಿಂಗ್ ಕೈಗಾರಿಕೆಗಳಿಗೆ 10 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗಿದೆ ಎಂದು ಸರ್ಕಾರದ ಯೋಜನೆಗಳನ್ನು ಪ್ರಧಾನಿ ವಿವರಿಸಿದರು. ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹಾಗೂ ರೈಲ್ವೇ ಖಾತೆ ಸಚಿವ ಪಿಯೂಶ್ ಗೋಯಲ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

100ನೇ ಕಿಸಾನ್ ರೈಲಿನಲ್ಲಿ ಏನೆಲ್ಲಾ ವ್ಯವಸ್ಥೆ ಇರಲಿದೆ? ಮಹಾರಾಷ್ಟ್ರದ ಸಂಗೋಲಾದಿಂದ ಪಶ್ಚಿಮ ಬಂಗಾಳದ ಶಾಲಿಮಾರ್​ವರೆಗೆ ರೈಲು ಸಂಚಾರ ನಡೆಸಲಿರುವ ಕಿಸಾನ್ ರೈಲು, 2,132 ಕಿ.ಮೀ.ಗಳನ್ನು ಸುಮಾರು 39 ಗಂಟೆಗಳಲ್ಲಿ ತಲುಪಲಿದೆ. 400 ಟನ್​ಗಳಷ್ಟು ಹಣ್ಣು, ತರಕಾರಿ, ಕೃಷಿ ಉತ್ಪನ್ನಗಳನ್ನು ರೈಲು ಹೊತ್ತೊಯ್ಯಲಿದೆ. ಮಧ್ಯಪ್ರದೇಶ, ಚತ್ತೀಸ್​ಗಢ, ಒಡಿಸ್ಸಾ ಮೂಲಕ ರೈಲು ಪ್ರಯಾಣ ನಡೆಸಲಿದೆ.

ಸದ್ಯ ದೇಶದ 9 ಮಾರ್ಗಗಳಲ್ಲಿ ಕಿಸಾನ್ ರೈಲು ಸಂಚಾರ ನಡೆಸುತ್ತಿದೆ. ರೈತರಿಂದ ಕೃಷಿ ಉತ್ಪನ್ನ ಮಾರುಕಟ್ಟೆಗೆ ಹಾಗೂ ಬಳಕೆದಾರ ಗ್ರಾಹಕರಿಗೆ ಉತ್ತಮ ಸಂಪರ್ಕ ವ್ಯವಸ್ಥೆ ಒದಗಿಸುವ ಉದ್ದೇಶವನ್ನು ಕಿಸಾನ್ ರೈಲು ಹೊಂದಿದೆ.

ಮೊತ್ತ ಮೊದಲ ಚಾಲಕ ರಹಿತ ಮೆಟ್ರೋಗೆ ಹಸಿರು ನಿಶಾನೆ ದೇಶದ ಮೊತ್ತ ಮೊದಲ ಚಾಲಕ ರಹಿತ ಮೆಟ್ರೋ (Driverless Metro) ರೈಲು ಸಂಚಾರವನ್ನು ಕೂಡ ಇಂದಿನಿಂದ (ಡಿ.28) ಆರಂಭಿಸಲಾಯಿತು. ದೆಹಲಿ ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್​ನ (DMRC) ಈ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ಬೆಳಗ್ಗೆ 11 ಗಂಟೆಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಇದನ್ನೂ ಓದಿ: ಕಿಸಾನ್ ರೈಲು ಮತ್ತು ಮೊದಲ ಚಾಲಕ ರಹಿತ ಮೆಟ್ರೋ ರೈಲು ಸಂಚಾರಕ್ಕೆ ಇಂದು ಚಾಲನೆ ನೀಡಲಿದ್ದಾರೆ ಪ್ರಧಾನಿ ಮೋದಿ

ದೆಹಲಿಯಲ್ಲಿ ಮೊದಲ ಮೆಟ್ರೋ ರೈಲು ಅಟಲ್ ಬಿಹಾರಿ ವಾಜಪೇಯಿ ಅವರ ಶ್ರಮದಿಂದ ಆರಂಭಗೊಂಡಿತು. 2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವಾಗ ಕೇವಲ 5 ನಗರಗಳಲ್ಲಿ ಮೆಟ್ರೋ ಸೇವೆ ಲಭ್ಯವಿತ್ತು. ಇಂದು, ದೇಶದ 18 ನಗರಗಳು ಮೆಟ್ರೋ ರೈಲು ಸೌಲಭ್ಯ ಹೊಂದಿದೆ. 2025ರ ಒಳಗಾಗಿ, ರಾಷ್ಟ್ರದ 25 ನಗರಗಳಿಗೆ ಮೆಟ್ರೋ ರೈಲು ಸೇವೆ ಒದಗಿಸಲು ಸರ್ಕಾರ ಸಿದ್ಧವಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಒಟ್ಟು 130 ಕೋಟಿ ಜನಸಂಖ್ಯೆ ಹೊಂದಿರುವ ಭಾರತದ ರಾಜಧಾನಿಯಾಗಿ, ದೆಹಲಿ ಜಾಗತಿಕ ಮಟ್ಟದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಾವೆಲ್ಲರೂ ಜೊತೆಯಾಗಿ ದೆಹಲಿಯನ್ನು ಇನ್ನಷ್ಟು ಅಭಿವೃದ್ಧಿಗೊಳಿಸಲು ಕೆಲಸ ಮಾಡಬೇಕು ಎಂದು ಮೋದಿ ಮಾತನಾಡಿದರು. ಕಾಮನ್ ಮೊಬಿಲಿಟಿ ಕಾರ್ಡ್​ನ್ನು ಕೂಡ ಇದೇ ವೇಳೆ ಲಾಂಚ್ ಮಾಡಲಾಯಿತು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ನಿರಂಕಾರಿ ಮೈದಾನವೀಗ ‘ಕಿಸಾನ್ ​ಪುರ’! Delhi Chalo ಚಳುವಳಿಕಾರರಿಂದ ಮರು ನಾಮಕರಣ

Published On - 6:39 pm, Mon, 28 December 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ