Vande Bharat: 3 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

|

Updated on: Aug 31, 2024 | 3:56 PM

ಪ್ರಧಾನಿ ನರೇಂದ್ರ ಮೋದಿ ಅವರು 3 ಹೊಸ ವಂದೇ ಭಾರತ್ ರೈಲುಗಳನ್ನು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಈ ಅತ್ಯಾಧುನಿಕ ರೈಲುಗಳು 3ನಿರ್ಣಾಯಕ ಮಾರ್ಗಗಳಲ್ಲಿ ಸಂಪರ್ಕವನ್ನು ಹೆಚ್ಚಿಸುತ್ತವೆ. ಮೀರತ್ ನಗರ-ಲಕ್ನೋ, ಮಧುರೈ-ಬೆಂಗಳೂರು ಮತ್ತು ಚೆನ್ನೈ ಎಗ್ಮೋರ್-ನಾಗರ್ಕೋಯಿಲ್ ಮಾರ್ಗಕ್ಕೆ ಸಂಪರ್ಕ ಕಲ್ಪಿಸುತ್ತವೆ.

Vande Bharat: 3 ಹೊಸ ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ
ಪ್ರಧಾನಿ ನರೇಂದ್ರ ಮೋದಿ
Follow us on

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಶನಿವಾರ) ಮೂರು ಹೊಸ ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು. ಈ ಮೂಲಕ ಉತ್ತರ ಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಾದ್ಯಂತ ರೈಲು ಸಂಪರ್ಕವನ್ನು ಹೆಚ್ಚಿಸಿದರು. ರೈಲ್ವೇ ಸಚಿವಾಲಯವು ಭಾರತದ ‘ಮೇಕ್ ಇನ್ ಇಂಡಿಯಾ’ ಮತ್ತು ಆತ್ಮನಿರ್ಭರ್ ಭಾರತ್ ಉಪಕ್ರಮಗಳೊಂದಿಗೆ ಹೊಂದಿಕೆಯಾಗುವ, ವೇಗವಾದ, ಹೆಚ್ಚು ಆರಾಮದಾಯಕ ಪ್ರಯಾಣವನ್ನು ಉತ್ತೇಜಿಸುವಲ್ಲಿ ಈ ರೈಲುಗಳ ಮಹತ್ವವನ್ನು ಎತ್ತಿ ತೋರಿಸಿದೆ.

ವಂದೇ ಭಾರತ್ ರೈಲುಗಳ ಮಹತ್ವ:

‘ಮೇಕ್ ಇನ್ ಇಂಡಿಯಾ’ ಉಪಕ್ರಮದ ಅಡಿಯಲ್ಲಿ ಫೆಬ್ರವರಿ 15, 2019ರಂದು ಮೊದಲ ಬಾರಿಗೆ ಪರಿಚಯಿಸಲಾದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಪ್ರಯಾಣದಲ್ಲಿ ಐಷಾರಾಮಿ ಮತ್ತು ವೇಗದ ಸಂಕೇತವಾಗಿದೆ. ಪ್ರಸ್ತುತ, 100ಕ್ಕೂ ಹೆಚ್ಚು ವಂದೇ ಭಾರತ್ ರೈಲು ಸೇವೆಗಳು ಕಾರ್ಯನಿರ್ವಹಿಸುತ್ತಿವೆ. ಇವು ದೇಶಾದ್ಯಂತ 280ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುತ್ತವೆ.


ಇದನ್ನೂ ಓದಿ: ಬೆಂಗಳೂರು ಮಧುರೈ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ: ಹೊರಡುವ ಸಮಯ, ನಿಲುಗಡೆ ಇತರೆ ಮಾಹಿತಿ ಇಲ್ಲಿದೆ

ಇಂದು ಉದ್ಘಾಟನೆಯಾದ ಮೀರತ್ ಸಿಟಿ-ಲಕ್ನೋ ವಂದೇ ಭಾರತ್ ಎಕ್ಸ್‌ಪ್ರೆಸ್:

ಇದು ಮೀರತ್‌ನಿಂದ ಲಕ್ನೋವನ್ನು ಸಂಪರ್ಕಿಸುವ ಮೊದಲ ವಂದೇ ಭಾರತ್ ರೈಲು. ಇದು ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸುತ್ತದೆ ಮತ್ತು ರಾಜ್ಯ ರಾಜಧಾನಿಗೆ ವೇಗವಾಗಿ ಸಂಪರ್ಕದೊಂದಿಗೆ ಸ್ಥಳೀಯ ಕೈಗಾರಿಕೆಗಳನ್ನು ಬೆಂಬಲಿಸುತ್ತದೆ.


ಮಧುರೈ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್:

ಈ ರೈಲು ದೇವಾಲಯದ ನಗರವಾದ ಮಧುರೈ ಅನ್ನು ಕಾಸ್ಮೋಪಾಲಿಟನ್ ಹಬ್ ಬೆಂಗಳೂರಿನೊಂದಿಗೆ ಸಂಪರ್ಕಿಸುತ್ತದೆ. ಇದು ತಮಿಳುನಾಡು ಮತ್ತು ಕರ್ನಾಟಕದ ನಡುವೆ ವ್ಯಾಪಾರ, ಶಿಕ್ಷಣ ಮತ್ತು ಕೆಲಸಕ್ಕೆ ಸಂಬಂಧಿಸಿದ ಪ್ರಯಾಣವನ್ನು ಸುಗಮಗೊಳಿಸುತ್ತದೆ.

ಇದನ್ನೂ ಓದಿ: ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತ್ವರಿತ ತೀರ್ಪು ಬೇಕು: ಪ್ರಧಾನಿ ಮೋದಿ

ಚೆನ್ನೈ ಎಗ್ಮೋರ್-ನಾಗರ್‌ಕೋಯಿಲ್ ವಂದೇ ಭಾರತ್ ಎಕ್ಸ್‌ಪ್ರೆಸ್:

ಈ ರಮಣೀಯ ಪ್ರದೇಶದಲ್ಲಿ ಮೊದಲ ವಂದೇ ಭಾರತ್ ಸೇವೆಯನ್ನು ಒದಗಿಸುವ ರೈಲು ತಮಿಳುನಾಡಿನ 12 ಜಿಲ್ಲೆಗಳನ್ನು ಸಂಪರ್ಕಿಸುವ 726 ಕಿ.ಮೀ. ಉದ್ದದ ಪ್ರಯಾಣವನ್ನು ಹೊಂದಿದೆ. ಇದು ಯಾತ್ರಿಕರು ಮತ್ತು ಸ್ಥಳೀಯ ನಿವಾಸಿಗಳ ಪ್ರಯಾಣವನ್ನು ಗಮನಾರ್ಹವಾಗಿ ಸುಧಾರಿಸುವ ನಿರೀಕ್ಷೆಯಿದೆ.

ಈ ರೈಲುಗಳು ಸಂಪರ್ಕವನ್ನು ಸುಧಾರಿಸಲು ಮಾತ್ರವಲ್ಲದೆ ಧಾರ್ಮಿಕ ಪ್ರವಾಸೋದ್ಯಮ ಮತ್ತು ಸ್ಥಳೀಯ ಆರ್ಥಿಕತೆಯನ್ನು ಬೆಂಬಲಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:34 pm, Sat, 31 August 24