Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಮಾಚಲ ಪ್ರದೇಶದಲ್ಲಿ 4ನೇ ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಮೋದಿ ಚಾಲನೆ; 3 ಗಂಟೆ ಕಡಿಮೆಯಾಗಲಿದೆ ಚಂಡೀಗಢ್-ದೆಹಲಿ ಸಂಚಾರದ ಅವಧಿ

Vande Bharat Express: ಅಂಬ್ ಅಂಡೌರಾದಿಂದ ನವದೆಹಲಿಗೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸಂಚಾರಕ್ಕೆ ಉನಾದಲ್ಲಿ ಫ್ಲ್ಯಾಗ್‌ಆಫ್ ಮಾಡಲಾಯಿತು. ಸೆಮಿ ಹೈಸ್ಪೀಡ್ ರೈಲು ದೆಹಲಿ ಮತ್ತು ಅಂಬ್ ಅಂಡೌರಾ ನಡುವೆ ಸಂಚರಿಸಲಿದೆ.

ಹಿಮಾಚಲ ಪ್ರದೇಶದಲ್ಲಿ 4ನೇ ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಮೋದಿ ಚಾಲನೆ; 3 ಗಂಟೆ ಕಡಿಮೆಯಾಗಲಿದೆ ಚಂಡೀಗಢ್-ದೆಹಲಿ ಸಂಚಾರದ ಅವಧಿ
ವಂದೇ ಭಾರತ್ ಎಕ್ಸ್​ಪ್ರೆಸ್​ಗೆ ಮೋದಿ ಹಸಿರು ನಿಶಾನೆ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Oct 13, 2022 | 10:15 AM

ಹಿಮಾಚಲ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು (ಗುರುವಾರ) ಹಿಮಾಚಲ ಪ್ರದೇಶದ ಉನಾದಲ್ಲಿ ದೇಶದ ನಾಲ್ಕನೇ ವಂದೇ ಭಾರತ್ ಎಕ್ಸ್‌ಪ್ರೆಸ್ (Vande Bharat Express) ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಅವರು ಇಂದು ಉತ್ತರ ರಾಜ್ಯವಾದ ಹಿಮಾಚಲ ಪ್ರದೇಶದಲ್ಲಿ (Himachal Pradesh) ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಜೈರಾಮ್ ಠಾಕೂರ್, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಸಚಿವ ಅನುರಾಗ್ ಠಾಕೂರ್ ಮುಂತಾದವರು ಉಪಸ್ಥಿತರಿದ್ದರು.

ಅಂಬ್ ಅಂಡೌರಾದಿಂದ ನವದೆಹಲಿಗೆ ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಸಂಚಾರಕ್ಕೆ ಉನಾದಲ್ಲಿ ಫ್ಲ್ಯಾಗ್‌ಆಫ್ ಮಾಡಲಾಯಿತು. ಇದು ಕಳೆದ ಐದು ವರ್ಷಗಳಲ್ಲಿ ರಾಜ್ಯಕ್ಕೆ ಮೋದಿಯವರ 9ನೇ ಭೇಟಿಯಾಗಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಹೇಳಿದ್ದಾರೆ.

ಸೆಮಿ ಹೈಸ್ಪೀಡ್ ರೈಲು ದೆಹಲಿ ಮತ್ತು ಅಂಬ್ ಅಂಡೌರಾ ನಡುವೆ ಸಂಚರಿಸಲಿದೆ. ಇದು ಬುಧವಾರವನ್ನು ಹೊರತುಪಡಿಸಿ ವಾರದ ಉಳಿದೆಲ್ಲಾ ದಿನಗಳಲ್ಲಿ ಕಾರ್ಯ ನಿರ್ವಹಿಸುತ್ತದೆ. ರೈಲು ಸಂಖ್ಯೆ 22447 ನವದೆಹಲಿಯಿಂದ ಅಂಬ್ ಅಂಡೌರಾಗೆ ಬೆಳಿಗ್ಗೆ 5.50ಕ್ಕೆ ಹೊರಟು 11.05ಕ್ಕೆ ಅಂಬ್ ಅಂಡೌರಾ ರೈಲು ನಿಲ್ದಾಣವನ್ನು ತಲುಪಲಿದೆ. ಅಂಬ್ ಅಂಡೌರಾದಿಂದ 22448 ಸಂಖ್ಯೆಯ ರೈಲು ಮಧ್ಯಾಹ್ನ 1 ಗಂಟೆಗೆ ಹೊರಟು ಸಂಜೆ 6.25ಕ್ಕೆ ನವದೆಹಲಿಗೆ ತಲುಪಲಿದೆ.

ಇದನ್ನೂ ಓದಿ: Vande Bharat Express: ಹಿಮಾಚಲ ಪ್ರದೇಶದ ಉನಾದಲ್ಲಿ 4ನೇ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಈ ರೈಲು 16 ಕೋಚ್‌ಗಳನ್ನು ಹೊಂದಿದ್ದು, ಅಂಬಾಲಾ, ಚಂಡೀಗಢ, ಆನಂದಪುರ ಸಾಹಿಬ್ ಮತ್ತು ಉನಾ ಹಿಮಾಚಲದಲ್ಲಿ ನಿಲುಗಡೆ ಹೊಂದಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳೀಯವಾಗಿ ವಿನ್ಯಾಸಗೊಳಿಸಲಾದ ಸೆಮಿ-ಹೈ-ಸ್ಪೀಡ್ ರೈಲು, ವಂದೇ ಭಾರತ್ ಸರಣಿಯ ಅಡಿಯಲ್ಲಿ ಮೂರನೇ ಸೇವೆಗೆ ಪ್ರಧಾನಿ ಮೋದಿ ಸೆಪ್ಟೆಂಬರ್ 30ರಂದು ಗಾಂಧಿನಗರ ಕ್ಯಾಪಿಟಲ್‌ನಿಂದ ಹಸಿರು ನಿಶಾನೆ ತೋರಿದ್ದರು. ಇದು ಅಕ್ಟೋಬರ್ 1ರಿಂದ ಸಂಚಾರ ಪ್ರಾರಂಭಿಸಿತ್ತು. ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ದೆಹಲಿ-ವಾರಣಾಸಿ ಮತ್ತು ದೆಹಲಿ-ಕತ್ರಾ ಮಾರ್ಗಗಳಲ್ಲಿ ಸಹ ಸಂಚರಿಸುತ್ತವೆ.

ಇದಾದ ಬಳಿಕ ಪ್ರಧಾನಮಂತ್ರಿಯವರು ಭಾರತೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆಯನ್ನು (IIIT) ರಾಷ್ಟ್ರಕ್ಕೆ ಸಮರ್ಪಿಸಲು ಮತ್ತು ಬಲ್ಕ್ ಡ್ರಗ್ ಪಾರ್ಕ್‌ನ ಶಿಲಾನ್ಯಾಸವನ್ನು ನೆರವೇರಿಸಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:14 am, Thu, 13 October 22

ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!