AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala Vande Bharat Express : ಕೇರಳದ ಮೊದಲ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಪ್ರಧಾನಿ ಮೋದಿ ಚಾಲನೆ

ಕೇರಳದ ಮೊದಲ ವಂದೇ ಭಾರತ್ ಎಕ್ಸ್​ಪ್ರೆಸ್​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

Kerala Vande Bharat Express : ಕೇರಳದ ಮೊದಲ ವಂದೇ ಭಾರತ್​ ಎಕ್ಸ್​ಪ್ರೆಸ್​ಗೆ ಪ್ರಧಾನಿ ಮೋದಿ ಚಾಲನೆ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Apr 25, 2023 | 11:27 AM

Share

ಕೇರಳ(Kerala) ದ ಮೊದಲ ವಂದೇ ಭಾರತ್ ಎಕ್ಸ್​ಪ್ರೆಸ್(Vande Bharat Express)​ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಈ ರೈಲು ಪ್ರಮುಖವಾಗಿ 11 ಜಿಲ್ಲೆಗಳಿಗೆ ಸಂಚರಿಸಲಿದೆ, ರೈಲು ತಿರುವನಂತಪುರಂ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ, ತ್ರಿಶೂರ್, ಪಾಲಕ್ಕಾಡ್, ಪತ್ತನಂತಿಟ್ಟ, ಮಲಪ್ಪುರಂ, ಕೋಳಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡು ಸೇರಿದಂತೆ ವಿವಿಧ ನಗರಗಳನ್ನು ಸಂಪರ್ಕಿಸಲಿದೆ. ಮೊದಲ ಹಂತದ ಅಡಿಯಲ್ಲಿ ಕಾಸರಗೋಡಿನಿಂದ ತಿರುವನಂತಪುರದವರೆಗಿನ ಸಂಪೂರ್ಣ ಹಳಿಯನ್ನು ಗಂಟೆಗೆ 110 ಕಿ.ಮೀ ವೇಗಕ್ಕೆ ಪರಿವರ್ತಿಸಲು 381 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿದೆ.

ತಿರುವುಗಳನ್ನು ನೇರಗೊಳಿಸುವುದು ಮತ್ತು ಇತರ ಅಗತ್ಯ ಹೊಂದಾಣಿಕೆಗಳನ್ನು ಒಳಗೊಂಡಿರುವ ಎರಡನೇ ಹಂತವು ಪೂರ್ಣಗೊಳ್ಳಲು ಎರಡರಿಂದ ಮೂರೂವರೆ ವರ್ಷ ಬೇಕಾಗುತ್ತದೆ. ಬಳಿಕ ಈ ಟ್ರ್ಯಾಕ್‌ನ ವೇಗವನ್ನು ಗಂಟೆಗೆ 130 ಕಿಮೀಗೆ ಹೆಚ್ಚಿಸಲಾಗುತ್ತದೆ.

ಮತ್ತಷ್ಟು ಓದಿ: Secunderabad To Bengaluru Vande Bharat Express: ಇನ್ನು 7 ಗಂಟೆಗಳಲ್ಲೇ ಸಿಕಂದರಾಬಾದ್ -ಬೆಂಗಳೂರು ಮಧ್ಯೆ ವಂದೇ ಭಾರತ್ ಟ್ರೈನ್ ಸಂಚರಿಸಲಿದೆ!

ಏಪ್ರಿಲ್ 17 ರಂದು ಪ್ರಾಯೋಗಿಕ ಸಂಚಾರ ನಡೆಸಲಾಗಿತ್ತು, ತಿರುವನಂತಪುರ ರೈಲು ನಿಲ್ದಾಣದಿಂದ ಬೆಳಗ್ಗೆ 5:10ಕ್ಕೆ ಆರಂಭವಾದ ಪ್ರಾಯೋಗಿಕ ರೈಲು ಓಡಾಟ ಮಧ್ಯಾಹ್ನ 12:30ಕ್ಕೆ ಕಣ್ಣೂರು ತಲುಪಿತ್ತು.

ಆರಂಭಿಕ ಹಂತದಲ್ಲಿ, ವಂದೇ ಭಾರತ್ ಗಂಟೆಗೆ ಕೇವಲ 100 ಕಿಮೀ ವೇಗದಲ್ಲಿ ಪ್ರಯಾಣಿಸಲಿದೆ. ಒಂದು ವರ್ಷದ ಅವಧಿಯಲ್ಲಿ ವಂದೇ ಭಾರತ್ 130 ಕಿಮೀ ವೇಗದಲ್ಲಿ ಓಡಲಿದೆ. ವೇಗದ ಗುರಿಗಳನ್ನು ತಲುಪಲು ರೈಲುಗೆ ಅನುಕೂಲವಾಗುವಂತೆ ಟ್ರ್ಯಾಕ್ ಜೋಡಣೆ ಸಮೀಕ್ಷೆಯು ಸಮಾನಾಂತರವಾಗಿ ನಡೆಯುತ್ತದೆ. ಈ ರೈಲಿನಲ್ಲಿ ಆರಂಭಿಕ ಸವಾರಿಗಾಗಿ 25 ಪ್ರಯಾಣಿಕರನ್ನು ಆಯ್ಕೆ ಮಾಡಲಾಗುತ್ತದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:18 am, Tue, 25 April 23

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ