AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೆನ್ನೈ ಪ್ರವಾಹ ನಿರ್ವಹಣೆ ಯೋಜನೆಗೆ ₹ 561 ಕೋಟಿ; ಪ್ರಧಾನಿ ಮೋದಿ ಅನುಮೋದನೆ

ಚೆನ್ನೈ ಮಹಾಪ್ರವಾಹವನ್ನು ಎದುರಿಸುತ್ತಿದೆ, ಕಳೆದ ಎಂಟು ವರ್ಷಗಳಲ್ಲಿ ಸಂಭವಿಸುತ್ತಿರುವ ಮೂರನೇ ಪ್ರವಾಹ ಇದು. ಮೆಟ್ರೋಪಾಲಿಟನ್ ನಗರಗಳು ಅಧಿಕ ಮಳೆಯನ್ನು ಪಡೆಯುವ ಹೆಚ್ಚಿನ ನಿದರ್ಶನಗಳನ್ನು ನಾವು ನೋಡುತ್ತಿದ್ದೇವೆ, ಇದು ಹಠಾತ್ ಪ್ರವಾಹಕ್ಕೆ ಕಾರಣವಾಗುತ್ತದೆ ಎಂದು ಅಮಿತ್ ಶಾ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದಿದ್ದಾರೆ.

ಚೆನ್ನೈ ಪ್ರವಾಹ ನಿರ್ವಹಣೆ ಯೋಜನೆಗೆ ₹ 561 ಕೋಟಿ; ಪ್ರಧಾನಿ ಮೋದಿ ಅನುಮೋದನೆ
ಚೆನ್ನೈ ಪ್ರವಾಹ
ರಶ್ಮಿ ಕಲ್ಲಕಟ್ಟ
|

Updated on: Dec 07, 2023 | 6:44 PM

Share

ದೆಹಲಿ ಡಿಸೆಂಬರ್ 07: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಚೆನ್ನೈನಲ್ಲಿ (Chennai) ಮೊದಲ ನಗರ ಪ್ರವಾಹ ತಗ್ಗಿಸುವ ಯೋಜನೆಗೆ ಹಸಿರು ನಿಶಾನೆ ತೋರಿದ್ದಾರೆ, ಚೆನ್ನೈ ಜಲಾನಯನ ಯೋಜನೆಯಲ್ಲಿ “ಸಮಗ್ರ ನಗರ ಪ್ರವಾಹ ನಿರ್ವಹಣೆ” ಚಟುವಟಿಕೆಗಳಿಗೆ ₹ 561.29 ಕೋಟಿ ಮೀಸಲಿಡಲಾಗಿದೆ ಎಂದು ಗೃಹ ಸಚಿವ ಅಮಿತ್ ಶಾ (Amit Shah) ಇಂದು ಘೋಷಿಸಿದ್ದಾರೆ. ಮೈಚಾಂಗ್ ಚಂಡಮಾರುತದಿಂದಾಗಿ ಚೆನ್ನೈ ಮುಳುಗಿರುವ ಹೊತ್ತಲ್ಲೇ ಈ ಘೋಷಣೆ ಬಂದಿದೆ. ಧಾರಾಕಾರ ಮಳೆಯಿಂದಾಗಿ ನಗರ ಸಂಪೂರ್ಣ ಜವಾವೃತವಾಗಿದ್ದು, ಇದು ಸುಧಾರಿತ ಪ್ರವಾಹ ತಡೆಗಟ್ಟುವ ಕ್ರಮಗಳ ನಿರ್ಣಾಯಕ ಅಗತ್ಯವನ್ನು ಎತ್ತಿ ತೋರಿಸುತ್ತದೆ.

“ಚೆನ್ನೈ ಮಹಾಪ್ರವಾಹವನ್ನು ಎದುರಿಸುತ್ತಿದೆ, ಕಳೆದ ಎಂಟು ವರ್ಷಗಳಲ್ಲಿ ಸಂಭವಿಸುತ್ತಿರುವ ಮೂರನೇಯದು. ಮೆಟ್ರೋಪಾಲಿಟನ್ ನಗರಗಳು ಅಧಿಕ ಮಳೆಯನ್ನು ಪಡೆಯುವ ಹೆಚ್ಚಿನ ನಿದರ್ಶನಗಳನ್ನು ನಾವು ನೋಡುತ್ತಿದ್ದೇವೆ, ಇದು ಹಠಾತ್ ಪ್ರವಾಹಕ್ಕೆ ಕಾರಣವಾಗುತ್ತದೆ ಎಂದು ಅಮಿತ್ ಶಾ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಬರೆದಿದ್ದಾರೆ.

ಸಕ್ರಿಯ ವಿಧಾನದಿಂದ ಮಾರ್ಗದರ್ಶಿಸಲ್ಪಟ್ಟ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರೀಯ ವಿಪತ್ತು ತಗ್ಗಿಸುವಿಕೆ ನಿಧಿ (NDMF) ಅಡಿಯಲ್ಲಿ ‘ಚೆನ್ನೈ ಜಲಾನಯನ ಯೋಜನೆಗಾಗಿ ಸಮಗ್ರ ನಗರ ಪ್ರವಾಹ ನಿರ್ವಹಣೆ ಚಟುವಟಿಕೆಗಳಿಗೆ’ ₹ 561.29 ಕೋಟಿ ಮೊತ್ತದ ಮೊದಲ ನಗರ ಪ್ರವಾಹ ತಗ್ಗಿಸುವ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಇದರಲ್ಲಿ ಕೇಂದ್ರದ ನೆರವು ₹ 500 ಕೋಟಿ ಆಗಿದೆ ಎಂದು ಅವರು ಹೇಳಿದ್ದಾರೆ.

ಇಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರೊಂದಿಗೆ ವೈಮಾನಿಕ ಸಮೀಕ್ಷೆ ಮತ್ತು ಉನ್ನತ ಮಟ್ಟದ ಸಭೆಯನ್ನು ಪೂರ್ಣಗೊಳಿಸಿದ ನಂತರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ರಾಜ್ಯಕ್ಕೆ ಮೊದಲ ಕಂತು ₹ 450 ಕೋಟಿ ಬಿಡುಗಡೆ ಮಾಡಿದ್ದು, ಎರಡನೇ ಕಂತನ್ನು ಇಂದು ಬಿಡುಗಡೆ ಮಾಡಲಾಗಿದೆ ಎಂದು ಖಚಿತಪಡಿಸಿದರು.

ಇದನ್ನೂ ಓದಿ: ವಿಶ್ವದ ಅಗ್ರಗಣ್ಯ ನಾಯಕನಾಗಿ ಬೆಳೆದಿರುವ ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕಿದೆ: ಹೆಚ್ ಡಿ ದೇವೇಗೌಡ

ಮೈಚಾಂಗ್ ಚಂಡಮಾರುತದಿಂದಾಗಿ ಚೆನ್ನೈ ಮತ್ತು ಅದರ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾದ ನಂತರ ನಗರವೆಲ್ಲ ಜಲಾವೃತವಾಗಿದೆ. ಅನೇಕರು ತಮ್ಮ ಮನೆಯಲ್ಲಿ ಸಿಲುಕಿಕೊಂಡಿದ್ದಾರೆ. ಮಂಗಳವಾರ ಆಂಧ್ರಪ್ರದೇಶದ ಕರಾವಳಿಯನ್ನು ದಾಟಿದ ಮೈಚಾಂಗ್ ಚಂಡಮಾರುತದ ತೀವ್ರತೆಗೆ ಚೆನ್ನೈ, ತಿರುವಳ್ಳೂರು, ಕಾಂಚೀಪುರಂ ಮತ್ತು ಚೆಂಗಲ್ಪಟ್ಟು ನಲುಗಿದೆ

ತಮಿಳುನಾಡು ರಾಜಧಾನಿಯಲ್ಲಿ ಸರ್ಕಾರ ಪರಿಹಾರ ಚಟುವಟಿಕೆಗಳನ್ನು ಗಣನೀಯವಾಗಿ ಹೆಚ್ಚಿಸಿದೆ. ಭಾರತೀಯ ವಾಯುಪಡೆ ಮತ್ತು ಕೋಸ್ಟ್ ಗಾರ್ಡ್‌ಗಳು ಹೆಲಿಕಾಪ್ಟರ್‌ಗಳಿಂದ ಆಹಾರ ಮತ್ತು ವೈದ್ಯಕೀಯ ಸಾಮಗ್ರಿಗಳನ್ನು ಪೂರೈಸುತ್ತಿದ್ದು, ನಗರದಾದ್ಯಂತ ವಿವಿಧ ಸ್ಥಳಗಳಲ್ಲಿ ನಿಂತ ನೀರನ್ನು ಪಂಪ್ ಮಾಡುವ ಪ್ರಯತ್ನಗಳನ್ನು ಮಾಡಲಾಗುತ್ತಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ