AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​

Retail, Wholesale Trade: ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Lakshmi Hegde

Updated on: Jul 03, 2021 | 1:00 PM

ನಿನ್ನೆ (ಶುಕ್ರವಾರ) ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದೆ. ಇನ್ನುಮುಂದೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳೂ ಸಹ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ (MSMEs) ವಲಯದ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ತಿಳಿಸಿದ್ದರು. ಎಂಎಸ್​ಎಂಇ ಸಂಬಂಧಿತ ಮಾರ್ಗಸೂಚಿಯನ್ನು ಪರಿಷ್ಕರಿಸುವ ಮೂಲಕ ಕೇಂದ್ರ ಸರ್ಕಾರ ಈ ನಿಯಮ ಜಾರಿಗೊಳಿಸಿದೆ. ಹೀಗೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನೂ ಎಂಎಸ್​ಎಂಇ ವ್ಯಾಪ್ತಿಗೆ ಸೇರ್ಪಡೆಗೊಳಿಸಿದ ಕ್ರಮವನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

ಚಿಲ್ಲರೆ ಮತ್ತು ಸಗಟು ವ್ಯಾಪಾರವನ್ನೂ ಎಂಎಸ್​ಎಂಇ ವಲಯಕ್ಕೆ ಸೇರಿಸುವ ಮೂಲಕ ನಮ್ಮ ಸರ್ಕಾರ ಒಂದು ಮೈಲಿಗಲ್ಲು ಸ್ಥಾಪಿಸಿದೆ. ಈಗ ಕೋಟ್ಯಂತರ ಚಿಲ್ಲರೆ ಮತ್ತ ಸಗಟು ವ್ಯಾಪಾರಿಗಳು ಎಂಎಸ್​ಎಂಇ ವ್ಯಾಪ್ತಿಯಲ್ಲಿ ಇರುವ ಹಣಕಾಸಿನ ಅನುಕೂಲ ಪಡೆಯುತ್ತಾರೆ. ಇದರಿಂದಾಗಿ ಅವರ ಉದ್ಯಮ, ವ್ಯಾಪಾರವನ್ನು ಉತ್ತೇಜಿಸಿಕೊಳ್ಳಬಹುದಾಗಿದೆ. ನಮ್ಮ ಸಣ್ಣ ಉದ್ದಿಮೆದಾರರ ಸಬಲೀಕರಣಕ್ಕೆ ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ನಿತಿನ್​ ಗಡ್ಕರಿಯವರು ಶುಕ್ರವಾರ ಟ್ವೀಟ್​ ಮಾಡಿ ಈ ಮಹತ್ವದ ವಿಚಾರವನ್ನು ತಿಳಿಸಿದ್ದರು. ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ. ಇದರಿಂದ ಚಿಲ್ಲರೆ ಮತ್ತು ಸಗಟು ವ್ಯಾಪಾರದಲ್ಲಿ ರಚನಾತ್ಮಕ ಬದಾಲಾವಣೆ ಉಂಟಾಗಲಿದೆ. ಎಂಎಸ್​ಎಂಇ ಮೂಲಕ ಸಿಗುವ ಬೆಂಬಲದಿಂದ ಈ ವ್ಯಾಪಾರಿಗಳು ಇನ್ನಷ್ಟು ಅಭಿವೃದ್ಧಿಹೊಂದಬಹುದು. ಹಾಗೇ, ಅವರು ಇನ್ನು ಉದ್ಯಮ್​ ರಿಜಿಸ್ಟ್ರೇಶನ್​ ಪೋರ್ಟಲ್​​ನಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ: ಅಮೆರಿಕಾದಿಂದ ಅಂತರಿಕ್ಷಕ್ಕೆ ಹೊರಟ ಗುಂಟೂರು ಯುವತಿ; ಕಲ್ಪನಾ ಚಾವ್ಲಾ ನಂತರ ಸಾಧನೆಯತ್ತ ಮತ್ತೋರ್ವ ಭಾರತೀಯ ನಾರಿ

PM Narendra Modi hails the decision to include retail and wholesale trade as MSME

ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
ಮುಂದಿನ 3 ತಿಂಗಳಲ್ಲಿ ಡಿಕೆ ಶಿವಕುಮಾರ್​ ಸಿಎಂ ಆಗ್ತಾರೆ: ಇಕ್ಬಾಲ್ ಹುಸೇನ್
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್