AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​

Retail, Wholesale Trade: ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Lakshmi Hegde

Updated on: Jul 03, 2021 | 1:00 PM

ನಿನ್ನೆ (ಶುಕ್ರವಾರ) ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದೆ. ಇನ್ನುಮುಂದೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳೂ ಸಹ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ (MSMEs) ವಲಯದ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ತಿಳಿಸಿದ್ದರು. ಎಂಎಸ್​ಎಂಇ ಸಂಬಂಧಿತ ಮಾರ್ಗಸೂಚಿಯನ್ನು ಪರಿಷ್ಕರಿಸುವ ಮೂಲಕ ಕೇಂದ್ರ ಸರ್ಕಾರ ಈ ನಿಯಮ ಜಾರಿಗೊಳಿಸಿದೆ. ಹೀಗೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನೂ ಎಂಎಸ್​ಎಂಇ ವ್ಯಾಪ್ತಿಗೆ ಸೇರ್ಪಡೆಗೊಳಿಸಿದ ಕ್ರಮವನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

ಚಿಲ್ಲರೆ ಮತ್ತು ಸಗಟು ವ್ಯಾಪಾರವನ್ನೂ ಎಂಎಸ್​ಎಂಇ ವಲಯಕ್ಕೆ ಸೇರಿಸುವ ಮೂಲಕ ನಮ್ಮ ಸರ್ಕಾರ ಒಂದು ಮೈಲಿಗಲ್ಲು ಸ್ಥಾಪಿಸಿದೆ. ಈಗ ಕೋಟ್ಯಂತರ ಚಿಲ್ಲರೆ ಮತ್ತ ಸಗಟು ವ್ಯಾಪಾರಿಗಳು ಎಂಎಸ್​ಎಂಇ ವ್ಯಾಪ್ತಿಯಲ್ಲಿ ಇರುವ ಹಣಕಾಸಿನ ಅನುಕೂಲ ಪಡೆಯುತ್ತಾರೆ. ಇದರಿಂದಾಗಿ ಅವರ ಉದ್ಯಮ, ವ್ಯಾಪಾರವನ್ನು ಉತ್ತೇಜಿಸಿಕೊಳ್ಳಬಹುದಾಗಿದೆ. ನಮ್ಮ ಸಣ್ಣ ಉದ್ದಿಮೆದಾರರ ಸಬಲೀಕರಣಕ್ಕೆ ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ನಿತಿನ್​ ಗಡ್ಕರಿಯವರು ಶುಕ್ರವಾರ ಟ್ವೀಟ್​ ಮಾಡಿ ಈ ಮಹತ್ವದ ವಿಚಾರವನ್ನು ತಿಳಿಸಿದ್ದರು. ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ. ಇದರಿಂದ ಚಿಲ್ಲರೆ ಮತ್ತು ಸಗಟು ವ್ಯಾಪಾರದಲ್ಲಿ ರಚನಾತ್ಮಕ ಬದಾಲಾವಣೆ ಉಂಟಾಗಲಿದೆ. ಎಂಎಸ್​ಎಂಇ ಮೂಲಕ ಸಿಗುವ ಬೆಂಬಲದಿಂದ ಈ ವ್ಯಾಪಾರಿಗಳು ಇನ್ನಷ್ಟು ಅಭಿವೃದ್ಧಿಹೊಂದಬಹುದು. ಹಾಗೇ, ಅವರು ಇನ್ನು ಉದ್ಯಮ್​ ರಿಜಿಸ್ಟ್ರೇಶನ್​ ಪೋರ್ಟಲ್​​ನಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ: ಅಮೆರಿಕಾದಿಂದ ಅಂತರಿಕ್ಷಕ್ಕೆ ಹೊರಟ ಗುಂಟೂರು ಯುವತಿ; ಕಲ್ಪನಾ ಚಾವ್ಲಾ ನಂತರ ಸಾಧನೆಯತ್ತ ಮತ್ತೋರ್ವ ಭಾರತೀಯ ನಾರಿ

PM Narendra Modi hails the decision to include retail and wholesale trade as MSME

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್