AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​

Retail, Wholesale Trade: ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Jul 03, 2021 | 1:00 PM

Share

ನಿನ್ನೆ (ಶುಕ್ರವಾರ) ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದೆ. ಇನ್ನುಮುಂದೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳೂ ಸಹ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ (MSMEs) ವಲಯದ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ತಿಳಿಸಿದ್ದರು. ಎಂಎಸ್​ಎಂಇ ಸಂಬಂಧಿತ ಮಾರ್ಗಸೂಚಿಯನ್ನು ಪರಿಷ್ಕರಿಸುವ ಮೂಲಕ ಕೇಂದ್ರ ಸರ್ಕಾರ ಈ ನಿಯಮ ಜಾರಿಗೊಳಿಸಿದೆ. ಹೀಗೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನೂ ಎಂಎಸ್​ಎಂಇ ವ್ಯಾಪ್ತಿಗೆ ಸೇರ್ಪಡೆಗೊಳಿಸಿದ ಕ್ರಮವನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

ಚಿಲ್ಲರೆ ಮತ್ತು ಸಗಟು ವ್ಯಾಪಾರವನ್ನೂ ಎಂಎಸ್​ಎಂಇ ವಲಯಕ್ಕೆ ಸೇರಿಸುವ ಮೂಲಕ ನಮ್ಮ ಸರ್ಕಾರ ಒಂದು ಮೈಲಿಗಲ್ಲು ಸ್ಥಾಪಿಸಿದೆ. ಈಗ ಕೋಟ್ಯಂತರ ಚಿಲ್ಲರೆ ಮತ್ತ ಸಗಟು ವ್ಯಾಪಾರಿಗಳು ಎಂಎಸ್​ಎಂಇ ವ್ಯಾಪ್ತಿಯಲ್ಲಿ ಇರುವ ಹಣಕಾಸಿನ ಅನುಕೂಲ ಪಡೆಯುತ್ತಾರೆ. ಇದರಿಂದಾಗಿ ಅವರ ಉದ್ಯಮ, ವ್ಯಾಪಾರವನ್ನು ಉತ್ತೇಜಿಸಿಕೊಳ್ಳಬಹುದಾಗಿದೆ. ನಮ್ಮ ಸಣ್ಣ ಉದ್ದಿಮೆದಾರರ ಸಬಲೀಕರಣಕ್ಕೆ ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ನಿತಿನ್​ ಗಡ್ಕರಿಯವರು ಶುಕ್ರವಾರ ಟ್ವೀಟ್​ ಮಾಡಿ ಈ ಮಹತ್ವದ ವಿಚಾರವನ್ನು ತಿಳಿಸಿದ್ದರು. ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ. ಇದರಿಂದ ಚಿಲ್ಲರೆ ಮತ್ತು ಸಗಟು ವ್ಯಾಪಾರದಲ್ಲಿ ರಚನಾತ್ಮಕ ಬದಾಲಾವಣೆ ಉಂಟಾಗಲಿದೆ. ಎಂಎಸ್​ಎಂಇ ಮೂಲಕ ಸಿಗುವ ಬೆಂಬಲದಿಂದ ಈ ವ್ಯಾಪಾರಿಗಳು ಇನ್ನಷ್ಟು ಅಭಿವೃದ್ಧಿಹೊಂದಬಹುದು. ಹಾಗೇ, ಅವರು ಇನ್ನು ಉದ್ಯಮ್​ ರಿಜಿಸ್ಟ್ರೇಶನ್​ ಪೋರ್ಟಲ್​​ನಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ: ಅಮೆರಿಕಾದಿಂದ ಅಂತರಿಕ್ಷಕ್ಕೆ ಹೊರಟ ಗುಂಟೂರು ಯುವತಿ; ಕಲ್ಪನಾ ಚಾವ್ಲಾ ನಂತರ ಸಾಧನೆಯತ್ತ ಮತ್ತೋರ್ವ ಭಾರತೀಯ ನಾರಿ

PM Narendra Modi hails the decision to include retail and wholesale trade as MSME

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ