AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​

Retail, Wholesale Trade: ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Jul 03, 2021 | 1:00 PM

Share

ನಿನ್ನೆ (ಶುಕ್ರವಾರ) ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದೆ. ಇನ್ನುಮುಂದೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳೂ ಸಹ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ (MSMEs) ವಲಯದ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ತಿಳಿಸಿದ್ದರು. ಎಂಎಸ್​ಎಂಇ ಸಂಬಂಧಿತ ಮಾರ್ಗಸೂಚಿಯನ್ನು ಪರಿಷ್ಕರಿಸುವ ಮೂಲಕ ಕೇಂದ್ರ ಸರ್ಕಾರ ಈ ನಿಯಮ ಜಾರಿಗೊಳಿಸಿದೆ. ಹೀಗೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನೂ ಎಂಎಸ್​ಎಂಇ ವ್ಯಾಪ್ತಿಗೆ ಸೇರ್ಪಡೆಗೊಳಿಸಿದ ಕ್ರಮವನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

ಚಿಲ್ಲರೆ ಮತ್ತು ಸಗಟು ವ್ಯಾಪಾರವನ್ನೂ ಎಂಎಸ್​ಎಂಇ ವಲಯಕ್ಕೆ ಸೇರಿಸುವ ಮೂಲಕ ನಮ್ಮ ಸರ್ಕಾರ ಒಂದು ಮೈಲಿಗಲ್ಲು ಸ್ಥಾಪಿಸಿದೆ. ಈಗ ಕೋಟ್ಯಂತರ ಚಿಲ್ಲರೆ ಮತ್ತ ಸಗಟು ವ್ಯಾಪಾರಿಗಳು ಎಂಎಸ್​ಎಂಇ ವ್ಯಾಪ್ತಿಯಲ್ಲಿ ಇರುವ ಹಣಕಾಸಿನ ಅನುಕೂಲ ಪಡೆಯುತ್ತಾರೆ. ಇದರಿಂದಾಗಿ ಅವರ ಉದ್ಯಮ, ವ್ಯಾಪಾರವನ್ನು ಉತ್ತೇಜಿಸಿಕೊಳ್ಳಬಹುದಾಗಿದೆ. ನಮ್ಮ ಸಣ್ಣ ಉದ್ದಿಮೆದಾರರ ಸಬಲೀಕರಣಕ್ಕೆ ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ನಿತಿನ್​ ಗಡ್ಕರಿಯವರು ಶುಕ್ರವಾರ ಟ್ವೀಟ್​ ಮಾಡಿ ಈ ಮಹತ್ವದ ವಿಚಾರವನ್ನು ತಿಳಿಸಿದ್ದರು. ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ. ಇದರಿಂದ ಚಿಲ್ಲರೆ ಮತ್ತು ಸಗಟು ವ್ಯಾಪಾರದಲ್ಲಿ ರಚನಾತ್ಮಕ ಬದಾಲಾವಣೆ ಉಂಟಾಗಲಿದೆ. ಎಂಎಸ್​ಎಂಇ ಮೂಲಕ ಸಿಗುವ ಬೆಂಬಲದಿಂದ ಈ ವ್ಯಾಪಾರಿಗಳು ಇನ್ನಷ್ಟು ಅಭಿವೃದ್ಧಿಹೊಂದಬಹುದು. ಹಾಗೇ, ಅವರು ಇನ್ನು ಉದ್ಯಮ್​ ರಿಜಿಸ್ಟ್ರೇಶನ್​ ಪೋರ್ಟಲ್​​ನಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ: ಅಮೆರಿಕಾದಿಂದ ಅಂತರಿಕ್ಷಕ್ಕೆ ಹೊರಟ ಗುಂಟೂರು ಯುವತಿ; ಕಲ್ಪನಾ ಚಾವ್ಲಾ ನಂತರ ಸಾಧನೆಯತ್ತ ಮತ್ತೋರ್ವ ಭಾರತೀಯ ನಾರಿ

PM Narendra Modi hails the decision to include retail and wholesale trade as MSME

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು