AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​

Retail, Wholesale Trade: ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​
ಪ್ರಧಾನಿ ನರೇಂದ್ರ ಮೋದಿ
TV9 Web
| Updated By: Lakshmi Hegde|

Updated on: Jul 03, 2021 | 1:00 PM

Share

ನಿನ್ನೆ (ಶುಕ್ರವಾರ) ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದೆ. ಇನ್ನುಮುಂದೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳೂ ಸಹ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ (MSMEs) ವಲಯದ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ತಿಳಿಸಿದ್ದರು. ಎಂಎಸ್​ಎಂಇ ಸಂಬಂಧಿತ ಮಾರ್ಗಸೂಚಿಯನ್ನು ಪರಿಷ್ಕರಿಸುವ ಮೂಲಕ ಕೇಂದ್ರ ಸರ್ಕಾರ ಈ ನಿಯಮ ಜಾರಿಗೊಳಿಸಿದೆ. ಹೀಗೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನೂ ಎಂಎಸ್​ಎಂಇ ವ್ಯಾಪ್ತಿಗೆ ಸೇರ್ಪಡೆಗೊಳಿಸಿದ ಕ್ರಮವನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

ಚಿಲ್ಲರೆ ಮತ್ತು ಸಗಟು ವ್ಯಾಪಾರವನ್ನೂ ಎಂಎಸ್​ಎಂಇ ವಲಯಕ್ಕೆ ಸೇರಿಸುವ ಮೂಲಕ ನಮ್ಮ ಸರ್ಕಾರ ಒಂದು ಮೈಲಿಗಲ್ಲು ಸ್ಥಾಪಿಸಿದೆ. ಈಗ ಕೋಟ್ಯಂತರ ಚಿಲ್ಲರೆ ಮತ್ತ ಸಗಟು ವ್ಯಾಪಾರಿಗಳು ಎಂಎಸ್​ಎಂಇ ವ್ಯಾಪ್ತಿಯಲ್ಲಿ ಇರುವ ಹಣಕಾಸಿನ ಅನುಕೂಲ ಪಡೆಯುತ್ತಾರೆ. ಇದರಿಂದಾಗಿ ಅವರ ಉದ್ಯಮ, ವ್ಯಾಪಾರವನ್ನು ಉತ್ತೇಜಿಸಿಕೊಳ್ಳಬಹುದಾಗಿದೆ. ನಮ್ಮ ಸಣ್ಣ ಉದ್ದಿಮೆದಾರರ ಸಬಲೀಕರಣಕ್ಕೆ ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ನಿತಿನ್​ ಗಡ್ಕರಿಯವರು ಶುಕ್ರವಾರ ಟ್ವೀಟ್​ ಮಾಡಿ ಈ ಮಹತ್ವದ ವಿಚಾರವನ್ನು ತಿಳಿಸಿದ್ದರು. ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ. ಇದರಿಂದ ಚಿಲ್ಲರೆ ಮತ್ತು ಸಗಟು ವ್ಯಾಪಾರದಲ್ಲಿ ರಚನಾತ್ಮಕ ಬದಾಲಾವಣೆ ಉಂಟಾಗಲಿದೆ. ಎಂಎಸ್​ಎಂಇ ಮೂಲಕ ಸಿಗುವ ಬೆಂಬಲದಿಂದ ಈ ವ್ಯಾಪಾರಿಗಳು ಇನ್ನಷ್ಟು ಅಭಿವೃದ್ಧಿಹೊಂದಬಹುದು. ಹಾಗೇ, ಅವರು ಇನ್ನು ಉದ್ಯಮ್​ ರಿಜಿಸ್ಟ್ರೇಶನ್​ ಪೋರ್ಟಲ್​​ನಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ: ಅಮೆರಿಕಾದಿಂದ ಅಂತರಿಕ್ಷಕ್ಕೆ ಹೊರಟ ಗುಂಟೂರು ಯುವತಿ; ಕಲ್ಪನಾ ಚಾವ್ಲಾ ನಂತರ ಸಾಧನೆಯತ್ತ ಮತ್ತೋರ್ವ ಭಾರತೀಯ ನಾರಿ

PM Narendra Modi hails the decision to include retail and wholesale trade as MSME

​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
​ರಾಜಣ್ಣ ರಾಜೀನಾಮೆ: ನಿಜವಾಯ್ತಾ ಕೋಡಿಶ್ರೀಗಳ 2 ತಿಂಗಳ ಹಿಂದಿನ ಭವಿಷ್ಯ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ಕೆಪಿಸಿಸಿ ಅಧ್ಯಕ್ಷನ ಜೊತೆಗಿನ ತಿಕ್ಕಾಟವೇ ರಾಜಣ್ಣನಿಗೆ ಮುಳುವಾಯಿತೇ?
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು