Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​

Retail, Wholesale Trade: ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: Lakshmi Hegde

Updated on: Jul 03, 2021 | 1:00 PM

ನಿನ್ನೆ (ಶುಕ್ರವಾರ) ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದೆ. ಇನ್ನುಮುಂದೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳೂ ಸಹ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ (MSMEs) ವಲಯದ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ತಿಳಿಸಿದ್ದರು. ಎಂಎಸ್​ಎಂಇ ಸಂಬಂಧಿತ ಮಾರ್ಗಸೂಚಿಯನ್ನು ಪರಿಷ್ಕರಿಸುವ ಮೂಲಕ ಕೇಂದ್ರ ಸರ್ಕಾರ ಈ ನಿಯಮ ಜಾರಿಗೊಳಿಸಿದೆ. ಹೀಗೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನೂ ಎಂಎಸ್​ಎಂಇ ವ್ಯಾಪ್ತಿಗೆ ಸೇರ್ಪಡೆಗೊಳಿಸಿದ ಕ್ರಮವನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

ಚಿಲ್ಲರೆ ಮತ್ತು ಸಗಟು ವ್ಯಾಪಾರವನ್ನೂ ಎಂಎಸ್​ಎಂಇ ವಲಯಕ್ಕೆ ಸೇರಿಸುವ ಮೂಲಕ ನಮ್ಮ ಸರ್ಕಾರ ಒಂದು ಮೈಲಿಗಲ್ಲು ಸ್ಥಾಪಿಸಿದೆ. ಈಗ ಕೋಟ್ಯಂತರ ಚಿಲ್ಲರೆ ಮತ್ತ ಸಗಟು ವ್ಯಾಪಾರಿಗಳು ಎಂಎಸ್​ಎಂಇ ವ್ಯಾಪ್ತಿಯಲ್ಲಿ ಇರುವ ಹಣಕಾಸಿನ ಅನುಕೂಲ ಪಡೆಯುತ್ತಾರೆ. ಇದರಿಂದಾಗಿ ಅವರ ಉದ್ಯಮ, ವ್ಯಾಪಾರವನ್ನು ಉತ್ತೇಜಿಸಿಕೊಳ್ಳಬಹುದಾಗಿದೆ. ನಮ್ಮ ಸಣ್ಣ ಉದ್ದಿಮೆದಾರರ ಸಬಲೀಕರಣಕ್ಕೆ ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ನಿತಿನ್​ ಗಡ್ಕರಿಯವರು ಶುಕ್ರವಾರ ಟ್ವೀಟ್​ ಮಾಡಿ ಈ ಮಹತ್ವದ ವಿಚಾರವನ್ನು ತಿಳಿಸಿದ್ದರು. ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ. ಇದರಿಂದ ಚಿಲ್ಲರೆ ಮತ್ತು ಸಗಟು ವ್ಯಾಪಾರದಲ್ಲಿ ರಚನಾತ್ಮಕ ಬದಾಲಾವಣೆ ಉಂಟಾಗಲಿದೆ. ಎಂಎಸ್​ಎಂಇ ಮೂಲಕ ಸಿಗುವ ಬೆಂಬಲದಿಂದ ಈ ವ್ಯಾಪಾರಿಗಳು ಇನ್ನಷ್ಟು ಅಭಿವೃದ್ಧಿಹೊಂದಬಹುದು. ಹಾಗೇ, ಅವರು ಇನ್ನು ಉದ್ಯಮ್​ ರಿಜಿಸ್ಟ್ರೇಶನ್​ ಪೋರ್ಟಲ್​​ನಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ: ಅಮೆರಿಕಾದಿಂದ ಅಂತರಿಕ್ಷಕ್ಕೆ ಹೊರಟ ಗುಂಟೂರು ಯುವತಿ; ಕಲ್ಪನಾ ಚಾವ್ಲಾ ನಂತರ ಸಾಧನೆಯತ್ತ ಮತ್ತೋರ್ವ ಭಾರತೀಯ ನಾರಿ

PM Narendra Modi hails the decision to include retail and wholesale trade as MSME

‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ