AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​

Retail, Wholesale Trade: ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ.

ಚಿಲ್ಲರೆ-ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಿದ್ದು ನಮ್ಮ ಸರ್ಕಾರದ ಮೈಲಿಗಲ್ಲು: ಪ್ರಧಾನಿ ಮೋದಿ ಟ್ವೀಟ್​
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Jul 03, 2021 | 1:00 PM

Share

ನಿನ್ನೆ (ಶುಕ್ರವಾರ) ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದೆ. ಇನ್ನುಮುಂದೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳೂ ಸಹ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕಾ (MSMEs) ವಲಯದ ವ್ಯಾಪ್ತಿಯಲ್ಲಿ ಬರಲಿದ್ದಾರೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ತಿಳಿಸಿದ್ದರು. ಎಂಎಸ್​ಎಂಇ ಸಂಬಂಧಿತ ಮಾರ್ಗಸೂಚಿಯನ್ನು ಪರಿಷ್ಕರಿಸುವ ಮೂಲಕ ಕೇಂದ್ರ ಸರ್ಕಾರ ಈ ನಿಯಮ ಜಾರಿಗೊಳಿಸಿದೆ. ಹೀಗೆ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನೂ ಎಂಎಸ್​ಎಂಇ ವ್ಯಾಪ್ತಿಗೆ ಸೇರ್ಪಡೆಗೊಳಿಸಿದ ಕ್ರಮವನ್ನು ಇಂದು ಪ್ರಧಾನಿ ನರೇಂದ್ರ ಮೋದಿಯವರು ಶ್ಲಾಘಿಸಿದ್ದಾರೆ.

ಚಿಲ್ಲರೆ ಮತ್ತು ಸಗಟು ವ್ಯಾಪಾರವನ್ನೂ ಎಂಎಸ್​ಎಂಇ ವಲಯಕ್ಕೆ ಸೇರಿಸುವ ಮೂಲಕ ನಮ್ಮ ಸರ್ಕಾರ ಒಂದು ಮೈಲಿಗಲ್ಲು ಸ್ಥಾಪಿಸಿದೆ. ಈಗ ಕೋಟ್ಯಂತರ ಚಿಲ್ಲರೆ ಮತ್ತ ಸಗಟು ವ್ಯಾಪಾರಿಗಳು ಎಂಎಸ್​ಎಂಇ ವ್ಯಾಪ್ತಿಯಲ್ಲಿ ಇರುವ ಹಣಕಾಸಿನ ಅನುಕೂಲ ಪಡೆಯುತ್ತಾರೆ. ಇದರಿಂದಾಗಿ ಅವರ ಉದ್ಯಮ, ವ್ಯಾಪಾರವನ್ನು ಉತ್ತೇಜಿಸಿಕೊಳ್ಳಬಹುದಾಗಿದೆ. ನಮ್ಮ ಸಣ್ಣ ಉದ್ದಿಮೆದಾರರ ಸಬಲೀಕರಣಕ್ಕೆ ನಾವು ಎಂದಿಗೂ ಬದ್ಧರಾಗಿರುತ್ತೇವೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ನಿತಿನ್​ ಗಡ್ಕರಿಯವರು ಶುಕ್ರವಾರ ಟ್ವೀಟ್​ ಮಾಡಿ ಈ ಮಹತ್ವದ ವಿಚಾರವನ್ನು ತಿಳಿಸಿದ್ದರು. ಆತ್ಮ ನಿರ್ಭರ ಭಾರತ್ ಆಂದೋಲನದಡಿ ಪರಿಚಯಿಸಲಾದ ಹಲವು ಯೋಜನೆಗಳ ಒಂದು ಭಾಗವಾಗಿ ಈಗ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳನ್ನು ಎಂಎಸ್​ಎಂಇ ವಲಯಕ್ಕೆ ಸೇರಿಸಲಾಗಿದೆ. ಇದರಿಂದ ಚಿಲ್ಲರೆ ಮತ್ತು ಸಗಟು ವ್ಯಾಪಾರದಲ್ಲಿ ರಚನಾತ್ಮಕ ಬದಾಲಾವಣೆ ಉಂಟಾಗಲಿದೆ. ಎಂಎಸ್​ಎಂಇ ಮೂಲಕ ಸಿಗುವ ಬೆಂಬಲದಿಂದ ಈ ವ್ಯಾಪಾರಿಗಳು ಇನ್ನಷ್ಟು ಅಭಿವೃದ್ಧಿಹೊಂದಬಹುದು. ಹಾಗೇ, ಅವರು ಇನ್ನು ಉದ್ಯಮ್​ ರಿಜಿಸ್ಟ್ರೇಶನ್​ ಪೋರ್ಟಲ್​​ನಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಇದನ್ನೂ ಓದಿ: ಅಮೆರಿಕಾದಿಂದ ಅಂತರಿಕ್ಷಕ್ಕೆ ಹೊರಟ ಗುಂಟೂರು ಯುವತಿ; ಕಲ್ಪನಾ ಚಾವ್ಲಾ ನಂತರ ಸಾಧನೆಯತ್ತ ಮತ್ತೋರ್ವ ಭಾರತೀಯ ನಾರಿ

PM Narendra Modi hails the decision to include retail and wholesale trade as MSME

Follow Us
Web contact
Web contact

TV9 Kannada

Read More
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಬೆಂಗಳೂರು ಅಂತಾರಾಷ್ಟ್ರೀಯ ಸ್ಟೇಡಿಯಂ ಗುದ್ದಲಿ ಪೂಜೆಗೆ ಕ್ರಿಕೆಟ್ ದಿಗ್ಗಜರು
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ಹೈದರಾಬಾದ್​ಗೆ ಕೊಹ್ಲಿ ಆಗಮನ; ಅಭಿಮಾನಿಗಳಿಂದ ಅನ್ನ ಸಂತರ್ಪಣೆ
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ