ಇಂದು ಸಂಜೆ 4.30ಕ್ಕೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಸಭೆ; ಕೊವಿಡ್ 19 ನಿಯಂತ್ರಣ ಬಗ್ಗೆ ಮಹತ್ವದ ಚರ್ಚೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ ವಾರ ಉನ್ನತ ಮಟ್ಟದ ಸಭೆ ನಡೆಸಿದ್ದರು. ದೇಶದ ಒಟ್ಟಾರೆ ಕೊವಿಡ್​ 19 ಪರಿಸ್ಥಿತಿಯ ಅವಲೋಕನ ಮಾಡಿದ್ದರು.

ಇಂದು ಸಂಜೆ 4.30ಕ್ಕೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಪ್ರಧಾನಿ ಮೋದಿ ಸಭೆ; ಕೊವಿಡ್ 19 ನಿಯಂತ್ರಣ ಬಗ್ಗೆ ಮಹತ್ವದ ಚರ್ಚೆ
ಪ್ರಧಾನಿ ಮೋದಿ
Follow us
| Updated By: Lakshmi Hegde

Updated on:Jan 13, 2022 | 11:36 AM

ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಇಂದು ಸಂಜೆ 4.30ಕ್ಕೆ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವರ್ಚ್ಯುವಲ್​ ಸಭೆ ನಡೆಸಲಿದ್ದಾರೆ. ದೇಶದಲ್ಲಿ ದಿನೇದಿನೆ ಕೊರೊನಾ ವೈರಸ್​ ಮತ್ತು ಒಮಿಕ್ರಾನ್​ ಸೋಂಕಿತರ (Omicron Virus)ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಸಭೆ ಮಹತ್ವ ಎನ್ನಿಸಿದೆ.  ಇಂದು ದೇಶದಲ್ಲಿ 2.47 ಲಕ್ಷ ಕೊರೊನಾ ಕೇಸ್​ಗಳು ದಾಖಲಾಗಿದ್ದು, 380 ಮಂದಿ ಸೋಂಕಿನಿಂದ ಸತ್ತಿದ್ದಾರೆ. ಕೊವಿಡ್ 19 ಪ್ರಕರಣಗಳಲ್ಲಿ ಏರಿಕೆಯಾಗುತ್ತಿದ್ದಂತೆ ಈಗಾಗಲೇ ಹಲವು ರಾಜ್ಯಗಳು ನೈಟ್​ ಕರ್ಫ್ಯೂ, ಗುಂಪುಗೂಡುವಿಕೆ ನಿಷೇಧ, ಸಾರ್ವಜನಿಕ ಸಭೆ-ಸಮಾರಂಭಗಳಿಗೆ ಕಡಿವಾಣದಂಥ ನಿರ್ಬಂಧಗಳನ್ನು ಹೇರಿವೆ.  ಹಾಗಿದ್ದಾಗ್ಯೂ ಕೂಡ ಕೊರೊನಾ ಇಳಿಮುಖ ಆಗುತ್ತಿಲ್ಲ. ದೈನಂದಿನ ಪಾಸಿಟಿವಿಟಿ ರೇಟ್​ ಕೂಡ ಏರುತ್ತಿದೆ. ಅದರಲ್ಲೂ ಮಹಾರಾಷ್ಟ್ರ, ಪಶ್ಚಿಮಬಂಗಾಳ, ಕರ್ನಾಟಕ, ರಾಜಸ್ಥಾನ ಸೇರಿ ಕೆಲವು ರಾಜ್ಯಗಳಲ್ಲಂತೂ ಕೊರೊನಾ ಅತ್ಯಂತ ವೇಗವಾಗಿ ಹಬ್ಬುತ್ತಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಕಳೆದ ವಾರ ಉನ್ನತ ಮಟ್ಟದ ಸಭೆ ನಡೆಸಿದ್ದರು. ದೇಶದ ಒಟ್ಟಾರೆ ಕೊವಿಡ್​ 19 ಪರಿಸ್ಥಿತಿಯ ಅವಲೋಕನ ಮಾಡಿದ್ದರು. ಹೆಚ್ಚುತ್ತಿರುವ ಕೊರೊನಾ ವಿರುದ್ಧ ಹೋರಾಡಲು ಆರೋಗ್ಯ ಕ್ಷೇತ್ರ ಎಷ್ಟು ಸನ್ನದ್ಧವಾಗಿದೆ?, ಕೊರೊನಾ ಲಸಿಕೆ ಅಭಿಯಾನದ ವೇಗ ಹೇಗಿದೆ?, ಒಮಿಕ್ರಾನ್ ಸೋಂಕಿನಿಂದ ಯಾವ ಸ್ವರೂಪದ ಅನಾರೋಗ್ಯ ಉಂಟಾಗುತ್ತಿದೆ ಎಂಬಿತ್ಯಾದಿ ವಿಷಯಗಳ ಬಗ್ಗೆ ಚರ್ಚಿಸಿ, ಪರಿಶೀಲನೆ ನಡೆಸಿದ್ದರು. ಈ ಸಭೆಯಲ್ಲಿ ದೇಶದ ಕೊವಿಡ್​ 19 ಪರಿಸ್ಥಿತಿ ಮತ್ತು ಜಾಗತಿಕವಾಗಿ ಯಾವ್ಯಾವ ದೇಶದಲ್ಲಿ ಯಾವ ಪರಿಸ್ಥಿತಿ ಇದೆ ಎಂಬ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಪ್ರಧಾನಮಂತ್ರಿಗೆ ಸವಿಸ್ತಾರವಾಗಿ ವರದಿ ನೀಡಿದ್ದರು ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಕೊರೊನಾ ಹೆಚ್ಚಳವಾಗುತ್ತಿದ್ದರೂ, ಇನ್ನೊಂದೆಡೆ ಕೊರೊನಾ ಲಸಿಕೆ ನೀಡಿಕೆ ಅಭಿಯಾನವೂ ವೇಗಗೊಂಡಿದೆ. 15-18ವರ್ಷದವರಿಗೆ ಲಸಿಕೆ ನೀಡಲಾಗುತ್ತಿದ್ದು, ಇನ್ನೊಂದಡೆ ಜನವರಿ 10ರಿಂದ ಆರೋಗ್ಯ ಕಾರ್ಯಕರ್ತರು ಸೇರಿ, ಕೊವಿಡ್ 19 ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುವವರಿಗೆ ಮತ್ತು 60 ವರ್ಷ ಮೇಲ್ಪಟ್ಟು ಇತರ ರೋಗಗಳಿಂದ ಬಳಲುತ್ತಿರುವವರಿಗೆ ಬೂಸ್ಟರ್​ ಡೋಸ್​ ನೀಡುವ ಕಾರ್ಯವೂ ಶುರುವಾಗಿದೆ. ಕಳೆದ ಸಭೆಯಲ್ಲಿ ಪ್ರಧಾನಿ ಮೋದಿ, ಲಸಿಕೆ ವೇಗವನ್ನು ಇನ್ನಷ್ಟು ಹೆಚ್ಚಿಸಬೇಕು. ಮಿಷನ್​ ಮೋಡ್​​ನಲ್ಲಿ ಅಭಿಯಾನ ವಿಸ್ತರಣೆಯಾಗಬೇಕು. ಹಾಗೇ, ಕೇಂದ್ರದ ಆರೋಗ್ಯ ಇಲಾಖೆ ಅಧಿಕಾರಿಗಳು ಪ್ರತಿ ರಾಜ್ಯಗಳ ಆರೋಗ್ಯ ಅಧಿಕಾರಿಗಳ ಜತೆ ಸಂಪರ್ಕದಲ್ಲಿರಬೇಕು. ಜಿಲ್ಲಾ ಮಟ್ಟದಲ್ಲಿ ಆರೋಗ್ಯ ವ್ಯವಸ್ಥೆ ಸದೃಢಗೊಳಿಸಲು ಶ್ರಮಿಸಬೇಕು ಎಂದು ಸೂಚಿಸಿದ್ದಾರೆ.  ಅಷ್ಟೇ ಅಲ್ಲ, ಕೊವಿಡ್​ 19 ತಪಾಸಣೆ, ಲಸಿಕೆಗಳು ಮತ್ತು ಜಿನೋಮ್ ಸಿಕ್ವೆನ್ಸಿಂಗ್​ಗಳಲ್ಲಿ ಹೆಚ್ಚೆಚ್ಚು ವೈಜ್ಞಾನಿಕ ಸಂಶೋಧನೆಯಾಗಬೇಕು ಎಂದು ಪ್ರಧಾನಿ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಗಾಯಗೊಂಡ ಹಕ್ಕಿ ಬೇಗ ಗುಣಮುಖವಾಗುವಂತೆ ಗಾಯತ್ರಿ ಮಂತ್ರ ಹೇಳಿ ಪ್ರಾರ್ಥಿಸಿದ ಶಿಲ್ಪಾ ಪುತ್ರಿ; ಮುದ್ದಾದ ವಿಡಿಯೋ ಇಲ್ಲಿದೆ

Published On - 11:29 am, Thu, 13 January 22

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್