AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗಸ್ಟ್ 21-22ರಂದು ಪೋಲೆಂಡ್​ಗೆ, ಆಗಸ್ಟ್ 23ರಂದು ಉಕ್ರೇನ್​ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಇಟಲಿಯಲ್ಲಿ ವೊಲೊಡಿಮಿರ್ ಝೆಲೆನ್ಸ್ಕಿಯನ್ನು ಭೇಟಿಯಾಗಿದ್ದರು. ಕಳೆದ ತಿಂಗಳು ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಮೋದಿ ಭೇಟಿ ಮಾಡಿದ್ದರು. ಕಳೆದ ತಿಂಗಳ ಅವರ ರಷ್ಯಾ ಭೇಟಿಗೆ ಉಕ್ರೇನ್ ಅಧ್ಯಕ್ಷ ಬೇಸರ ಹೊರಹಾಕಿದ್ದರು.

ಆಗಸ್ಟ್ 21-22ರಂದು ಪೋಲೆಂಡ್​ಗೆ, ಆಗಸ್ಟ್ 23ರಂದು ಉಕ್ರೇನ್​ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ
ಪ್ರಧಾನಿ ನರೇಂದ್ರ ಮೋದಿ
ಸುಷ್ಮಾ ಚಕ್ರೆ
|

Updated on: Aug 19, 2024 | 7:43 PM

Share

ನವದೆಹಲಿ: ರಷ್ಯಾದ ಮಾಸ್ಕೋಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿ ಒಂದು ತಿಂಗಳಾಗಿದೆ. ಅದರ ಬೆನ್ನಲ್ಲೇ ಮೋದಿ ಉಕ್ರೇನ್​ಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಘೋಷಿಸಿತ್ತು. ಇದೀಗ ಆ ಪ್ರವಾಸದ ದಿನಾಂಕವನ್ನು ಕೂಡ ಘೋಷಿಸಿದೆ. ಪ್ರಧಾನಿ ನರೇಂದ್ರ ಮೋದಿ ಆಗಸ್ಟ್ 21 ಮತ್ತು 22ರಂದು ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ. ಅದಾದ ನಂತರ ಆಗಸ್ಟ್ 23ರಂದು ಉಕ್ರೇನ್‌ಗೆ ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಸ್ಪಷ್ಟಪಡಿಸಿದೆ.

ಪ್ರಧಾನಿ ಡೊನಾಲ್ಡ್ ಟಸ್ಕ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರ ಆಗಸ್ಟ್ 21 ಮತ್ತು 22ರಂದು ಪೋಲೆಂಡ್‌ಗೆ ಭೇಟಿ ನೀಡಲಿದ್ದಾರೆ. 45 ವರ್ಷಗಳ ನಂತರ ಭಾರತದ ಪ್ರಧಾನಿ ಪೋಲೆಂಡ್‌ಗೆ ಭೇಟಿ ನೀಡುತ್ತಿರುವ ಕಾರಣ ಇದು ಮಹತ್ವದ ಭೇಟಿಯಾಗಿದೆ.

ಇದನ್ನೂ ಓದಿ: ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ-ಕೊಲೆ ಪ್ರಕರಣ: ಪ್ರಧಾನಿ ಮೋದಿಗೆ ಪತ್ರ ಬರೆದ ಪದ್ಮಶ್ರೀ ಪುರಸ್ಕೃತ 70 ವೈದ್ಯರು

ಹಾಗೇ, ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಈ ವಾರದ ಕೊನೆಯಲ್ಲಿ ಶುಕ್ರವಾರ (ಆಗಸ್ಟ್ 23) ಉಕ್ರೇನ್‌ಗೆ ಅಧಿಕೃತ ಭೇಟಿಯನ್ನು ಕೈಗೊಳ್ಳಲಿದ್ದಾರೆ. ಇದು ಒಂದು ಹೆಗ್ಗುರುತಾಗಿದೆ ಮತ್ತು ಐತಿಹಾಸಿಕ ಭೇಟಿಯಾಗಿದೆ. ನಾವು ನಮ್ಮ ರಾಜತಾಂತ್ರಿಕ ಸಂಬಂಧಗಳನ್ನು ಸ್ಥಾಪಿಸಿದ ನಂತರ 40 ವರ್ಷಗಳ ನಂತರ ಭಾರತೀಯ ಪ್ರಧಾನಿಯೊಬ್ಬರು ಉಕ್ರೇನ್‌ಗೆ ಭೇಟಿ ನೀಡುತ್ತಿರುವುದು ಇದೇ ಮೊದಲು.

ಜಿ7 ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಇಟಲಿಯಲ್ಲಿ ಝೆಲೆನ್ಸ್ಕಿಯನ್ನು ಭೇಟಿಯಾಗಿದ್ದರು. ಕಳೆದ ತಿಂಗಳು ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಮೋದಿ ಭೇಟಿ ಮಾಡಿದ್ದರು. ಉಕ್ರೇನ್ ಸಂಘರ್ಷದಲ್ಲಿ ಭಾರತದ ನಿಲುವನ್ನು ಭಾರತೀಯ ವಿದೇಶಾಂಗ ಸಚಿವಾಲಯ ಪುನರುಚ್ಚರಿಸಿತ್ತು.

ಇದನ್ನೂ ಓದಿ: ರಾಖಿಯಲ್ಲಿ ದಾಖಲಾಯ್ತು ತಾಯಿ-ಮಗನ ಆಪ್ತ ಕ್ಷಣ; ಮೋದಿಗೆ ವಿಶೇಷ ರಾಖಿ ಕಟ್ಟಿದ ಬಾಲಕಿ

ರಾಜತಾಂತ್ರಿಕತೆ ಮತ್ತು ಸಂವಾದವು ಈ ಸಂಘರ್ಷವನ್ನು (ರಷ್ಯಾ ಮತ್ತು ಉಕ್ರೇನ್ ನಡುವೆ) ಪರಿಹರಿಸಬಹುದು. ಇದು ನಿರಂತರ ಶಾಂತಿಗೆ ಕಾರಣವಾಗಬಹುದು ಎಂದು ಭಾರತವು ಅತ್ಯಂತ ಸ್ಪಷ್ಟವಾದ ಮತ್ತು ಸ್ಥಿರವಾದ ಸ್ಥಾನವನ್ನು ಹೊಂದಿದೆ. ಉಕ್ರೇನ್ ಮೇಲೆ ರಷ್ಯಾ ಯುದ್ಧ ಸಾರಿದೆ. ಈಗಾಗಲೇ ರಷ್ಯಾ ಮತ್ತು ಉಕ್ರೇನ್‌ನ ನಾಯಕರೊಂದಿಗೆ ಪ್ರಧಾನಿ ಮೋದಿ ಮಾತುಕತೆ ನಡೆಸಿದ್ದರು. ಇತ್ತೀಚೆಗೆ ಪ್ರಧಾನಿ ಮೋದಿ ಕೂಡ ರಷ್ಯಾಕ್ಕೆ ಭೇಟಿ ನೀಡಿದ್ದರು. ಆ ಭೇಟಿಯನ್ನು ಉಕ್ರೇನ್ ಅಧ್ಯಕ್ಷ ಟೀಕೆ ಮಾಡಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ವಿಚಾರಣೆ ಮುಂದೂಡಿಕೆ; ದರ್ಶನ್ ಮನವಿ ವಜಾ
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಬೆಂಗಳೂರಿನಲ್ಲಿ 800 KG ಜಿಲೆಟಿನ್‌ ಜಪ್ತಿ, ದೊಡ್ಡ ಅಪಾಯ ಜಸ್ಟ್ ಮಿಸ್!
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಮದ್ಯದ ಬಾಟಲ್ ಇಟ್ಟುಕೊಂಡು ಯಾರಿವಳು ಯಾರಿವಳು ಹಾಡು ಹಾಡಿದ ಸ್ವಾಮೀಜಿ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಭವಾನಿ ಶಂಕರ ದೇವಸ್ಥಾನದ ಪುಷ್ಕರಣಿ ಜಾಗ ಒತ್ತುವರಿ ಆರೋಪ
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಪ್ರಜ್ವಲ್ ರೇವಣ್ಣ ಬಳಿ ಮತ್ತೊಂದು ಮೊಬೈಲ್ ಪತ್ತೆ!
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಮದುವೆ ಮನೆ ಆಹಾರ ಪರಿಶೀಲನೆಗೂ ಸೂಚನೆ: ಖಾದರ್ ಮಹತ್ವದ ಘೋಷಣೆ
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಸೊಳ್ಳೆ ಕಾಟಕ್ಕೆ ಮುಕ್ತಿ ನೀಡಿ ಪ್ಲೀಸ್, ದರ್ಶನ್; ನಾನೇನು ಮಾಡೋಕಾಗಲ್ಲ DGP
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಕೋಟಿ ಆಸ್ತಿಗಾಗಿ ಜೀವಂತ ವೃದ್ಧನ ಮರಣ ಪ್ರಮಾಣಪತ್ರ ಸೃಷ್ಟಿಸಿ ವಂಚನೆ!
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ಒಂಟಿ ಮನೆಗಳನ್ನೇ ದರೋಡೆ ಮಾಡ್ತಿದ್ದ ಖತರ್ನಾಕ್ ಗ್ಯಾಂಗ್ ಬಂಧನ
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್
ನಾಗೇಂದ್ರ ರಾಜೀನಾಮೆ ಪಟ್ಟು, ರಾಜ್ಯಾದ್ಯಂತ ಪ್ರತಿಭಟನೆಗೂ ಬಿಜೆಪಿ ಪ್ಲ್ಯಾನ್