AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳ- ಭಾರತದ ಗಡಿ ದುರ್ಬಳಕೆಯಾಗಬಾರದು; ದೆಹಲಿಯಲ್ಲಿ ನೇಪಾಳದ ಪ್ರಧಾನಿ ಭೇಟಿ ವೇಳೆ ಮೋದಿ ಮನವಿ

ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳದ ಪ್ರಧಾನಿ ದೇವುಬಾ ಬಿಹಾರದ ಜಯನಗರ ಮತ್ತು ನೇಪಾಳದ ಕುರ್ತಾ ನಡುವಿನ ಗಡಿಯಾಚೆಗಿನ ರೈಲು ಜಾಲವನ್ನು ಉದ್ಘಾಟಿಸಿದರು. ಹಾಗೇ ನೇಪಾಳದಲ್ಲಿ ರುಪೇ ಪಾವತಿ ಕಾರ್ಡ್​ಗೆ ಚಾಲನೆ ನೀಡಿದರು.

ನೇಪಾಳ- ಭಾರತದ ಗಡಿ ದುರ್ಬಳಕೆಯಾಗಬಾರದು; ದೆಹಲಿಯಲ್ಲಿ ನೇಪಾಳದ ಪ್ರಧಾನಿ ಭೇಟಿ ವೇಳೆ ಮೋದಿ ಮನವಿ
ಪ್ರಧಾನಿ ನರೇಂದ್ರ ಮೋದಿ- ನೇಪಾಳದ ಪ್ರಧಾನಿ ದೇವುಬಾ ಭೇಟಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Apr 02, 2022 | 5:07 PM

ನವದೆಹಲಿ: ಮೂರು ದಿನಗಳ ಭಾರತದ ಪ್ರವಾಸದಲ್ಲಿರುವ ನೇಪಾಳ ಪ್ರಧಾನ ಮಂತ್ರಿ ಶೇರ್ ಬಹದ್ದೂರ್ ದೇವುಬಾ (Sher Bahadur Deuba) ಇಂದು ಭಾರತದ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿದ್ದಾರೆ. ಈ ವೇಳೆ ಉಭಯ ರಾಷ್ಟ್ರಗಳ ಮುಖ್ಯಸ್ಥರು ಗಡಿ ಸಮಸ್ಯೆಗಳ ಕುರಿತು ಚರ್ಚಿಸಿದ್ದಾರೆ. ಭಾರತ-ನೇಪಾಳ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳಿ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಉಭಯ ದೇಶಗಳ ನಡುವಿನ ಸಂಪರ್ಕವನ್ನು ಹೆಚ್ಚಿಸಲು ಅನೇಕ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ. ದೇವುಬಾ ಅವರು ಉನ್ನತ ಮಟ್ಟದ ನಿಯೋಗದೊಂದಿಗೆ ಮೂರು ದಿನಗಳ ಭೇಟಿಗಾಗಿ ಶುಕ್ರವಾರ ನವದೆಹಲಿಗೆ ಆಗಮಿಸಿದರು. ಪ್ರಧಾನಿ ಮೋದಿ ಮತ್ತು ದೇವುಬಾ ಬಿಹಾರದ ಜಯನಗರ ಮತ್ತು ನೇಪಾಳದ ಕುರ್ತಾ ನಡುವಿನ ಗಡಿಯಾಚೆಗಿನ ರೈಲು ಜಾಲವನ್ನು ಉದ್ಘಾಟಿಸಿದರು. ಅವರು ನೇಪಾಳದಲ್ಲಿ ರುಪೇ ಪಾವತಿ ಕಾರ್ಡ್ ಮತ್ತು ಸೋಲು ವಿದ್ಯುತ್ ಪ್ರಸರಣ ಮಾರ್ಗವನ್ನು ಪ್ರಾರಂಭಿಸಿದರು.

“ಪ್ರಧಾನಿ ದೇವುಬಾ ಭಾರತದ ಹಳೆಯ ಸ್ನೇಹಿತ. ಪ್ರಧಾನಿಯಾಗಿ ಇದು ಅವರ ಐದನೇ ಭಾರತದ ಭೇಟಿಯಾಗಿದೆ. ಭಾರತ-ನೇಪಾಳ ಸಂಬಂಧಗಳನ್ನು ಅಭಿವೃದ್ಧಿಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ಭಾರತ ಮತ್ತು ನೇಪಾಳ ನಡುವಿನ ಸ್ನೇಹ, ನಮ್ಮ ಜನರ ನಡುವಿನ ಸಂಬಂಧಗಳು ಬೇರೆಲ್ಲರಿಗೂ ಒಂದು ಉದಾಹರಣೆಯಾಗಿದೆ. ಇದನ್ನು ಪ್ರಪಂಚದಲ್ಲಿ ಬೇರೆಲ್ಲಿಯೂ ಕಾಣಲು ಸಾಧ್ಯವಿಲ್ಲ. ನಮ್ಮ ನಾಗರಿಕತೆ, ಸಂಸ್ಕೃತಿ ಮತ್ತು ನಮ್ಮ ವಿನಿಮಯದ ಎಳೆಗಳು ಪ್ರಾಚೀನ ಕಾಲದಿಂದಲೂ ಸಂಬಂಧ ಹೊಂದಿವೆ. ನಾವು ಅನಾದಿ ಕಾಲದಿಂದಲೂ ಪರಸ್ಪರರ ಸುಖ-ದುಃಖದ ಒಡನಾಡಿಗಳಾಗಿದ್ದೇವೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ವಿದ್ಯುತ್ ವಲಯದಲ್ಲಿ ಸಹಕಾರವನ್ನು ಬಲಪಡಿಸಲು ನೇಪಾಳದ ಪ್ರಧಾನಿ ಒಪ್ಪಿಕೊಂಡಿದ್ದಾರೆ. ಭವಿಷ್ಯದ ನೀಲನಕ್ಷೆಯಾಗಿ ಕಾರ್ಯನಿರ್ವಹಿಸುವ ವಿದ್ಯುತ್ ಸಹಕಾರದ ಕುರಿತು ಜಂಟಿ ವಿಷನ್ ಹೇಳಿಕೆಯನ್ನು ಅಂತಿಮಗೊಳಿಸಿದ್ದಾರೆ ಎಂದು ಮೋದಿ ಹೇಳಿದ್ದಾರೆ. 2021ರಲ್ಲಿ 5ನೇ ಬಾರಿಗೆ ನೇಪಾಳದ ಪ್ರಧಾನಿಯಾದ ನಂತರ ಭಾರತಕ್ಕೆ ದೇವುಬಾ ಅವರ ಮೊದಲ ದ್ವಿಪಕ್ಷೀಯ ಭೇಟಿ ಇದಾಗಿದೆ. ಅವರು ಪ್ರಧಾನ ಮಂತ್ರಿಯಾಗಿ ಹಿಂದಿನ 4 ಅವಧಿಗಳಲ್ಲಿ ಅವರು ಭಾರತಕ್ಕೆ ಭೇಟಿ ನೀಡಿದ್ದರು. ಕೊನೆಯ ಬಾರಿ 2017ರಲ್ಲಿ ನೇಪಾಳದ ಪ್ರಧಾನಿ ಭಾರತಕ್ಕೆ ಆಗಮಿಸಿದ್ದರು.

ನಾವು ಗಡಿ ಸಮಸ್ಯೆಗಳ ಬಗ್ಗೆ ಚರ್ಚಿಸಿದ್ದೇವೆ. ಮತ್ತು ದ್ವಿಪಕ್ಷೀಯ ಕಾರ್ಯವಿಧಾನವನ್ನು ಸ್ಥಾಪಿಸುವ ಮೂಲಕ ಪರಿಹರಿಸಲು ನಾನು ಮೋದಿಜಿಯನ್ನು ಒತ್ತಾಯಿಸಿದ್ದೇವೆ ಎಂದು ಶೇರ್ ಬಹದ್ದೂರ್ ದೇವುಬಾ ಹೇಳಿದ್ದಾರೆ. ನಮ್ಮ ರಕ್ಷಣಾ ಮತ್ತು ಭದ್ರತಾ ಅಧಿಕಾರಿಗಳ ನಡುವೆ ಆಳವಾದ ಸಹಕಾರಕ್ಕೆ ನಾವು ಒತ್ತು ನೀಡಿದ್ದೇವೆ. ಭಾರತ-ನೇಪಾಳ ಸಂಬಂಧಗಳ ಮಹತ್ವಾಕಾಂಕ್ಷೆಯ ಗುರಿಗಳನ್ನು ಸಾಧಿಸುವ ಉದ್ದೇಶವನ್ನು ನಮ್ಮ ಮಾತುಕತೆಯ ಮೂಲಕ ಸಾಧಿಸಲು ಸಾಧ್ಯವಾಗುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದಿದ್ದಾರೆ.

ನೇಪಾಳದ ಪ್ರಧಾನಿ ದೇವುಬಾ ಅವರ ಮಾತುಗಳನ್ನು ಆಲಿಸಿದ ನರೇಂದ್ರ ಮೋದಿ, ಭಾರತ ಮತ್ತು ನೇಪಾಳ ನಡುವಿನ “ಮುಕ್ತ ಗಡಿ”ಯನ್ನು ಅನಪೇಕ್ಷಿತ ಅಂಶಗಳಿಂದ ದುರುಪಯೋಗಪಡಿಸಿಕೊಳ್ಳಬಾರದು ಎಂದು ಉಭಯ ಕಡೆಯವರು ಚರ್ಚಿಸುವುದಾಗಿ ಹೇಳಿದ್ದಾರೆ. ನೇಪಾಳ ಪೊಲೀಸ್ ಅಕಾಡೆಮಿ, ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ಗಳು ಮತ್ತು ರಾಮಾಯಣ ಸರ್ಕ್ಯೂಟ್‌ನಂತಹ ಇತರ ಯೋಜನೆಗಳ ಕುರಿತು ಉಭಯ ದೇಶಗಳ ಪ್ರಧಾನಿಗಳು ಚರ್ಚಿಸಿದ್ದಾರೆ.

ನೇಪಾಳದ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರು ಏಪ್ರಿಲ್ 3ರವರೆಗೆ ಭಾರತದ ಪ್ರವಾಸ ಕೈಗೊಂಡಿದ್ದಾರೆ. ಭಾರತ- ನೇಪಾಳದ ಪ್ರಧಾನಿಗಳ ಮಾತುಕತೆಯ ಪ್ರಮುಖ ಅಂಶಗಳು ಇಲ್ಲಿವೆ:

1) ಬಿಹಾರದ ಜಯನಗರ ಮತ್ತು ನೇಪಾಳದ ಕುರ್ತಾ ನಡುವೆ 35 ಕಿಮೀ ಉದ್ದದ ಗಡಿಯಾಚೆಗಿನ ರೈಲು ಸಂಪರ್ಕವನ್ನು ಪ್ರಧಾನಿ ಮೋದಿ ಮತ್ತು ಅವರ ನೇಪಾಳದ ಸಹವರ್ತಿ ದೇವುಬಾ ಉದ್ಘಾಟಿಸಿದರು.

2) ಪ್ರಧಾನಿ ಮೋದಿ ಮತ್ತು ಅವರ ನೇಪಾಳದ ಪ್ರಧಾನಿ ದೇವುಬಾ ನೇಪಾಳದಲ್ಲಿ ಸೋಲು ವಿದ್ಯುತ್ ಪ್ರಸರಣ ಮಾರ್ಗವನ್ನು ಉದ್ಘಾಟಿಸಿದರು.

3) ಮೋದಿ ಮತ್ತು ದೇವುಬಾ ನೇಪಾಳದಲ್ಲಿ ರುಪೇ ಪಾವತಿ ಕಾರ್ಡ್ ಅನ್ನು ಪ್ರಾರಂಭಿಸಿದರು.

4) ಮೋದಿ ಮತ್ತು ದೇವುಬಾ ನಡುವಿನ ಮಾತುಕತೆಯ ನಂತರ ರೈಲ್ವೇ ಮತ್ತು ಶಕ್ತಿಯಂತಹ ಕ್ಷೇತ್ರಗಳಲ್ಲಿ ಬಾಂಧವ್ಯವನ್ನು ವಿಸ್ತರಿಸಲು ಭಾರತ, ನೇಪಾಳ ನಾಲ್ಕು ಒಪ್ಪಂದಗಳನ್ನು ಅಂತಿಮಗೊಳಿಸಿದವು.

5) ನಾವು ಗಡಿ ಸಮಸ್ಯೆಯನ್ನು ಚರ್ಚಿಸಿದ್ದೇವೆ ಮತ್ತು ದ್ವಿಪಕ್ಷೀಯ ಕಾರ್ಯವಿಧಾನವನ್ನು ಸ್ಥಾಪಿಸುವ ಮೂಲಕ ಅದನ್ನು ಪರಿಹರಿಸಲು ನಾನು ಪ್ರಧಾನಿ ಮೋದಿಯನ್ನು ಒತ್ತಾಯಿಸಿದೆ ಎಂದು ನೇಪಾಳ ಪ್ರಧಾನಿ ದೇವುಬಾ ಹೇಳಿದರು.

6) ಭಾರತದೊಂದಿಗೆ ನೇಪಾಳದ ಸಂಬಂಧವು ಅತ್ಯಂತ ಮಹತ್ವದ್ದಾಗಿದೆ ಎಂದು ನೇಪಾಳ ಪ್ರಧಾನಿ ಶೇರ್ ಬಹದ್ದೂರ್ ದೇವುಬಾ ಅವರು ಪ್ರಧಾನಿ ಮೋದಿಯವರೊಂದಿಗಿನ ಮಾತುಕತೆಯ ನಂತರ ಹೇಳಿದರು.

7) ನೇಪಾಳದ ಜಲವಿದ್ಯುತ್ ಅಭಿವೃದ್ಧಿ ಯೋಜನೆಗಳಲ್ಲಿ ಭಾರತೀಯ ಕಂಪನಿಗಳು ಹೆಚ್ಚಿನ ಭಾಗವಹಿಸುವಿಕೆಯನ್ನು ನಾವು ಒಪ್ಪಿಕೊಂಡಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದರು.

8) “ವಿದ್ಯುತ್ ಸಹಕಾರದ ಕುರಿತು ನಮ್ಮ ಜಂಟಿ ದೃಷ್ಟಿ ಹೇಳಿಕೆಯು ಭವಿಷ್ಯದ ಸಹಕಾರಕ್ಕಾಗಿ ಒಂದು ನೀಲನಕ್ಷೆ ಎಂದು ಸಾಬೀತುಪಡಿಸುತ್ತದೆ” ಎಂದು ಮೋದಿ ಹೇಳಿದರು.

9) ಭಾರತ ಮತ್ತು ನೇಪಾಳ ನಡುವಿನ ಸೌಹಾರ್ದ ಸಂಬಂಧಗಳು ಅನನ್ಯವಾಗಿವೆ ಎಂದು ಭಾರತದ ಪ್ರಧಾನಮಂತ್ರಿಯವರು ಎತ್ತಿ ತೋರಿಸಿದರು. ಇಂತಹ ಸ್ನೇಹ ಜಗತ್ತಿನ ಬೇರೆಲ್ಲೂ ಕಾಣಸಿಗುವುದಿಲ್ಲ ಎಂದು ಮೋದಿ ಹೇಳಿದರು.

10) ನೇಪಾಳದ ಶಾಂತಿ, ಸಮೃದ್ಧಿ ಮತ್ತು ಅಭಿವೃದ್ಧಿಯ ಪ್ರಯಾಣದಲ್ಲಿ ಭಾರತದ ದೃಢವಾದ ಬೆಂಬಲವನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದರು.

ಇದನ್ನೂ ಓದಿ: ‘ಯೋಗದ ಮೂಲ ಭಾರತ ಅಲ್ಲ..ಅದನ್ನು ವಿಶ್ವಕ್ಕೆ ಪರಿಚಯಿಸಿದ್ದಷ್ಟೇ ಪ್ರಧಾನಿ ಮೋದಿ’-ಮತ್ತೊಂದು ವಿವಾದ ಹುಟ್ಟಿಸಿದ ನೇಪಾಳ ಪ್ರಧಾನಿ

ಪ್ರಧಾನಿ ಮೋದಿ ಪರೆಶಾನಿ ಪೇ ಚರ್ಚಾ ಮಾಡುವುದು ಯಾವಾಗ?; ಇಂಧನ ಬೆಲೆ ಏರಿಕೆ, ನಿರುದ್ಯೋಗ ಸಮಸ್ಯೆ ಬಗ್ಗೆ ಎನ್​​ಸಿಪಿ ತರಾಟೆ

Published On - 5:06 pm, Sat, 2 April 22

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ