AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goa Liberation Day 2021: ಗೋವಾ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ಮೋದಿ ಪುಷ್ಪನಮನ

ಗೋವಾ ವಿಮೋಚನಾ ದಿನ (ಆಪರೇಶನ್​ ವಿಜಯ್​)ವಾದ ಇಂದು ಪ್ರಧಾನಿ ನರೇಂದ್ರ ಮೋದಿ ಐದು ಯೋಜನೆಗಳಿಗೆ ವರ್ಚ್ಯುವಲ್ ಆಗಿ ಚಾಲನೆ ನೀಡಿದ್ದಾರೆ.

Goa Liberation Day 2021: ಗೋವಾ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ಮೋದಿ ಪುಷ್ಪನಮನ
ಪ್ರಧಾನಿ ಮೋದಿ
Follow us
TV9 Web
| Updated By: Lakshmi Hegde

Updated on:Dec 19, 2021 | 4:56 PM

ಗೋವಾ ವಿಮೋಚನಾ ದಿನ(Goa Liberation Day 2021) ಕಾರ್ಯಕ್ರಮದಲ್ಲಿ ಇಂದು ಭಾಗಿಯಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಹಾಗೇ, ಗೋವಾ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರ ಸ್ಮಾರಕಕ್ಕೆ ಆಜಾದ್ ಮೈದಾನಲ್ಲಿ ಪುಷ್ಪನಮನ ಸಲ್ಲಿಸಿದರು.  1961ರ ಡಿಸೆಂಬರ್​ 19ರಂದು ಗೋವಾ ಪೋರ್ಚುಗೀಸರ ಆಡಳಿತದಿಂದ ಮುಕ್ತವಾಗಿದೆ. ಹೀಗಾಗಿ ಇಲ್ಲಿ ಪ್ರತಿವರ್ಷವೂ ಡಿಸೆಂಬರ್​ 19ರಂದು ವಿಮೋಚನಾ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ 60ನೇ ವರ್ಷದ ಸ್ವಾತಂತ್ರ್ಯ ದಿನ ನಡೆಯುತ್ತಿದ್ದು, ಮಧ್ಯಾಹ್ನದ ಹೊತ್ತಿಗೆ ಪ್ರಧಾಗಿ ಮೋದಿ ಗೋವಾ ತಲುಪಿ, ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.  ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆ (Goa Assembly Election 2022) ದೃಷ್ಟಿಯಿಂದ, ಪ್ರಧಾನಿ ಮೋದಿಯವರ ಈ ಭೇಟಿ ಮಹತ್ವದ್ದಾಗಿದೆ.

ಇಂದು ಮಧ್ಯಾಹ್ನ 1.30ರ ಹೊತ್ತಿಗೆ ತಲುಪಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬರಮಾಡಿಕೊಂಡರು. ಅಲ್ಲಿಂದಲೇ ಪಣಜಿಯ ಆಜಾದ್ ಮೈದಾನಕ್ಕೆ ತೆರಳಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಗೌರವ ಸಲ್ಲಿಸಿದರು. ಅಲ್ಲಿಂದ ಮಿರಾಮರ್ ಬೀಚ್​​ಗೆ ತೆರಳಿ, ಸೇಲ್ ಪರೇಡ್​ ಮತ್ತು ಫ್ಲೈಪಾಸ್ಟ್ (ಏರ್​ಕ್ರಾಫ್ಟ್ ಗೌರವಾನ್ವಿತ ಹಾರಾಟ) ಗೌರವ ಪಡೆದರು. ಅಲ್ಲಿಂದ, ಗೋವಾ ವಿಮೋಚನಾ ದಿನದ ಮುಖ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಸ್ಟೇಡಿಯಂಗೆ ತೆರಳಿದ್ದಾರೆ.   ಇಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದರು. ಹಾಗೇ, ನಬಾರ್ಡ್​, ಎನ್​ಜಿಒಗಳ ಸಿಬ್ಬಂದಿಗೆ ಪ್ರಶಸ್ತಿ ಪುರಸ್ಕಾರ ಮಾಡಿದರು.

ಐದು ಯೋಜನೆಗಳಿಗೆ ಚಾಲನೆ ಹಾಗೇ, ಗೋವಾ ವಿಮೋಚನಾ ದಿನ (ಆಪರೇಶನ್​ ವಿಜಯ್​)ವಾದ ಇಂದು ಪ್ರಧಾನಿ ನರೇಂದ್ರ ಮೋದಿ ಐದು ಯೋಜನೆಗಳಿಗೆ ವರ್ಚ್ಯುವಲ್ ಆಗಿ ಚಾಲನೆ ನೀಡಿದ್ದಾರೆ. ನವೀಕರಿಸಲಾದ ಫೋರ್ಟ್ ಅಗುಡಾ ಜೈಲ್​ ಮ್ಯೂಸಿಯಂ, ಗೋವಾ ಮೆಡಿಕಲ್​ ಕಾಲೇಜಿನ ಸೂಪರ್ ಸ್ಪೆಶಾಲಿಟಿ ಬ್ಲಾಕ್​, ದಕ್ಷಿಣ ಗೋವಾ ಜಿಲ್ಲಾ ಹೊಸದಾದ ಆಸ್ಪತ್ರೆ, ಮೋಪಾ ಏರ್​ಪೋರ್ಟ್​ನಲ್ಲಿ  ನಿರ್ಮಾಣವಾಗಿರುವ  ವಿಮಾನಯಾನ ಕೌಶಲಾಭಿವೃದ್ಧಿ ಕೇಂದ್ರ ಮತ್ತು ಮಾರ್ಗೋದ ಡಬೋಲಿಮ್​ ನವೇಲಿಮ್​​ನಲ್ಲಿ ​ಗ್ಯಾಸ್ ಇನ್ಸುಲೇಟೆಡ್ ಸಬ್ ಸ್ಟೇಷಬನ್​ಗಳನ್ನು ಮೋದಿಯವರು ಉದ್ಘಾಟಿಸಿದ್ದಾರೆ.

ಇದನ್ನೂ ಓದಿ: ಭಾರೀ ಮೊತ್ತಕ್ಕೆ ಹರಾಜಾದ ಸೂಪರ್​ ಮ್ಯಾನ್​ #1 ಕಾಮಿಕ್​ ಪುಸ್ತಕ: ಇಲ್ಲಿದೆ ಮಾಹಿತಿ

ಗೋವಾ ವಿಮೋಚನಾ ದಿನಾಚರಣೆಯಲ್ಲಿ ಇಂದು ಪ್ರಧಾನಿ ಮೋದಿ ಭಾಗಿ; 650 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಚಾಲನೆ

Published On - 4:55 pm, Sun, 19 December 21

Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ