AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Goa Liberation Day 2021: ಗೋವಾ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ಮೋದಿ ಪುಷ್ಪನಮನ

ಗೋವಾ ವಿಮೋಚನಾ ದಿನ (ಆಪರೇಶನ್​ ವಿಜಯ್​)ವಾದ ಇಂದು ಪ್ರಧಾನಿ ನರೇಂದ್ರ ಮೋದಿ ಐದು ಯೋಜನೆಗಳಿಗೆ ವರ್ಚ್ಯುವಲ್ ಆಗಿ ಚಾಲನೆ ನೀಡಿದ್ದಾರೆ.

Goa Liberation Day 2021: ಗೋವಾ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ಮೋದಿ ಪುಷ್ಪನಮನ
ಪ್ರಧಾನಿ ಮೋದಿ
TV9 Web
| Updated By: Lakshmi Hegde|

Updated on:Dec 19, 2021 | 4:56 PM

Share

ಗೋವಾ ವಿಮೋಚನಾ ದಿನ(Goa Liberation Day 2021) ಕಾರ್ಯಕ್ರಮದಲ್ಲಿ ಇಂದು ಭಾಗಿಯಾಗಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಹಾಗೇ, ಗೋವಾ ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರ ಸ್ಮಾರಕಕ್ಕೆ ಆಜಾದ್ ಮೈದಾನಲ್ಲಿ ಪುಷ್ಪನಮನ ಸಲ್ಲಿಸಿದರು.  1961ರ ಡಿಸೆಂಬರ್​ 19ರಂದು ಗೋವಾ ಪೋರ್ಚುಗೀಸರ ಆಡಳಿತದಿಂದ ಮುಕ್ತವಾಗಿದೆ. ಹೀಗಾಗಿ ಇಲ್ಲಿ ಪ್ರತಿವರ್ಷವೂ ಡಿಸೆಂಬರ್​ 19ರಂದು ವಿಮೋಚನಾ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ 60ನೇ ವರ್ಷದ ಸ್ವಾತಂತ್ರ್ಯ ದಿನ ನಡೆಯುತ್ತಿದ್ದು, ಮಧ್ಯಾಹ್ನದ ಹೊತ್ತಿಗೆ ಪ್ರಧಾಗಿ ಮೋದಿ ಗೋವಾ ತಲುಪಿ, ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.  ಮುಂದಿನ ವರ್ಷ ನಡೆಯಲಿರುವ ಗೋವಾ ವಿಧಾನಸಭೆ ಚುನಾವಣೆ (Goa Assembly Election 2022) ದೃಷ್ಟಿಯಿಂದ, ಪ್ರಧಾನಿ ಮೋದಿಯವರ ಈ ಭೇಟಿ ಮಹತ್ವದ್ದಾಗಿದೆ.

ಇಂದು ಮಧ್ಯಾಹ್ನ 1.30ರ ಹೊತ್ತಿಗೆ ತಲುಪಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬರಮಾಡಿಕೊಂಡರು. ಅಲ್ಲಿಂದಲೇ ಪಣಜಿಯ ಆಜಾದ್ ಮೈದಾನಕ್ಕೆ ತೆರಳಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಹುತಾತ್ಮರಾದವರಿಗೆ ಗೌರವ ಸಲ್ಲಿಸಿದರು. ಅಲ್ಲಿಂದ ಮಿರಾಮರ್ ಬೀಚ್​​ಗೆ ತೆರಳಿ, ಸೇಲ್ ಪರೇಡ್​ ಮತ್ತು ಫ್ಲೈಪಾಸ್ಟ್ (ಏರ್​ಕ್ರಾಫ್ಟ್ ಗೌರವಾನ್ವಿತ ಹಾರಾಟ) ಗೌರವ ಪಡೆದರು. ಅಲ್ಲಿಂದ, ಗೋವಾ ವಿಮೋಚನಾ ದಿನದ ಮುಖ್ಯ ಕಾರ್ಯಕ್ರಮದಲ್ಲಿ ಭಾಗವಹಿಸಲು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ಸ್ಟೇಡಿಯಂಗೆ ತೆರಳಿದ್ದಾರೆ.   ಇಲ್ಲಿ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದರು. ಹಾಗೇ, ನಬಾರ್ಡ್​, ಎನ್​ಜಿಒಗಳ ಸಿಬ್ಬಂದಿಗೆ ಪ್ರಶಸ್ತಿ ಪುರಸ್ಕಾರ ಮಾಡಿದರು.

ಐದು ಯೋಜನೆಗಳಿಗೆ ಚಾಲನೆ ಹಾಗೇ, ಗೋವಾ ವಿಮೋಚನಾ ದಿನ (ಆಪರೇಶನ್​ ವಿಜಯ್​)ವಾದ ಇಂದು ಪ್ರಧಾನಿ ನರೇಂದ್ರ ಮೋದಿ ಐದು ಯೋಜನೆಗಳಿಗೆ ವರ್ಚ್ಯುವಲ್ ಆಗಿ ಚಾಲನೆ ನೀಡಿದ್ದಾರೆ. ನವೀಕರಿಸಲಾದ ಫೋರ್ಟ್ ಅಗುಡಾ ಜೈಲ್​ ಮ್ಯೂಸಿಯಂ, ಗೋವಾ ಮೆಡಿಕಲ್​ ಕಾಲೇಜಿನ ಸೂಪರ್ ಸ್ಪೆಶಾಲಿಟಿ ಬ್ಲಾಕ್​, ದಕ್ಷಿಣ ಗೋವಾ ಜಿಲ್ಲಾ ಹೊಸದಾದ ಆಸ್ಪತ್ರೆ, ಮೋಪಾ ಏರ್​ಪೋರ್ಟ್​ನಲ್ಲಿ  ನಿರ್ಮಾಣವಾಗಿರುವ  ವಿಮಾನಯಾನ ಕೌಶಲಾಭಿವೃದ್ಧಿ ಕೇಂದ್ರ ಮತ್ತು ಮಾರ್ಗೋದ ಡಬೋಲಿಮ್​ ನವೇಲಿಮ್​​ನಲ್ಲಿ ​ಗ್ಯಾಸ್ ಇನ್ಸುಲೇಟೆಡ್ ಸಬ್ ಸ್ಟೇಷಬನ್​ಗಳನ್ನು ಮೋದಿಯವರು ಉದ್ಘಾಟಿಸಿದ್ದಾರೆ.

ಇದನ್ನೂ ಓದಿ: ಭಾರೀ ಮೊತ್ತಕ್ಕೆ ಹರಾಜಾದ ಸೂಪರ್​ ಮ್ಯಾನ್​ #1 ಕಾಮಿಕ್​ ಪುಸ್ತಕ: ಇಲ್ಲಿದೆ ಮಾಹಿತಿ

ಗೋವಾ ವಿಮೋಚನಾ ದಿನಾಚರಣೆಯಲ್ಲಿ ಇಂದು ಪ್ರಧಾನಿ ಮೋದಿ ಭಾಗಿ; 650 ಕೋಟಿ ರೂ. ವೆಚ್ಚದ ಯೋಜನೆಗಳಿಗೆ ಚಾಲನೆ

Published On - 4:55 pm, Sun, 19 December 21

ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಲಕ್ಷಾಂತರ ರೂ ಮೌಲ್ಯದ ಟ್ರ್ಯಾಕ್ಟರ್ ಬೆಂಕಿಗಾಹುತಿ: ಕಣ್ಣೀರಿಟ್ಟ ರೈತ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಮಹಾನಟಿ ವಿನ್ನರ್ ವಂಶಿ ಲವ್ ಕೇಸ್: ಎಲ್ಲವನ್ನೂ ವಿವರಿಸಿದ ನಟಿ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಕಬ್ಬು ಬೆಳೆಗಾರರನ್ನು ಬಿಜೆಪಿ ಪ್ರಚೋದಿಸುತ್ತಿದೆ; ಈಶ್ವರ ಖಂಡ್ರೆ ಆರೋಪ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
ಬಿಗ್ ಬಾಸ್ ಆಟದಲ್ಲಿ ರಘು ಭುಜಬಲಕ್ಕೆ ಹೆದರಿ ಕೈ ಮುಗಿದ ಕಾಕ್ರೋಚ್ ಸುಧಿ
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
‘ಮಾರ್ನಮಿ’ ಟ್ರೈಲರ್ ಲಾಂಚ್​​ನಲ್ಲಿ ಚೈತ್ರಾ ಆಚಾರ್ ಕಾಲೆಳೆದ ಕಿಚ್ಚ ಸುದೀಪ್
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ಕಬ್ಬಿನ ಜ್ವಾಲೆ: ಕಬ್ಬು ತುಂಬಿದ ಟ್ರಾಕ್ಟರ್​ಗೆ ಬೆಂಕಿ ಹಚ್ಚಿ ರೈತರು ಆಕ್ರೋಶ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ರೋಹಿತ್ ಶರ್ಮಾರ ವಿಶ್ವ ದಾಖಲೆಯ ಇನ್ನಿಂಗ್ಸ್​ಗೆ ಭರ್ತಿ 11 ವರ್ಷ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ಬಿಗ್​​ಬಾಸ್: ಗಿಲ್ಲಿ-ರಕ್ಷಿತಾ ತಂತ್ರ-ಕುತಂತ್ರಕ್ಕೆ ಬೆಂಕಿಯಾದ ಅಶ್ವಿನಿ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ರೈಸಿಂಗ್ ಸ್ಟಾರ್ ಏಷ್ಯಾಕಪ್; ಕತಾರ್​ಗೆ ಹಾರಿದ ಭಾರತ ಯುವ ಪಡೆ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ
ಇಸ್ಲಾಂ ಧರ್ಮಕ್ಕೆ ಕಳಂಕ ತರಬೇಡಿ; ಇಮಾಮ್ ಉಮರ್ ಅಹ್ಮದ್ ಇಲ್ಯಾಸಿ ಮನವಿ