AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿಯ ಕೃಷ್ಣ ಪ್ರಜ್ಞಾ, ಸನಾತನ ಧರ್ಮ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ

ಇಟಲಿಯ ಸನಾತನ ಧರ್ಮ ಸಂಘ ಸೇರಿದಂತೆ ವಿವಿಧ ಹಿಂದೂ ಒಕ್ಕೂಟದ ಪ್ರತಿನಿಧಿಗಳನ್ನು ನರೇಂದ್ರ ಮೋದಿ ಭೇಟಿ ಮಾಡಿ ಸಂವಾದ ನಡೆಸಿದರು. ಇಟಲಿಯಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರಚಾರ ಮಾಡುವಲ್ಲಿ ಅವರು ವಹಿಸಿದ ಪಾತ್ರವನ್ನು ಪ್ರಧಾನಮಂತ್ರಿ ಶ್ಲಾಘಿಸಿದರು.

ಇಟಲಿಯ ಕೃಷ್ಣ ಪ್ರಜ್ಞಾ, ಸನಾತನ ಧರ್ಮ ಸಂಘದ ಪ್ರತಿನಿಧಿಗಳನ್ನು ಭೇಟಿ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ಮೋದಿ
TV9 Web
| Updated By: ganapathi bhat|

Updated on: Oct 30, 2021 | 3:21 PM

Share

ದೆಹಲಿ: ಇಟಲಿ ಪ್ರವಾಸದಲ್ಲಿ ಇರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಶ್ವಯುದ್ಧಗಳಲ್ಲಿ ಇಟಲಿಯಲ್ಲಿ ಹೋರಾಡಿದ ಭಾರತೀಯ ಸೈನಿಕರ ಸ್ಮರಣಾರ್ಥ ಸಿಖ್ ಸಮುದಾಯ ಮತ್ತು ವಿವಿಧ ಸಂಸ್ಥೆಗಳ ಪ್ರತಿನಿಧಿಗಳನ್ನು ಭೇಟಿ ಮಾಡಿದರು. ಮೊದಲ ವಿಶ್ವ ಯುದ್ಧ ಮತ್ತು ಎರಡನೇ ವಿಶ್ವ ಯುದ್ಧದಲ್ಲಿ ಇಟಲಿಯಲ್ಲಿ ಹೋರಾಡಿದ ಸಿಖ್ ಸಮುದಾಯ ಮತ್ತು ಇತರೆ ಸಂಸ್ಥೆಗಳನ್ನೊಳಗೊಂಡ ವಿವಿಧ ಸಂಘಟನೆಗಳ ಸಮುದಾಯದ ಪ್ರತಿನಿಧಿಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಭೇಟಿ ಮಾಡಿ ಸಂವಾದ ನಡೆಸಿದರು. ಈ ಯುದ್ಧಗಳಲ್ಲಿ ಭಾರತೀಯ ಸೈನಿಕರ ಶೌರ್ಯಕ್ಕೆ ಪ್ರಧಾನಮಂತ್ರಿ ಗೌರವ ಸಮರ್ಪಿಸಿದರು.

ಇಟಲಿಯ ಕೃಷ್ಣ ಪ್ರಜ್ಞಾ ಸಭೆಯ [ಇಸ್ಕಾನ್] ಪ್ರತಿನಿಧಿಗಳನ್ನು ಭೇಟಿ ಮಾಡಿದ ನರೇಂದ್ರ ಮೋದಿ ಕೃಷ್ಣ ಪ್ರಜ್ಞಾ ಸಭೆ [ಇಸ್ಕಾನ್] ನ ಪ್ರತಿನಿಧಿಗಳು ಒಳಗೊಂಡಂತೆ ವಿವಿಧ ಸಂಘಟನೆಗಳ ಪ್ರಮುಖರನ್ನು ಭೇಟಿ ಮಾಡಿ ಸಂವಾದ ನಡೆಸಿದರು. ಇಟಲಿಯಲ್ಲಿ ಭಗವದ್ಗೀತೆಯ ಸಾರವನ್ನು ಪಸರಿಸುವುದು ಸೇರಿದಂತೆ ಹಲವಾರು ಸಾಮಾಜಿಕ ಚಟುವಟಿಕೆಗಳಲ್ಲಿ ಅವರ ಕೊಡುಗೆಯನ್ನು ಪ್ರಧಾನಮಂತ್ರಿ ಶ್ಲಾಘಿಸಿದರು.

ಇಟಲಿಯ ಸನಾತನ ಧರ್ಮ ಸಂಘ ಸೇರಿದಂತೆ ವಿವಿಧ ಹಿಂದೂ ಒಕ್ಕೂಟದ ಪ್ರತಿನಿಧಿಗಳನ್ನು ನರೇಂದ್ರ ಮೋದಿ ಭೇಟಿ ಮಾಡಿ ಸಂವಾದ ನಡೆಸಿದರು. ಇಟಲಿಯಲ್ಲಿ ಭಾರತೀಯ ಸಂಸ್ಕೃತಿಯನ್ನು ಪ್ರಚಾರ ಮಾಡುವಲ್ಲಿ ಅವರು ವಹಿಸಿದ ಪಾತ್ರವನ್ನು ಪ್ರಧಾನಮಂತ್ರಿ ಮೆಚ್ಚುಗೆ ವ್ಯಕ್ತಪಡಿಸಿದರು.

ವ್ಯಾಟಿಕನ್​ ಸಿಟಿಯಲ್ಲಿ ಪೋಪ್​ ಫ್ರಾನ್ಸಿಸ್​​ರನ್ನು ಭೇಟಿಯಾದ ಪ್ರಧಾನಿ ಮೋದಿ ರೋಮ್​ ಪ್ರವಾಸದಲ್ಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಇಂದು ವ್ಯಾಟಿಕನ್ ನಗರಕ್ಕೆ ತೆರಳಿ, ಅಲ್ಲಿ ಕ್ರೈಸ್ತರ ಪರಮೋಚ್ಛ ಧರ್ಮಗುರು (ಕ್ಯಾಥೋಲಿಕ್​ ಚರ್ಚ್​ ಮುಖ್ಯಸ್ಥ) ಪೋಪ್​ ಫ್ರಾನ್ಸಿಸ್​​ರನ್ನು ಭೇಟಿಯಾದರು. ಹಾಗೇ, ಭಾರತಕ್ಕೆ ಬರುವಂತೆ ಅವರಿಗೆ ಆಮಂತ್ರಣ ನೀಡಿದರು. ಇವರಿಬ್ಬರ ಮಧ್ಯೆ 20 ನಿಮಿಷಗಳ ಮಾತುಕತೆ ನಿಗದಿಯಾಗಿತ್ತು. ಆದರೆ ಸುಮಾರು 1 ತಾಸು ಚರ್ಚೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಇಂದು ಸಂಜೆ ನರೇಂದ್ರ ಮೋದಿಯವರು ಟರ್ಮೆ ಡಿ ಡಿಯೊಕ್ಲೆಜಿಯಾನೊಗೆ ತೆರಳಲಿದ್ದಾರೆ. ಅದಾದ ಬಳಿಕ ಜಿ20 ನಾಯಕರೊಂದಿಗೆ ಔತಣಕೂಟ ನಡೆಯಲಿದೆ. ಜಿ20 ನಾಯಕರೊಂದಿಗೆ ನರೇಂದ್ರ ಮೋದಿ ಕೊವಿಡ್​ 19 ಸಾಂಕ್ರಾಮಿ, ಆರ್ಥಿಕ ಪರಿಸ್ಥಿತಿ, ಸುಸ್ಥಿರ ಅಭಿವೃದ್ಧಿ, ಹವಾಮಾನ ಬದಲಾವಣೆ ಮತ್ತಿತರ ವಿಚಾರಗಳ ಬಗ್ಗೆ ಮಾತನಾಡಲಿದ್ದಾರೆ. ಹಾಗೇ, ಫ್ರೆಂಚ್​ ಅಧ್ಯಕ್ಷ ಎಮ್ಯಾನುಯೆಲ್​ ಮ್ಯಾಕ್ರನ್​​ ಜತೆ ಸಭೆ ನಡೆಸಲಿದ್ದು, ಇಂಡೋನೇಷ್ಯಾದ ಅಧ್ಯಕ್ಷ ಜೊಕೊ ವಿಡೋಡೊರನ್ನು ಭೇಟಿಯಾಗುವರು. ಅದರೊಂದಿಗೆ ಸಿಂಗಪುರ ಪ್ರಧಾನಿ ಲೀ ಹೊಸೈನ್​​ ಲೂಂಗ್​​ರನ್ನು ಭೇಟಿಯಾಗುವ ನಿರೀಕ್ಷೆ ಇದೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: Video: ರೋಮ್​​ನಲ್ಲಿ ಶಿವ ಸ್ತೋತ್ರ ಪಠಿಸಿದ ಯುವತಿಯೆದುರು ಕೈ ಮುಗಿದು ನಿಂತ ಪ್ರಧಾನಿ ಮೋದಿ; ಕೇಮ್​ ಚೋ ಎಂಬ ಪ್ರಶ್ನೆಗೆ ಸೂಪರ್​ ಉತ್ತರ

ಇದನ್ನೂ ಓದಿ: G20 Summit: ಇಟಾಲಿಯನ್ ಭಾಷೆಯಲ್ಲಿ ಟ್ವೀಟ್ ಮಾಡುವ ಮೂಲಕ ಗಮನ ಸೆಳೆದ ಪ್ರಧಾನಿ ನರೇಂದ್ರ ಮೋದಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ